ಪರಭಾಷಾ ಹಾವಳಿಯಿಂದ ಕನ್ನಡಕ್ಕೆ ಕುತ್ತು

ಕಲಬುರಗಿ: ಪರಭಾಷಾ ಹಾವಳಿಯಿಂದ ಕನ್ನಡ ಭಾಷೆಗೆ ಕುತ್ತು ಬರುತ್ತಿದೆ.ಕನ್ನಡ ಉಳಿವಿಗಾಗಿ ನಾವೇಲ್ಲರೂ ಶ್ರಮಿಸಬೇಕಾಗಿದೆ ಎಂದು ಹಿರಿಯ ಸಾಹಿತಿ ಸುಬ್ಬರಾವ್ ಕುಲಕರ್ಣಿ ಇಂದಿಲ್ಲಿ ಕರೆ ನೀಡಿದರು.

ಕನ್ನಡ ಸಾಹಿತ್ಯ ಪರಿಷತ್ ಕಲಬುರಗಿ ತಾಲೂಕು, ಉತ್ತರ ವಲಯ ಹಾಗೂ ದಕ್ಷಿಣ ವಲಯ ಸಂಯುಕ್ತಾಶ್ರಯದಲ್ಲಿ ಕನ್ನಡ ಭವನದಲ್ಲಿ ಹಮ್ಮಿಕೊಂಡಿದ್ದ ಕನ್ನಡ ಸಾಹಿತ್ಯ ಪರಿಷತ್ ನಡೆದು ಬಂದ ದಾರಿ ಉಪನ್ಯಾಸ ಹಾಗೂ ಪದಾಧಿಕಾರಿಗಳಿಗೆ ಪ್ರಮಾಣ ಪತ್ರ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.ಕನ್ನಡ ಭಾಷೆ ಶ್ರೀಮಂತವಾಗಿದೆ.ಸಾವಿರಾರು ವರ್ಷದ ಇತಿಹಾಸ ಹೊಂದಿರುವ ಕನ್ನಡ ಭಾಷೆ ಬಗ್ಗೆ ಎಲ್ಲರೂ ಅಭಿಮಾನ ಮೆರೆಯಬೇಕು ಎಂದು ಕರೆ ನೀಡಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಹಿರಿಯ ಹೋರಾಗಾರರಾದ ಲಕ್ಷ್ಮಣ ದಸ್ತಿ ಮಾತನಾಡಿ ಕನ್ನಡ ಹುಟ್ಟಿ ಬೆಳೆದದ್ದು ನಮ್ಮ ಕಲಬುರ್ಗಿಯಲ್ಲಿ ಎಂಬುದು ಹೆಮ್ಮೆಯ ವಿಚಾರವಾಗಿದೆ.ಈ ಭಾಗ ಕನ್ನಡ ಚಟುವಟಿಕೆಗಳ ತವರುರಾಗಿದೆ.ಕನ್ನಡ ಸಾಹಿತ್ಯ ಪರಿಷತ್ ಕೇವಲ ಸಾಹಿತ್ಯಕ್ಕೆ ಸೀಮಿತವಾಗದೆ ಅನೇಕ ರೀತಿಯ ಸಕ್ರೀಯವಾಗಿ ನಾಡು,ನುಡಿ, ಹಾಗೂ ನೆಲ ಜಲ ಮತ್ತು ಅಭಿವೃದ್ಧಿ ವಿಷಯದಲ್ಲಿ ಕೆಲಸ ಮಾಡಿದ್ದು ಶ್ಲಾಘನೀಯ ಎಂದರು.

ಉಪನ್ಯಾಸವನ್ನು ಡಾ.ವಿಜಯಕುಮಾರ ಪರುತೆ ನೀಡಿದರು.ಕರ್ನಾಟಕ ಅನುದಾನ ರಹಿತ ಶಾಲೆಗಳ ಒಕ್ಕೂಟದ ಅಧ್ಯಕ್ಷ ಸುನೀಲ್ ಹುಡುಗಿ ಮಾತನಾಡಿದರು.

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ವೀರಭದ್ರ ಸಿಂಪಿ ಅಧ್ಯಕ್ಷತೆ ವಹಿಸಿದ್ದರು.ಕಲಬುರಗಿ ತಾಲೂಕು ಅಧ್ಯಕ್ಷ ಸಿ.ಎಸ್.ಮಾಲಿಪಾಟೀಲ, ಕಲಬುರಗಿ ಉತ್ತರ ವಲಯದ ಅಧ್ಯಕ್ಷ ಲಿಂಗರಾಜ ಸಿರಗಾಪೂರ, ದಕ್ಷಿಣ ವಲಯದ ಅಧ್ಯಕ್ಷ ಅಪ್ಪಾರಾವ ಕುಲಕರ್ಣಿ, ಆನಂದಪ್ಪ ಮುಸಾವಳಿ, ದೌಲತಯರಾವ ಮಾಲಿಪಾಟೀಲ್ ವೇದಿಕೆ ಮೇಲೆ ಇದ್ದರು.ವಿವಿಧ ಘಟಕಗಳ ಪದಾಧಿಕಾರಿಗಳಿಗೆ ಇದೇ ಸಂದರ್ಭದಲ್ಲಿ ಪ್ರಮಾಣ ಪತ್ರ ವಿತರಿಸಲಾಯಿತು.

