ಬಿಸಿ ಬಿಸಿ ಸುದ್ದಿ

ಪಿಎಸ್‌ಐ ಮೇಲೆ ಕ್ರಮಕ್ಕೆ ಆಗ್ರಹಿಸಿ ಕೊಡೇಕಲ್ ಪೊಲೀಸ್ ಠಾಣೆ ಎದುರು ಆರ್.ವಿ.ಎನ್ ಧರಣಿ

ಸುರಪುರ: ಕಾಂಗ್ರೇಸ್ ಪಕ್ಷದ ಕಾರ್ಯಕರ್ತರ ಮೇಲೆ ಸುಳ್ಳು ಮೊಕದ್ದಮೆ ದಾಖಲಿಸುವುದು ಹಾಗು ವಿನಾಕಾರಣ ಹಲ್ಲೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಕೊಡೇಕಲ್ ಪೊಲೀಸ್ ಠಾಣೆ ಎದುರು ಧರಣಿ ಆರಂಭಿಸಿದರು.

ರವಿವಾರ ಮದ್ಹ್ಯಾನ ಹುಣಸಗಿ ತಾಲೂಕಿನ ಕೊಡೇಕಲ್ ಪೊಲೀಸ್ ಠಾಣೆ ಎದುರು ಧರಣಿಗೆ ಕುಳಿತ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಮಾತನಾಡಿ,ಇಲ್ಲಿಯ ಪಿಎಸ್‌ಐ ಠಾಣೆಗೆ ಬಂದಾಗಿನಿಂದಲೂ ಬಿಜೆಪಿಯವರ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ,ಕಾಂಗ್ರೆಸ್ ಕಾರ್ಯಕರ್ತರ ಮೇಲೆ ವಿನಾಕಾರಣ ಹಲ್ಲೆ ನಡೆಸುವುದು ಹಾಗು ಕೇಸು ದಾಖಲಿಸುವ ಮೂಲಕ ಕರ್ತವ್ಯ ಲೋಪ ಎಸಗುತ್ತಿದ್ದಾರೆ,ನಮ್ಮ ಬೆಂಬಲಿಗರ ಮೇಲೆ ಹಲ್ಲೆ ನಡೆದರೂ ಹಲ್ಲೆ ನಡೆಸಿದವರ ಮೇಲೆ ಕ್ರಮ ಕೈಗೊಳ್ಳದೆ ಹಲ್ಲೆಗೊಳಗಾದವರ ಮೇಲೆಯೇ ಕೇಸು ದಾಖಲಿಸುವ ಮೂಲಕ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ,ಈ ಹಿಂದೆಯೂ ಇದೇ ರೀತಿ ಕರ್ತವ್ಯ ಲೋಪ ಎಸಗಿದ್ದು ಕ್ರಮಕ್ಕೆ ಆಗ್ರಹಿಸಲಾಗಿತ್ತು.

ಆದರೆ ಮೇಲಾಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ.ಈಗ ಮತ್ತೆ ನಮ್ಮ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿ ದೂರು ದಾಖಲಿಸಿದ್ದಾರೆ. ಇದನ್ನು ಉಗ್ರವಾಗಿ ಖಂಡಿಸುತ್ತೇವೆ ಹಾಗು ಇವರ ಮೇಲೆ ಕಠಿಣ ಕ್ರಮ ಕೈಗೊಳ್ಳುವ ವರೆಗೂ ಧರಣಿಯನ್ನು ನಡೆಸುವುದಾಗಿ ಆಕ್ರೋಶ ವ್ಯಕ್ತಪಡಿಸಿದರು.

ರಾತ್ರಿಯ ವರೆಗೂ ಧರಣಿ ಮುಂದುವರೆದಿದ್ದು ಪಿಎಸ್‌ಐ ಮೇಲೆ ಕ್ರಮ ಕೈಗೊಳ್ಳುವ ವರೆಗೂ ಧರಣಿ ಮುಂದುವರೆಸುವುದಾಗಿ ಪಟ್ಟು ಹಿಡಿದಿದ್ದಾರೆ.ಧರಣಿಯಲ್ಲಿ ಮುಖಂಡರಾದ ರಾಜಾ ವೇಣುಗೋಪಾಲ ನಾಯಕ ರಾಜಾ ರೂಪಕುಮಾರ ನಾಯಕ ರಾಜಾ ಸಂತೋಷ ನಾಯಕ ರಾಜಾ ಕುಮಾರ ನಾಯಕ ರಾಜಾ ಸುಶಾಂತ ನಾಯಕ ಆನಂದ ಲಕ್ಷ್ಮೀಪುರ ಹಣಮಂತ ಕಟ್ಟಿಮನಿ ಮಹ್ಮದ ಮೌಲಾ ಸೌದಾಗರ್ ದಾನಪ್ಪ ಕಡಿಮನಿ ಮಲ್ಲು ಬಿಲ್ಲವ್ ಶರಣು ಕಲಬುರ್ಗಿ ಹಾಗು ಅನೇಕ ಜನ ಮಹಿಳೆಯರು ಸೇರಿದಂತೆ ನೂರಾರು ಜನರಿದ್ದಾರೆ.

