ವಾಡಿ: ಬಂಜಾರಾ (ಲಂಬಾಣಿ) ಸೇವಾ ಸಂಘದ ವತಿಯಿಂದ ಫೆ.೧೫ ರಂದು ವಾಡಿ ಪಟ್ಟಣದಲ್ಲಿ ಸಂತ ಶ್ರೀಸೇವಾಲಾಲ ಮಹಾರಾಜ ಅವರ ೨೮೨ನೇ ಜನ್ಮೋತ್ಸವ ಆಚರಿಸಲಾಗುತ್ತಿದೆ. ಅಂದು ಬೆಳಗ್ಗೆ ೯:೩೦ಕ್ಕೆ ಸೇವಾಲಾಲ ನಗರ ತಾಂಡಾದ ಶ್ರೀಸೇವಾಲಾಲ ಹಾಗೂ ಜಗದಂಭಾ ದೇವಸ್ಥಾನದಲ್ಲಿ ಪಲ್ಲಕ್ಕಿ ಉತ್ಸವ, ೧೧:೦೦ಕ್ಕೆ ಸಾಂಪ್ರದಾಯಿಕ ಹೋಮ ಹವನ ನಡೆಯಲಿದೆ. ಸಂಸದ ಡಾ.ಉಮೇಶ ಜಾಧವ ಬಹಿರಂಗ ಸಭೆ ಉದ್ಘಾಟಿಸುವರು. ಮಾಜಿ ಶಾಸಕ ವಾಲ್ಮೀಕಿ ನಾಯಕ ಅಧ್ಯಕ್ಷತೆ ವಹಿಸುವರು.
ಇದನ್ನೂ ಸಹ ಓದಿ: ಶಹಾಬಾದ್: ವಿರೋಧ ಪಕ್ಷದ ನಾಯಕರಾಗಿ ಖರ್ಗೆ ಆಯ್ಕೆ: ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಂಭ್ರಮ
ಮುಗುಳನಾಗಾಂವ ಯಲ್ಲಾಲಿಂಗ ಪುಣ್ಯಾಶ್ರಮದ ಶ್ರೀಜೇಮಸಿಂಗ್ ಮಹಾರಾಜ, ಚಿತ್ತಾಪುರ ಕಂಬಳೇಶ್ವರ ಮಠದ ಶ್ರೀಸೋಮಶೇಖರ ಸ್ವಾಮೀಜಿ, ಹಳಕರ್ಟಿ ಕಟ್ಟಿಮನಿ ಹಿರೇಮಠದ ಶ್ರೀಮುನಿಂದ್ರ ಸ್ವಾಮೀಜಿ, ಗೊಬ್ಬೂರ ಮಠದ ಶ್ರೀಬಳಿರಾಮ ಮಹಾರಾಜ, ಹಳಕರ್ಟಿ ದರ್ಗಾದ ಅಬುತುರಾಬ ಶಹಾ ಖ್ವಾದ್ರಿ, ರೆಸ್ಟ್ಕ್ಯಾಂಪ್ ತಾಂಡಾದ ಶ್ರೀಠಾಕೂರ ಮಹಾರಾಜ ಸಾನಿಧ್ಯ ವಹಿಸುವರು.
ಇದನ್ನೂ ಸಹ ಓದಿ: ಶಹಾಬಾದ್: ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ
ರಾಜ್ಯ ದ್ವಿದಳ ದಾನ್ಯ ನಿಗಮದ ಅಧ್ಯಕ್ಷ ಲಿಂಗಾರೆಡ್ಡಿಗೌಡ ಬಾಸರೆಡ್ಡಿ, ಬಂಜಾರಾ ಸೇವಾ ಸಂಘದ ರಾಜ್ಯಾಧ್ಯಕ್ಷ ರಾಮಚಂದ್ರ ಜಾಧವ, ಎಸಿಸಿ ಕಾರ್ಮಿಕ ಸಂಘದ ಅಧ್ಯಕ್ಷ ಶಿವಾಜಿ ಕೋಮಟೆ, ಎಸಿಸಿ ಘಟಕ ಮುಖ್ಯಸ್ಥ ಸೀತಾರಾಮುಲು ಸಿ.ಎಚ್, ಜಿಪಂ ಸದಸ್ಯ ಅರವಿಂದ ಚವ್ಹಾಣ, ಪುರಸಭೆ ಅಧ್ಯಕ್ಷೆ ಝರೀನಾಬೇಗ ಅತಿಥಿಗಳಾಗಿ ಪಾಲ್ಗೊಳ್ಳುವರು. ಬೈಕ್ ರ್ಯಾಲಿ ಹಾಗೂ ಮೆರವಣಿಗೆ ರದ್ಧುಪಡಿಸಲಾಗಿದೆ ಎಂದು ಬಂಜಾರಾ ಸಮಾಜದ ಅಧ್ಯಕ್ಷ ಶಿವರಾಮ ಪವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…