ಬಿಸಿ ಬಿಸಿ ಸುದ್ದಿ

ಸ್ಥಳಾಂತರ ಕೆಲಸಕ್ಕೆ ಕೈ ಹಾಕಿದರೆ ಉಗ್ರ ಹೋರಾಟ ಎಚ್ಚರಿಕೆ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಒಂದೊಂದೇ ಇಲಾಖೆಗಳು ಸ್ಥಳಾಂತರವಾಗುತ್ತಿದ್ದು,ಸರಕಾರ ಇದನ್ನು ತಡೆದು ಸ್ಥಳಾಂತರವಾಗಿದ್ದ ಇಲಾಖೆಗಳು ಮರಳಿ ತರದೆ ಹೋದರೆ ಉಗ್ರ ಹೋರಾಟ ರೂಪಿಸಲಾಗುವುದು ಎಂದು ಕನ್ನಡ ಭೂಮಿ ಜಾಗೃತಿ ಸಮಿತಿ ಸಂಸ್ಥಾಪಕ ಅಧ್ಯಕ್ಷ ಲಿಂಗರಾಜ ಸಿರಗಾಪೂರ ಎಚ್ಚರಿಕೆ ನೀಡಿದರು.

ನಗರದ ಹಿಂದಿ ಪ್ರಚಾರ ಸಭಾದಲ್ಲಿ ಕನ್ನಡ ಭೂಮಿ ಜಾಗೃತಿ ಸಮಿತಿ ಹಮ್ಮಿಕೊಂಡಿದ್ದ ಕಾರ್ಯಕರ್ತರ ಚಿಂತನಾ ಸಭೆಯಲ್ಲಿ ಮಾತನಾಡಿದ ಅವರು ಇತ್ತೀಚೆಗೆ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿರುವ ಒಂದೋಂದೆ ಇಲಾಖೆಗಳು ಎತ್ತಂಗಡಿ ಮಾಡಲಾಗುತ್ತಿದೆ.ಆದರೂ ಇಲ್ಲಿನ ಜನ ಪ್ರತಿನಿಧಿಗಳು ಕಣ್ಣು ಮುಚ್ಚಿಕೊಂಡು ಕುಳಿತಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೈದರಾಬಾದ್ ಕರ್ನಾಟಕ ಪ್ರದೇಶವನ್ನು ಕಲ್ಯಾಣ ಕರ್ನಾಟಕ ಎಂದು ಮರು ನಾಮಕರಣ ಮಾಡಿ ವರ್ಷಗಳೇ ಕಳೆದಿವೆ.ಆದರೂ ಅಭಿವೃದ್ಧಿ ಕೆಲಸ ದೂರದ ಮಾತು.ಇದ್ದ ಇಲಾಖೆಗಳು ಸ್ಥಳಾಂತರ ಗೊಳಿಸುತ್ತಿರುವ ಉದ್ದೇಶವಾದರೂ ಏನು? ಸರಕಾರ ಇಲ್ಲಿನ ಜನರ ಜೋತೆ ಚೆಲ್ಲಾಟ ಆಡುತ್ತಾ ಮನಸ್ಸಿಗೆ ಬಂದಂತೆ ವರ್ತಿಸುತ್ತಿದೆ.ಸರಕಾರದ ನಡೆ ಖಂಡಿಸುವ ಬದಲು ನಮ್ಮ ಸಂಸದರು,ಶಾಸಕರು ಮೌನವಹಿಸಿದ್ದು ಹೇಡಿತನ ಪ್ರದರ್ಶಿಸುತ್ತಿದ್ದಾರೆ.

ಕಚೇರಿಗೆ ಬಾರದ ಅಧಿಕಾರಿ ವಿರುದ್ಧ ಕ್ರಮಕ್ಕೆ ಆಗ್ರಹ

ಪದೇ ಪದೇ ನಮ್ಮ ಭಾಗಕ್ಕೆ ಅನ್ಯಾಯ ವಾಗುತ್ತಿದ್ದರೂ ಬಾಯಿಗೆ ಬೀಗ ಹಾಕಿಕೊಂಡಿದ್ದಾರೆ.ಸ್ಥಳಾಂತರಗೊಂಡ ಇಲಾಖೆಗಳು ಮರಳಿ ತರಬೇಕು.ಹೊಸ ಯೋಜನೆಗಳನ್ನು ಹಮ್ಮಿಕೊಂಡು ಉದ್ಯೋಗ ಸೃಷ್ಟಿಸಬೇಕು.ಇಲ್ಲದಿದ್ದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಎಲ್ಲಾ ಸಂಸದರು, ಶಾಸಕರು ರಾಜೀನಾಮೆ ನೀಡಬೇಕು.ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಬೇಕು ಎಂದರು.

ಬೆಳಗಾವಿ ಹಾಗೂ ಹುಬ್ಬಳ್ಳಿ ಗೆ ಸಿಂಹ ಪಾಲು ನೀಡುತ್ತಿರುವ ಸರಕಾರದ ತಾರತಮ್ಯ ಧೋರಣೆ ಖಂಡಿಸಿ ಮುಂದಿನ ವಾರದಲ್ಲಿ ಕಲಬುರಗಿ ಸಂಸದರ ಕಚೇರಿ ಎದುರು ಪ್ರತಿಭಟನೆ ಮಾಡಲಾಗುವುದು.ನಂತರ ಹಂತ ಹಂತವಾಗಿ ಶಾಸಕರ ಮನೆಗಳ ಎದುರೂ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು.

ನಯಾ ಸವೇರಾ ಸಂಘಟನೆ ಪದಾಧಿಕಾರಿಗಳಿಗೆ ಸನ್ಮಾನ

ಸಮಿತಿ ಜಿಲ್ಲಾ ಅಧ್ಯಕ್ಷ ಪ್ರಶಾಂತ ತಂಬೂರಿ, ರಾಜ್ಯ ಕಾರ್ಯದರ್ಶಿ ಗುರುಲಿಂಗಪ್ಪ ಟೆಂಗಳಿ, ಸಾಜೀದ ಅಲಿ ರಂಜೋಳ್ಳ್ವಿ, ಶ್ರೀಕಾಂತ್ ನಾಗಶೆಟ್ಟಿ,ಬಾಬಾ ಫಕ್ರುದ್ದೀನ್, ಯುವ ಜಿಲ್ಲಾ ಅಧ್ಯಕ್ಷ ಶರಣು ಇಕ್ಕಳಕಿಮಠ, ಉಪಾಧ್ಯಕ್ಷ ರೋಹನ್ ರಠಕಲ, ಮುಖಂಡರಾದ ಅಶೋಕ ಧಂಗಾಪೂರ, ಶಿವಪುತ್ರಪ್ಪ ಮರಡಿ, ವಿನೋದ್ ಪಾಟೀಲ್,ಬಸು ಹಿರೇಮಠ ಸೇರಿದಂತೆ ಅನೇಕರು ಸಭೆಯಲ್ಲಿ ಭಾಗವಹಿಸಿದ್ದರು.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

41 mins ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

44 mins ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

47 mins ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

2 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

3 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

6 hours ago