emedialine

Recent Posts

ಪ್ರಾಧ್ಯಾಪಕಿ ಡಾ.ಜಯಶ್ರೀ ಅಗರಖೇಡ್ ಗೆ ಪೆÇ್ರ.ಸತೀಶ್ ಧವನ್ ಪ್ರಶಸ್ತಿ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಪೂಜ್ಯ ದೊಡ್ಡಪ್ಪ ಅಪ್ಪ ಇಂಜಿನಿಯರಿಂಗ ಕಾಲೇಜಿನ ಕಂಪ್ಯೂಟರ್ ಸಾಯಿನ್ಸ್ ಇಂಜಿನಿಯರಿಂಗ (ಸಿಎಸ್‍ಇ) ವಿಭಾಗದ…

2 hours ago

ರಾಜ್ಯಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಎರಡು ಪದಕಗೆದ್ದ ಲೋಕೇಶ್ ಪೂಜಾರ್

ಕಲಬುರಗಿ: ರಾಜ್ಯಮಟ್ಟದ ಸರ್ಕಾರಿ ನೌಕರರಕ್ರೀಡಾಕೂಟದಈಜು ಸ್ಪರ್ಧೆಯಲ್ಲಿ ಕಲಬುರಗಿಯ ವಿಭಾಗೀಯಆಹಾರ ಪ್ರಯೋಗಾಲಯದ ಹಿರಿಯಆಹಾರ ವಿಶ್ಲೇಷಣಅಧಿಕಾರಿ ಲೋಕೇಶ್ ಪೂಜಾರ್‍ಅವರುಉತ್ತಮ ಪ್ರದರ್ಶನ ನೀಡಿಒಂದು ಬಂಗಾರ…

2 hours ago

ತೊಗರಿ ಬೆಳೆಯಲ್ಲಿ ಗೊಣ್ಣೆ ಹುಳದ ಭಾದೆ ಹತೋಟಿಗೆ ಡಾ. ಮಲ್ಲಪ್ಪ ಅವರಿಂದ ಸಲಹೆ

ಕಲಬುರಗಿ: ತಾಲೂಕಿನಲ್ಲಿ ತೊಗರಿ ಬೆಳೆಗೆ ಅಲ್ಲಲ್ಲಿ ಗೊಣ್ಣೆ ಹುಳದ ಭಾದೆ ಕಂಡು ಬಂದಿದ್ದು ರೈತಾಪಿ ಜನರು ಹತೋಟಿಗೆ ಕೃಷಿ ವಿಜ್ಞಾನ…

2 hours ago

ನಾಗಾವಿ, ಕಾಳಗಿ ಸ್ಮಾರಕಗಳ ಸಂರಕ್ಷಣೆಗೆ ಕ್ರಮ; ಪ್ರವಾಸಿಗಳಿಗೆ ಸೌಲಭ್ಯ | ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ; ಜಿಲ್ಲೆಯ ನಾಗಾವಿ ಮತ್ತು ಕಾಳಗಿಯಲ್ಲಿರುವ ಐತಿಹಾಸಿಕ ಸ್ಮಾರಕಗಳನ್ನು ಸಂರಕ್ಷಿಸುವದರೊಂದಿಗೆ ಈ ಎರಡು ಸ್ಥಳಗಳನ್ನು ಪ್ರವಾಸೋದ್ಯಮ ದೃಷ್ಟಿಯಿಂದಲೂ ಅಭಿವೃದ್ಧಿ ಪಡಿಸಲು…

2 hours ago

ಸಂಗೊಳ್ಳಿ ರಾಯಣ್ಣನಿಗೆ ಅವಮಾನ – ಕಿಡಿಗೇಡಿಗಳ ಬಂಧನಕ್ಕೆ ತಿಪ್ಪಣ್ಣ ಕ್ಯಾತನಾಳ ಆಗ್ರಹ

ಶಹಪುರ: ದೇಶಾಭಿಮಾನಿ,ಸ್ವಾಭಿಮಾನಿ, ಕೆಚ್ಚೆದೆಯ ವೀರ ಸಂಗೊಳ್ಳಿ ರಾಯಣ್ಣನಿಗೆ ಅವಮಾನಿಸಿದ ಕಿಡಿಗೇಡಿಗಳನ್ನು ತಕ್ಷಣವೇ ಬಂಧಿಸಬೇಕು ಎಂದು ಶ್ರೀ ಕನಕದಾಸ ಶಿಕ್ಷಣ ಮತ್ತು…

3 hours ago

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಜ್ಯ ಘಟಕದ ಚುನಾವಣೆ 25ರಂದು

ಕಲಬುರಗಿ: ಆ. 25 ರಂದು ನಡೆಯಲಿರುವ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯ ಘಟಕದ 27 ಸ್ಥಾನಗಳಿಗೆ (…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420