ಕಲ್ಯಾಣ ಕರ್ನಾಟಕದ ಕಾವ್ಯಲೋಕ ವಿಶಿಷ್ಟವಾದುದು

ಕಲಬುರಗಿ: ಭಾಗವು ಶರಣ, ಸಂತ, ಸೂಫಿಗಳ ತವರೂರು ಆಗಿರುವಂತೆ ಸಾಹಿತ್ಯ-ಸಂಗೀತದ ನೆಲೆಬೀಡಾಗಿದೆ. ಶ್ರೀವಿಜಯ, ಜೇಡರ ದಾಸಿಮಯ್ಯ, ಕಡಕೋಳ ಮಡಿವಾಳಪ್ಪ ಅವರಂತಹ ಸಂತ ಮಹಾಂತರಿಂದ ಆರಂಭವಾಗಿ ಆಧುನಿಕ ಕನ್ನಡ ಸಾಹಿತ್ಯ ಚರಿತ್ರೆಯವರೆಗೂ ಕಲಬುರ್ಗಿ ತನ್ನ ಹಿರಿಮೆಯನ್ನು ಮೆರೆದಿದೆ ಎಂದು ಮಹಾಂತೇಶ್ವರ ವಿದ್ಯಾವರ್ಧಕ ಸಂಘದ ವೀರೇಂದ್ರ ಪಾಟೀಲ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಎಂ. ಎಸ್.ಗಣಾಚಾರಿ ಅವರು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತು ಏರ್ಪಡಿಸಿದ ಕಾಲೇಜು ಕವಿಗೋಷ್ಠಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ. ಎಂ. ನದಾಫ್ ಅವರು ಮಾತನಾಡಿ ಕಾವ್ಯದ ಹುಟ್ಟಿಗೆ ಸಂವೇದನೆ ಮೂಲವಾಗಿರುತ್ತದೆ. ಸಂತಸದಲ್ಲಿ ದುಃಖದಲ್ಲಿ ಹುಟ್ಟುವ ಕಾವ್ಯವೇ ಹೆಚ್ಚು ಪರಿಣಾಮಕಾರಿ ಆಗಿರುವುದಕ್ಕೆ ಅನೇಕ ಉದಾಹರಣೆಗಳು ಇವೆ ಎಂದರು.

ಇನ್ನೊಬ್ಬ ಮುಖ್ಯ ಅತಿಥಿ ಭಾರತ ಜ್ಞಾನ ವಿಜ್ಞಾನ ಸಮಿತಿ ಅಧ್ಯಕ್ಷ ಶಂಕರಪ್ಪ ಮಣೂರ ಅವರು ಮಾತನಾಡಿದರು. ಶಿವಲಿಂಗೇಶ್ವರ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಸಂಜಯಕುಮಾರ ದುಬೆ ಅವರು ಸಸಿಗೆ ನೀರೆರೆಯುವ ಮೂಲಕ ಕವಿಗೋಷ್ಠಿಯನ್ನು ಉದ್ಘಾಟಿಸಿದರು. ಡಾ. ರಾಜೇಶ್ ಅಲ್ಮೆಲ್ಕರ್ ರಾಹುಲ್ ಸಿಂಪಿ ಅತಿಥಿಯಾಗಿದ್ದರು.

ಪ್ರೇಮಿಗಳ ದಿನಾಚರಣೆ, ರೈತರ ಸಮಸ್ಯೆ, ದುಶ್ಚಟಗಳ ಪರಿಣಾಮ, ಸಾಮಾಜಿಕ ಜಾಲತಾಣ, ಕಲ್ಯಾಣ ಕರ್ನಾಟಕ ಮುಂತಾದ ವಿಷಯಗಳ ಕುರಿತು ಕವನಗಳನ್ನ

ಶ್ವೇತಾ ಹೊಸಮನಿ,ರಮೇಶ ಚಿಂಚೋಳಿ, ಸತೀಶ ವಾಲಿ, ರಾಜೇಶ ಆಲಮೇಲಕರ್, ಕೆ ನಾರಾಯಣ, ಅಶೋಕ ತಂಬಾಕೆ, ಚಂದ್ರು ಜಮ ಶೆಟ್ಟಿ, ಮಂಜುನಾಥ ಹದರಿ, ರಾಹುಲ್ ಸಿಂಗೆ  ಇವರು ಕವನ ವಾಚನ ಮಾಡಿದರು.

ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ರಾಹುಲ ಸಿಂಪಿ ಸ್ವಾಗತ ಗೀತೆ ಹಾಡಿದರು. ಕೆ. ನಾರಾಯಣ ಕಾರ್ಯಕ್ರಮ ನಿರ್ವಹಿಸಿದರು. ಅರುಣಕುಮಾರ್ ರಾಥೋಡ್ ವಂದಿಸಿದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

6 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

8 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

8 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

8 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

8 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420