ಕಲಬುರಗಿ: ರಾಜ್ಯ ಸರಕಾರವು ನ್ಯಾ. ಎ.ಜೆ. ಸದಾಶಿವ ಆಯೋಗದ ವರದಿಯನ್ನು ಪ್ರಸಕ್ತ ಮಾರ್ಚ್‌ನಲ್ಲಿ ನಡೆಯಲಿರುವ ರಾಜ್ಯ ಬಜೆಟ್ ನಲ್ಲಿ ಘೋಷಣೆ ಮಾಡಿ, ವರದಿಯನ್ನು ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಲು ಮುಂದಾಗಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕನ್ನಡಿಗರ ಬಣ) ದ ಜಿಲ್ಲಾಧ್ಯಕ್ಷರಾದ ಆನಂದ ತೆಗನೂರ ಒತ್ತಾಯಿಸಿದರು.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಆಯೋಗವು ಒಳ ಮೀಸಲಾತಿ ಜಾರಿಗೊಳಿಸುವುದು, ರಾಜ್ಯ ಸರಕಾರದ ವ್ಯಾಪ್ತಿಯಲ್ಲಿಲ್ಲ. ಅಂತಿಮವಾಗಿ ಸಂಸತ್ತಿನ ಸಂವಿಧಾನದ ಪರಿಚ್ಛೇದ 341ರ (2) ರ ಪ್ರಕಾರ ಅನುಮೋದನೆಗೊಂಡು ಪರಿಚ್ಛೇದ 341(3) ರ ತಿದ್ದುಪಡಿಗಾಗಿ ವರದಿ ಶಿಫಾರಸು ಮಾಡುವಂತೆ ರಾಜ್ಯ ಸರಕಾರಕ್ಕೆ ಸೂಚನೆ ನೀಡಿದೆ.

ಇಲ್ಲಿಯವರೆಗೂ ಈ ವರದಿ ಶಾಸನ ಸಭೆಯಲ್ಲಿ ಮಂಡನೆಯಾಗಿಲ್ಲ. ಈ ವರದಿಯನ್ನು ಕೆಲ ಸಂಘಟನೆಗಳು ಅವೈಜ್ಞಾನಿಕ ಎಂದು ದೂರುತ್ತಿರುವುದು ಸರಿಯಲ್ಲ. ಆದರೆ, ಒಳ ಮೀಸಲಾತಿಗೆ ಆಗ್ರಹಿಸುತ್ತಿರುವ ಬಗ್ಗೆ ನಾವು ಯಾವುದೇ ಟೀಕೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ರಾಜ್ಯದ ಮುಖ್ಯಮಂತ್ರಿ ಮಾದಿಗ ಮಹಾಸಭಾಕ್ಕೆ ಕೊಟ್ಟಿರುವ ಮಾತಿನಂತೆ ನ್ಯಾ.ಎ.ಜೆ ಸದಾಶಿವ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೆ ತರುವಂತೆ, ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಬೇಕು.

ಪರಿಶಿಷ್ಟ ಜಾತಿಯಲ್ಲಿ ಮೊದಲು ಅಸ್ಪೃಶ್ಯ ಜಾತಿಗಳು ಮಾತ್ರ ಇದ್ದವು. ಬಳಿಕ ಲಂಬಾಣಿ, ಬಂಜಾರ, ಭೋವಿ (ವಡ್ಡರ), ಕೊರಮ, ಕೊರಚ ಜಾತಿಗಳು ಸೇರಿಕೊಂಡು ಅಸ್ಪೃಶ್ಯ ಜಾತಿಗಳ ಮೀಸಲಾತಿ ಸೌಲಭ್ಯವನ್ನು ಕಬಳಿಸುತ್ತಿವೆ. ಇದರಿಂದ ಅಸ್ಪೃಶ್ಯ ಜಾತಿಗಳಿಗೆ ಸೌಲಭ್ಯ ಹಂಚಿಕೆಯಲ್ಲಿ ತಾರತಮ್ಯ ಅನ್ಯಾಯವಾಗುತ್ತಿದೆ. ಸ್ಪರ್ಶ ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈ ಬಿಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

3 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

6 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

6 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

6 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

6 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

6 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420