ಜಿ.ಜಿ.ವಣಿಕ್ಯಾಳ ನಿರೂಪಿಸಿದರು.ಭಾನುಕುಮಾರ ಸ್ವಾಗತಿಸಿದರು, ಪ್ರಸಾದ್ ವಂದಿಸಿದರು.ಅಶೋಕ ಕಮಲಾಪುರ, ಆನಂದ ನಂದುರಕರ, ಬಿ.ಜಯಸಿಂಗ,ಸಾಜೀದ ಅಲಿ ರಂಜೋಳ್ಳ್ವಿ, ದಾಸಿಮಯ್ಯ ವಡ್ಡನಕೇರಿ,ಸಾಲೋಮನ ದೀವಾಕರ, ಪ್ರಶಾಂತ ತಂಬೂರಿ,ಶಲಣು ಇಕ್ಕಳಕಿಮಠ,ಮಿರಾಜುದ್ದಿನ,ಭೀ

emedialine

Recent Posts

PDA ಕಾಲೇಜಿನಲ್ಲಿ ಸೆ. 13,14 ರಂದು ವಿಚಾರ ಸಂಕಿರಣ

ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಪೂಜ್ಯ ದೊಡ್ಡಪ್ಪ ಅಪ್ಪ ಇಂಜಿನಯರಿಂಗ ಕಾಲೇಜಿನಲ್ಲಿ ನಾಳೆಯಿಂದ ಎರಡುದಿನಗಳ ಕೃತಕ ಬುದ್ಧಿಮತ್ತೆ ಮತ್ತು ಯಂತ್ರ…

1 min ago

ಲಿಂಗಾಯತ ದೀಕ್ಷ ಪಂಚಮಸಾಲಿ ವಕೀಲರ ಪರಿಷತ್ತ ನೂತನ ಸಮಿತಿ ರಚನೆ

ಕಲಬುರಗಿ: ಲಿಂಗಾಯತ ದೀಕ್ಷ ಪಂಚಮಸಾಲಿ ವಕೀಲರ ಪರಿಷತ್ತಿನ ಸಭೆಯಲ್ಲಿ ಜಿಲ್ಲಾ ಸಮಿತಿ ರಚಿಸಲಾಯಿತು. ಈ ವೇಳೆಯಲ್ಲಿ ಜಿಲ್ಲಾ ಅಧ್ಯಕ್ಷರಾಗಿ ರವೀಂದ್ರ…

5 mins ago

ಕಲಬುರಗಿ: ಸೆ. 13 ರಿಂದ “ಪ್ರವಾದಿ ಮುಹಮ್ಮದ್(ಸ) ಮಹಾನ್ ಚಾರಿತ್ರ್ಯವಂತ”ರು ಅಭಿಯಾನ

ಕಲಬುರಗಿ: ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕ ರಾಜ್ಯ ಘಟಕದ ವತಿಯಿಂದ "ಪ್ರವಾದಿ ಮುಹಮ್ಮದ್(ಸ) ಮಹಾನ್ ಚಾರಿತ್ರ್ಯವಂತ" ಎಂಬ ಧ್ಯೇಯವಾಕ್ಯದಡಿ ರಾಜ್ಯವ್ಯಾಪಿ…

1 hour ago

ಅಜ್ಞಾನವೆಂಬ ಕತ್ತಲಿನಿಂದ ಜ್ಞಾನದ ಬೆಳಿಕಿನಡೆಗೆ ಕರೆದೊಯ್ಯುವ ಜ್ಯೋತಿಯೇ ಶಿಕ್ಷಕ

ಕಲಬುರಗಿ: ನಗರದ ಆಳಂದ ರಸ್ತೆಯಲ್ಲಿರುವ ಕೆ.ಹೆಚ್.ಬಿ ಗ್ರೀನ್ ಪಾರ್ಕ ಬಡಾವಣೆಯಲ್ಲಿ ಶಿಕ್ಷಕರ ದಿನಾಚರಣೆಯ ನಿಮಿತ್ತವಾಗಿ ಬುಧವಾರ ಗೆಳೆಯರ ಬಳಗದ ವತಿಯಿಂದ…

11 hours ago

ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಗಮನ ಸೆಳೆದ ಚೇತನ ಬಿ.ಕೋಬಾಳ್ ಸಂಗೀತ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಮತ್ತು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ( ಸಮಾಜ ಕಲ್ಯಾಣ ಇಲಾಖೆ…

20 hours ago

15ರಂದು ಮಾನವ ಸರಪಳಿ: ನಾಳೆ ಪೂರ್ವ ಭಾವಿ ಸಭೆ

ಶಹಾಬಾದ :ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆಪ್ಟೆಂಬರ್ 15ರಂದು ಮಾನವ ಸರಪಳಿ ಕಾರ್ಯಕ್ರಮ ಹಮ್ಮಿಕೊಳ್ಳುವ ಕುರಿತು ತಾಲೂಕಿನ ಪ್ರೌಢಶಾಲಾ ಮುಖ್ಯ…

21 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420