ಬಿಸಿ ಬಿಸಿ ಸುದ್ದಿ

ತೊನಸನಹಳ್ಳಿ (ಎಸ್), ಹೊನಗುಂಟಾ ಗ್ರಾಪಂ: ಅಧ್ಯಕ್ಷ, ಉಪಾಧ್ಯಕ್ಷ ಅಧಿಕಾರ ಸ್ವೀಕಾರ

ಶಹಾಬಾದ: ತೊನಸನಹಳ್ಳಿ(ಎಸ್) ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಸುಶ್ಮಾ ಮರಲಿಂಗ ಗಂಗಭೋ, ಉಪಾಧ್ಯಕ್ಷರಾಗಿ ರೇಶ್ಮಾ ಮಲ್ಲಿನಾಥ ಕರಣಿಕ್ ಹಾಗೂ ಹೊನಗುಂಟಾ ಗ್ರಾಪಂ ಅಧ್ಯಕ್ಷರಾಗಿ ಭೀಮಬಾಯಿ ಮಲ್ಲಪ್ಪ ಮತ್ತು ಉಪಾಧ್ಯಕ್ಷರಾಗಿ ತಿಪ್ಪಣ್ಣ ಚಡಬಾ ಅಧಿಕಾರ ಸ್ವೀಕರಿಸಿದರು.

ತೊನಸನಹಳ್ಳಿ(ಎಸ್) ಗ್ರಾಪಂ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು, ಗ್ರಾಮದ ಜನರು ತಮ್ಮ ನಂಬಿಕೆ ಇಟ್ಟು ತಮ್ಮನ್ನು ಆಯ್ಕೆ ಮಾಡಿದ್ದಾರೆ. ಅವರ ಭರವಸೆಯನ್ನು ಈಡೇರಿಸುವ ಕೆಲಸ ತಮ್ಮಿಂದಾಗಬೇಕು. ತಮ್ಮ ಗ್ರಾಮ ಎಂಬ ಅಭಿಮಾನ ತಮ್ಮಲ್ಲಿ ಬಂದಾಗ ಮಾತ್ರ ಗ್ರಾಮ ಅಭಿವೃದ್ಧಿಯಾಗಲು ಸಾಧ್ಯ. ಸರ್ವ ಸದಸ್ಯರು ಸೇರಿಕೊಂಡು ಪಕ್ಷಾತೀತವಾಗಿ ಗ್ರಾಮದ ಅಭಿವೃದ್ಧಿಗೆ ಬೇಕಾದ ಅಗತ್ಯ ಮೂಲಭೂತ ಸೌಲಭ್ಯಗಳ ನೀಲಿ ನಕ್ಷೆ ತಯ್ಯಾರಿಸಿ, ಗ್ರಾಮದ ಅಭಿವೃದ್ಧಿಗಾಗಿ ಪಣ ತೊಡಿ.ಅದಕ್ಕೆ ಬೇಕಾದ ಎಲ್ಲಾ ಸಹಕಾರ ನಾನು ತಮಗೆ ನೀಡುತ್ತೆನೆ ಎಂದು ಹೇಳಿದರು.

ಶಹಾಬಾದ ಬಿಜೆಪಿ ಮಂಡಲ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ, ಕೃಷ್ಣ ಕಾಡಾ ಅಧ್ಯಕ್ಷ ಶರಣಪ್ಪ ತಳವಾರ, ಪಿಡಿಓ ರಾಜು ಬಾಳಿ, ನಗರಸಭೆ ಸದಸ್ಯ ನಾಗರಾಜ ಕರಣಿಕ್,ದೊಡ್ಡಪ್ಪ ಹೊಸಮನಿ,ನಿಂಗಣ್ಣ ಹುಳಗೋಳಕರ್, ಚನ್ನಪ್ಪ ಕೋಬಾಳ, ರವಿ ಸಣತಮ,ಬಸವರಾಜ ಗೊಳೇದ್, ಅವಿನಾಶ ಕೊಂಡಯ್ಯ, ಶ್ರೀಕಾಂತ, ವಿಕಾಸ ಕರಣಿಕ್ ಇತರರು ಇದ್ದರು.

ಹೊನಗುಂಟಾ ಗ್ರಾಪಂಯಲ್ಲಿ ಚಿತ್ತಾಪೂರ ಬಿಜೆಪಿ ಮಂಡಲ ಅಧ್ಯಕ್ಷ ನೀಲಕಂಠ ಪಾಟೀಲ, ಪಿಡಿಓ ರಾಜು ಬಾಳಿ, ಮಾರ್ಥಂಡ ಬುರ್ಲಿ,ಜೈಭೀಮ, ಸಿದ್ದು ವಾರಕರ್, ಲಕ್ಷ್ಮಣ ಕೊಡಸಾ, ಭೀಮಣ್ಣ ಗೆಜ್ಜಿ, ಬಸಪ್ಪ ಬನ್ನೇಪನೋರ್, ರಾಯಪ್ಪ ಹುರಮುಂಜಿ,ನಾಗು ಕುಂಬಾರ, ಕಾಶಿನಾಥ ಹಡಪದ,ದೇವು ಮಿರಲಕರ್ ಸೇರಿದಂತೆ ಗ್ರಾಪಂ ಸದಸ್ಯರು ಹಾಜರಿದ್ದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

12 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

12 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

14 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

14 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

14 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

15 hours ago