ವಾಡಿ: ರೈತರ ಆಂದೋಲನ ಬೆಂಬಲಿಸಿದ್ದಕ್ಕಾಗಿ ದೇಶದ್ರೋಹದ ಆರೋಪದ ಮೇಲೆ ದೆಹಲಿ ಪೊಲೀಸರು ಪರಿಸರ ಕಾರ್ಯಕರ್ತೆ ದಿಶಾ ರವಿ ಅವರನ್ನು ಬೆಂಗಳೂರಿನಲ್ಲಿ ಬಂಧಿಸಿ ಜೈಲಿಗೆ ಹಾಕಿರುವ ಕ್ರಮ ಎಲ್ಲಾ ಜನತಾಂತ್ರಿಕ ರೂಢಿ ಆಚರಣೆಗಳ ಉಲ್ಲಂಘನೆಯಾಗಿದೆ ಎಂದು ಸೋಷಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಎಸ್ಯುಸಿಐ) ಕಮ್ಯುನಿಸ್ಟ್ ಪಕ್ಷದ ನಗರ ಸಮಿತಿ ಕಾರ್ಯದರ್ಶಿ ಕಾಮ್ರೇಡ್ ವೀರಭದ್ರಪ್ಪ ಆರ್.ಕೆ ಆರೋಪಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಕಾಮ್ರೇಡ್ ವೀರಭದ್ರಪ್ಪ, ಬಿಜೆಪಿ ಸರಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತರ ಹೋರಾಟವನ್ನು ಬೆಂಬಲಿಸುವುದು ಆಹಾರವನ್ನು ಊಟ ಮಾಡಿ ಬದುಕುವ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಈ ಕರ್ತವ್ಯ ನಿರ್ವಹಿಸುವುದೇ ಮಹಾ ಅಪರಾಧವೆಂದು ಭಾವಿಸಿರುವ ಬಂಡವಾಳಶಾಹಿ ತಿಮಿಂಗಲಗಳ ನಗ್ನ ಗುಲಾಮಗಿರಿಯಲ್ಲಿರುವ ಸರ್ಕಾರ, ಹೋರಾಟಗಾರರನ್ನು ದೇಶದ್ರೋಹಿಗಳೆಂದು ಬ್ರಾಂಡ್ ಮಾಡುತ್ತಿದೆ.
ಜನಪರ ಪತ್ರಕರ್ತರು, ಮಾನವ ಹಕ್ಕುಗಳ ಕಾರ್ಯಕರ್ತರು ಹಾಗೂ ಅಂತರರಾಷ್ಟ್ರೀಯ ಮಟ್ಟದ ಗೌರವವುಳ್ಳ ವ್ಯಕ್ತಿಗಳ ವಿರುದ್ಧ ಪ್ರಸ್ತುತ ನಡೆಯುತ್ತಿರುವ ಪೊಲೀಸ್ ಕ್ರಮ ಮತ್ತು ಸೈಬರ್ ದಾಳಿಗಳು ವಾಸ್ತವವಾಗಿ ಮೂಲಭೂತ ಪ್ರಜಾಪ್ರಭುತ್ವ ಹಕ್ಕುಗಳ ಮೇಲಿನ ದಾಳಿಗಳಾಗಿವೆ. ಮಾರಕ ಕೃಷಿ ಕಾನೂನುಗಳನ್ನು ರದ್ದುಗೊಳಿಸದೆ ಹಿಂದೆ ಸರಿಯದಿರಲು ದೃಢನಿಶ್ಚಯ ಹೊಂದಿರುವ ರೈತರು ಮತ್ತು ಅವರೊಂದಿಗೆ ನಿಲ್ಲುವವರನ್ನು ಬೆದರಿಸಲು ಹಾಗು ತಡೆಯಲು ತೆಗೆದುಕೊಂಡ ದು?ತ್ಯದ ಕ್ರಮಗಳ ವಿರುದ್ಧ ಜನತಾಂತ್ರಿಕ ಮನಸ್ಸುಳ್ಳ ಎಲ್ಲ ಜನರು ಒಗ್ಗೂಡಿ ಹೋರಾಡಬೇಕೆಂದು ಅವರು ಕರೆ ನೀಡಿದ್ದಾರೆ.
ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…
ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…
ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…
ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…
ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…
ಕಾಳಗಿ: ಈ ಹಿಂದೆ ಕೇಳಿ ಬಂದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಬದಲಾವಣೆ ಮಾಡಲು ಪಕ್ಷ ಕೈಗೊಂಡ…