ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ: ಸ್ವಯಂ ಘೋಷಣೆ ದಾಖಲೆ ಸಲ್ಲಿಸಲು ರೈತರಿಗೆ ಸೂಚನೆ

0
231

ಕಲಬುರಗಿ: ಭಾರತ ಸರ್ಕಾರವು ಸಣ್ಣ ಮತ್ತು ಅತಿ ಸಣ್ಣ ರೈತರ ಆದಾಯ ವೃದ್ಧಿಸಲು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN)” ಯೋಜನೆಯನ್ನು ಅಧಿಸೂಚಿಸಿದ್ದು, ಸದರಿ ಯೋಜನೆಯಡಿ ಭೂ ಒಡೆತನ ಹೊಂದಿರುವ ಪ್ರತಿ ರೈತರಿಗೆ ೩ ಕಂತುಗಳಲ್ಲಿ ವಾರ್ಷಿಕವಾಗಿ ಒಟ್ಟು 6000 ರೂ. ಗಳನ್ನು ನೀಡಲು ಉದ್ದೇಶಿಸಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಅವರು ತಿಳಿಸಿದ್ದಾರೆ.

ಕಲಬುರಗಿ ಜಿಲ್ಲೆಯ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ನಾಡ ಕಚೇರಿ / ಅಟಲ್ ಜೀ ಜನಸ್ನೇಹಿ ಕೇಂದ್ರಕ್ಕೆ ಅಥವಾ ಗ್ರಾಮ ಪಂಚಾಯತನಲ್ಲಿರುವ ಬಾಪೂಜಿ ಸೇವಾ ಕೇಂದ್ರಕ್ಕೆ ತೆರಳಿ ತಮ್ಮ ಬಳಿ ಲಭ್ಯವಿರುವ ಆಧಾರ ಕಾರ್ಡ, ಬ್ಯಾಂಕ ಪಾಸ ಪುಸ್ತಕ ಜಿರಾಕ್ಸ, ಜಮೀನಿನ ವಿವರ ಮುಂತಾದ ವಿವರಗಳನ್ನು ನಮೂದಿಸಿ ಸ್ವಯಂ ಘೋಷಣೆಯನ್ನು ನೀಡಬೇಕೆಂದು ಅವರು ಕೋರಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here