ಜಿಲ್ಲೆಯಲ್ಲಿ 64 ಕಡಲೆಕಾಳು ಉತ್ಪನ್ನ ಖರೀದಿ ಕೇಂದ್ರ ಸ್ಥಾಪನೆ

ಕಲಬುರಗಿ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಹಿಂಗಾರು ಹಂಗಾಮಿನಲ್ಲಿ ಕಡಲೆಕಾಳು ಉತ್ಪನ್ನವನ್ನು ಪ್ರತಿ ಕ್ವಿಂಟಾಲ್‍ಗೆ 5,100 ರೂ.ಗಳ ದರದಲ್ಲಿ ಕಲಬುರಗಿ ಜಿಲ್ಲೆಯ ರೈತರಿಂದ ಖರೀದಿಸಲು ಜಿಲ್ಲೆಯಲ್ಲಿ ಒಟ್ಟು 64 ಖರೀದಿ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಕಡಲೆಕಾಳು ಬೆಳೆದ ರೈತರು ಅವಶ್ಯಕ ದಾಖಲಾತಿಗಳೊಂದಿಗೆ ತಮ್ಮ ಹತ್ತಿರದ ಯಾವುದೇ ಕಡಲೆಕಾಳು ಖರೀದಿ ಕೇಂದ್ರಕ್ಕೆ ತೆರಳಿ ಆನ್‍ಲೈನ್ ಮೂಲಕ ಹೆಸರು ನೋಂದಾಯಿಸಿಕೊಳ್ಳಬೇಕೆಂದು ಕಲಬುರಗಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಟಾಸ್ಕ್‍ಫೋರ್ಸ್ ಸಮಿತಿಯ ಅಧ್ಯಕ್ಷರಾದ ವಿ.ವಿ. ಜ್ಯೋತ್ಸ್ನಾ ಅವರು ಮನವಿ ಮಾಡಿದ್ದಾರೆ.

ಹೈವೋಲ್ಟ್ ವಿದ್ಯುತ್ ತಂತಿ ಸ್ಪರ್ಷ: ಇಬ್ಬರು ಗಂಭೀರ

ಪ್ರತಿ ಎಕರೆಗೆ 4 ಕ್ವಿಂಟಲ್‍ನಂತೆ ಗರಿಷ್ಠ ಪ್ರಮಾಣ ಹಾಗೂ ಪ್ರತಿ ರೈತರಿಂದ ಗರಿಷ್ಠ 15 ಕ್ವಿಂಟಾಲ್ ಕಡಲೆಕಾಳು ಉತ್ಪನ್ನ ಮಾತ್ರ ಖರೀದಿಸಲಾಗುತ್ತದೆ. ಈಗಾಗಲೇ ಫೆಬ್ರವರಿ 15 ರಿಂದ ಹೆಸರು ನೋಂದಣಿ ಪ್ರಕ್ರಿಯೆ ಪ್ರಾರಂಭಗೊಂಡಿದ್ದು, ಕಡಲೆಕಾಳು ಉತ್ಪನ್ನ ಬೆಳೆದ ರೈತರು ಹತ್ತಿರದ ಯಾವುದೇ ಕಡಲೆ ಖರೀದಿ ಕೇಂದ್ರಕ್ಕೆ ಅವಶ್ಯಕ ದಾಖಲಾತಿಗಳೊಂದಿಗೆ ತೆರಳಿ ಆನ್‍ಲೈನ್‍ನಲ್ಲಿ 2021ರ ಏಪ್ರಿಲ್ 30 ರೊಳಗಾಗಿ ನೋಂದಾಯಿಸಿಕೊಳ್ಳಬೇಕು. ರೈತರಿಂದ 2021ರ ಫೆಬ್ರವರಿ 22 ರಿಂದ ಮೇ 14 ವರೆಗೆ ಕಡಲೆಕಾಳು ಖರೀದಿಯ ದಿನಾಂಕವನ್ನು ನಿಗದಿಪಡಿಸಲಾಗಿದೆ.

ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತದ 36 ಖರೀದಿ ಕೇಂದ್ರಗಳನ್ನು ಹಾಗೂ ಕಲಬುರಗಿಯ ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿಯ 28 ಸೇರಿದಂತೆ ಒಟ್ಟು 64 ಕಡಲೆಕಾಳು ಖರೀದಿ ಕೇಂದ್ರಗಳ್ನು ಸ್ಥಾಪಿಸಲಾಗಿದೆ.

ಕಲಬುರಗಿ ತಾಲೂಕು: ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತದ ಖರೀದಿ ಕೇಂದ್ರಗಳಾದ ಭೀಮಳ್ಳಿ, ಹೊನ್ನಕಿರಣಗಿ, ಔರಾದ, ಕಲಮೂಡ, ಫರಹತಾಬಾದ, ಫೀರೋಜಾಬಾದ, ನಾಗೂರ ಹಾಗೂ ಕಲಬುರಗಿ ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿಯ ಖರೀದಿ ಕೇಂದ್ರಗಳಾದ ಸಣ್ಣೂರ, ಮಹಾಗಾಂವ, ಮೇಳಕುಂದಾ (ಬಿ) ನೇಗಿಲಯೋಗಿ ರೈತ ಸಂಘ (ಎಫ್‍ಪಿಓ), ಶ್ರೀನಿವಾಸ ಸರಡಗಿ ಹಾಗೂ ಟಿಎಪಿಸಿಎಮ್‍ಎಸ್ ಕಲಬುರಗಿ.

ರಾಜ್ಯಸಭೆ ವಿರೋಧ ಪಕ್ಷ ನಾಯಕರಾಗಿ ಡಾ. ಖರ್ಗೆ ಆಯ್ಕೆ: ಯುವ ಕಾಂಗ್ರೆಸ್ ದಿಂದ ವಿಜಯೋತ್ಸವ

ಸೇಡಂ ತಾಲೂಕು: ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತದ ಖರೀದಿ ಕೇಂದ್ರಗಳಾದ ಯಡಗಾ, ಸಿಂಧನಮಡು, ಊಡಗಿ, ಕಾನಾಗಡ್ಡಾ ಹಾಗೂ ಕಲಬುರಗಿ ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿಯ ಖರೀದಿ ಕೇಂದ್ರಗಳಾದ ಅಡಕಿ, ಮುಧೋಳ, ಹಂದರಕಿ, ಮುಧೋಳ ಬಲಭೀಮ ಸೇನಾ ರೈತ ಉತ್ಪಾದಕರ ಸಂಸ್ಥೆ-ಎಫ್‍ಪಿಓ.

ಅಫಜಲಪುರ ತಾಲೂಕು: ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತದ ಖರೀದಿ ಕೇಂದ್ರಗಳಾದ ಮಣ್ಣೂರ, ಅತನೂರ, ಗೊಬ್ಬೂರ (ಬಿ), ರೇವೂರ, ಮಶ್ಯಾಳ ಹಾಗೂ ಕಲಬುರಗಿ ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿಯ ಖರೀದಿ ಕೇಂದ್ರಗಳಾದ ಕರಜಗಿ, ದೇವಲಗಾಣಗಾಪುರ ಸಂಗಮ್ಮನಾಥ ತೋಟಗಾರಿಕಾ ರೈತ ಉತ್ಪಾದಕರ ಸಂಸ್ಥೆ(ಎಫ್‍ಪಿಓ), ಚಿಣಮಗೇರಾ ಹಾಗೂ ಟಿಎಪಿಸಿಎಮ್‍ಎಸ್ ಅಫಜಲಪುರ.

ಆಳಂದ ತಾಲೂಕು: ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತದ ಖರೀದಿ ಕೇಂದ್ರಗಳಾದ ಖಜೂರಿ, ನರೋಣಾ, ಕಡಗಂಚಿ, ಮಾದನ ಹಿಪ್ಪರಗಾ, ಚಿಂಚನಸೂರ (ಕೆರೆ ಅಂಬಲಗಾ), ಕಿಣ್ಣಿ ಸುಲ್ತಾನ ಹಾಗೂ ಕಲಬುರಗಿ ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿಯ ಖರೀದಿ ಕೇಂದ್ರಗಳಾದ ತಡಕಲ್, ನಿಂಬರ್ಗಾ, ಸರಸಂಬಾ, ಭೂಸನೂರ.

