ಬಿಸಿ ಬಿಸಿ ಸುದ್ದಿ

ಯುವ ಸಬಲೀಕರಣ ನಿಗಮ ಸ್ಥಾಪನೆಗಾಗಿ ‘ಯುವ ಸರಪಳಿ

ಕಲಬುರಗಿ: ಯುವಜನರ ಸರ್ವತೋಮುಖ ಅಭಿವೃದ್ಧಿಗೆ ರಾಜ್ಯದಲ್ಲಿ ಯುವಜನ ಸಬಲೀಕರಣ ನಿಗಮ ಸ್ಥಾಪಿಸಬೇಕೆಂದು ಸರ್ಕಾರಕ್ಕೆ ಡಾ. ರಝಾಕ್ ಉಸ್ತಾದ್ ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದ ರಾಮ ಮಂದಿರ ವೃತ್ತದಲ್ಲಿ ಯುವ ಮುನ್ನಡೆ ತಂಡದ ಯುವಜನರು ನಿರ್ಮಿಸಿದ ‘ಯುವ ಸರಪಳಿ’ಗೆ ಡೊಳ್ಳು ಬಾರಿಸುವುದರ ಮೂಲಕ ಸಾಂಕೇತಿಕ ಚಾಲನೆ ನೀಡದರು.

ಹೈ.ಕ ಭಾಗದ ಯುವಜನರು ಇಂದು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಉದ್ಯೋಗ ಹುಡುಕಿ ಬೆಂಗಳೂರು, ಪುಣೆ, ಸೊಲ್ಲಾಪುರ, ಹೈದರಾಬಾದ್ ಮುಂಬೈನಂಥ ನಗರಗಳಿಗೆ ವಲಸೆ ಹೋಗುತ್ತಿದ್ದಾರೆ. ಯುವಜನರಲ್ಲಿ ಸಾಕಷ್ಟು ಪ್ರತಿಭೆ ಮತ್ತು ಸಾಮರ್ಥ್ಯವಿದ್ದಾಗಲೂ ಅವರಿಗೆ ಸಮರ್ಪಕ ಮಾರ್ಗದರ್ಶನದ ಕೊರತೆಯಿಂದ ಅವರ ಸಾಮರ್ಥ್ಯ ಪೋಲಾಗುತ್ತಿದೆ ಎಂದು ವಿಷಾಧಿಸಿದರು.

ರಾಜ್ಯ ಸರ್ಕಾರ ಯುವಜನ ಸಬಲೀಕರಣ ನಿಗಮ ಸ್ಥಾಪಿಸಬೇಕು. ಮತ್ತು ಸಬಲೀಕರಣದಲ್ಲಿ ಯುವಜನರಿಗೆ ಔದ್ಯೋಗಿಕ ತರಬೇತಿ ಮತ್ತು ಶಿಷ್ಯವೇತನಗಳನ್ನು ಕೊಡಬೇಕು. ಸರ್ಕಾರ ಇದಕ್ಕೆ ಸಮರ್ಪಕ ಬಜೆಟ್ ಕೂಡ ಮಂಡನೆ ಮಾಡಬೇಕು. ನಿಗಮ ಎನ್ನುವುದೊಂದು ಚಿಕ್ಕ ಹೆಜ್ಜೆ ಆದರೂ ಆ ಚಿಕ್ಕ ಹೆಜ್ಜೆಯೂ ದೃಢ ಹೆಜ್ಜೆ ಆಗಲಿ. ನಂತರ ಇಂತಹ ನೂರಾರು ಹೆಜ್ಜೆಗಳನ್ನು ಸರ್ಕಾರ ಯುವಜನರ ಹಿತದೃಷ್ಟಿಯಿಂದ ತೆಗೆದುಕೊಳ್ಳಬೇಕಿದೆ. ಆ ನಿಟ್ಟಿನಲ್ಲಿ ನಾನೂ ಸಹ ಯುವಾಂದೋಲನದ ಭಾಗವಾಗುತ್ತೇನೆ ಎಂದು ಈ ಸಂದರ್ಭದಲ್ಲಿ ಹೇಳಿದರು.

ಸಂವಾದ ಯುವ ಮುನ್ನಡೆ ತಂಡದ ಯುವಜನರು ಯುವಜ‌ನ ಸಬಲೀಕರಣ ನಿಗಮ ಸ್ಥಾಪಿಸುವಂತೆ ಘೋಷಣೆಗಳನ್ನು ಕೂಗಿದರು.

“ಏಳಿ ಕೇಳಿ ಯುವಜನರೇ ಏಳಿ, ನಮ್ಮ ಹಕ್ಕನ್ನು ಕೇಳುವ, ನಮ್ಮ ಆಯ್ಕೆಯ ಹೇಳುವ” ಎಂದು ಹಾಡುವ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು. ಯುವ ಸರಪಳಿ ನಂತರ ಡೊಳ್ಳು ಮತ್ತು ಹಲಿಗೆ ಬಾರಿಸುವುದರ ಮುಖಾಂತರ ಶ್ರೀ ಶಿವಶರಣ ಹರಳಯ್ಯ ಸಾಂಸ್ಕೃತಿಕ ಭವನದೆಡೆಗೆ ಮೆರವಣಿಗೆ ಮಾಡಿದರು.

‘ಯುವ ಸರಪಳಿ’ ನಿರ್ಮಾಣದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಯುವ ಮುನ್ನಡೆ ತಂಡದ ಸದಸ್ಯರು, ಸಂವಾದ ಸಂಸ್ಥೆಯ ಕಾರ್ಯಕರ್ತ ದೇವರಾಜ ಪಾಟೀಲ ಅವರು ಪಾಲ್ಗೊಂಡಿದ್ದರು.

emedialine

Recent Posts

ಜಪಾನ್ ವಿ. ವಿಯಲ್ಲಿ ಪ್ರಬಂಧ ಮಂಡನೆ ಮಾಡಿದ ಡಾ. ಪಾಸೋಡಿ

ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…

9 mins ago

ಕಲಬುರಗಿ: ಡೆಂಗ್ಯೂ, ಮಲೇರಿಯಾ ರೋಗಗಳನ್ನು ನಿಯಂತ್ರಿಸಲು ಬಾಲರಾಜ್ ಗುತ್ತೇದಾರ ಆಗ್ರಹ

ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…

17 mins ago

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

2 hours ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

2 hours ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

2 hours ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

3 hours ago