ಚಿಂಚೋಳಿ ತಾಲೂಕು: ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತದ ಖರೀದಿ ಕೇಂದ್ರಗಳಾದ ಸಾಲೇಬೀರನಳ್ಳಿ, ಕನಕಪೂರ, ಸುಲೇಪೇಟ್, ಕೂಡ್ಲಿ ಹಾಗೂ ಕಲಬುರಗಿ ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿಯ ಖರೀದಿ ಕೇಂದ್ರಗಳಾದ ಐನೊಳ್ಳಿ, ಐನಾಪುರ, ಚಿಮ್ಮನಚೂಡ.

ಚಿತ್ತಾಪುರ ತಾಲೂಕು: ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತದ ಖರೀದಿ ಕೇಂದ್ರಗಳಾದ ದಿಗ್ಗಾಂವ್, ಭೀಮನಳ್ಳಿ, ಅಲ್ಲೂರ (ಬಿ), ಗೋಟೂರ, ಗುಂಡಗುರ್ತಿ, ಕೊಡದೂರ, ಕಂದಗೊಳ ಹಾಗೂ ಕಲಬುರಗಿ ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿಯ ಖರೀದಿ ಕೇಂದ್ರಗಳಾದ ಬಂಕೂರ, ಕಾಳಗಿ, ನಾಲವಾರ, ಹೆರೂರ, ಹಲಕಟ್ಟಾ, ಪೇಠಶೀರೂರ ನೃಪತುಂಗಾ ರೈತ ಉತ್ಪಾದಕರ ಸಂಸ್ಥೆ (ಎಫ್‍ಪಿಓ), ಅರಣಕಲ್, ತೊನಸನಳ್ಳಿ.

ಜೇವರ್ಗಿ ತಾಲೂಕು: ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತದ ಖರೀದಿ ಕೇಂದ್ರಗಳಾದ ಕೋಳಕೂರ, ನರಿಬೋಳ, ನೆಲೋಗಿ ಹಾಗೂ ಕಲಬುರಗಿ ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿಯ ಖರೀದಿ ಕೇಂದ್ರವಾದ ಬಳಬಟ್ಟಿ.

emedialine

Recent Posts

ಕಲಬುರಗಿ: ಹಜರತ್ ಲಾಡ್ಲೆ ಮಶಾಕ(ರ.ಅ) ದರ್ಗಾದ 669ನೇ ಉರುಸ್ 13 ರಿಂದ

ಕಲಬುರಗಿ: ಇಲ್ಲಿನ ಪ್ರಸಿದ್ಧಿ ಸೂಫಿ ಸಂತ ಹಜರತ್ ಖಾಜಾ ಶೇಖ ಮಗದೂಮ್ ಅಲ್ಲಾವುದ್ದೀನ್ ಅನ್ಸಾರಿ ಚಿಸ್ತಿ ಲಾಡ್ಲೆ ಮಶಾಕ ಅನ್ಸಾರಿ…

3 hours ago

ಪತ್ರಕರ್ತ ಮಣೂರರಿಗೆ ಟಿಎಸ್‍ಆರ್ ಪ್ರಶಸ್ತಿ ಪ್ರದಾನ

ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…

4 hours ago

ನವರಾತ್ರಿ ಮಹೋತ್ಸವದ ನಿಮಿತ್ತ ದೇವಿ ಪೂಜಾ ಕಾರ್ಯಕ್ರಮ

ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…

4 hours ago

ಶ್ರೀ ಭವಾನಿ 1ನೇ ದಿನದ ಪುರಾಣ, ಕಳಸ ರೋಹಣ

ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…

4 hours ago

ಸಿದ್ದರಾಮಯ್ಯನವರು ರಾಜೀನಾಮೆ ನೀಡುವ ಅವಶ್ಯಕತೆಯಿಲ್ಲ: ಮುದ್ದಾ

ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…

4 hours ago

ಅಹಿಂಸೆಯ ದಾರಿಯಲ್ಲಿ ನಡೆದಾಗ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯ

ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…

4 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420