ಲಕ್ಷಾಂತರ ಹುದ್ದೆಗಳು ಖಾಲಿ ಇದ್ದರು ಭರ್ತಿ ಮಾಡುತ್ತಿಲ್ಲ: ಜಗನ್ನಾಥ.ಎಸ್.ಹೆಚ್

ಶಹಾಬಾದ: ಉದ್ಯೋಗ ಮೂಲಭೂತ ಹಕ್ಕು. ಆದರೆ ಸರ್ಕಾರವು ಲಕ್ಷಾಂತರ ಹುದ್ದೆಗಳು ಖಾಲಿ ಇದ್ದರು ಭರ್ತಿ ಮಾಡುತ್ತಿಲ್ಲ ಎಂದು ಎಐಡಿವೈಒಜಿಲ್ಲಾ ಕಾರ್ಯದರ್ಶಿ ಜಗನ್ನಾಥ.ಎಸ್.ಹೆಚ್ ಆಕ್ರೋಶ ವ್ಯಕ್ತಪಡಿಸಿದರು.

ಅವರು ಎಐಡಿವೈಒ ಶಹಾಬಾದ ಸ್ಥಳೀಯ ಸಮಿತಿಯಿಂದ ಹೊನಗುಂಟಾ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಯುವಜನ ಸಭೆಯಲ್ಲಿ ಮಾತನಾಡಿದರು.

ಪ್ರಸಕ್ತ ಪರಿಸ್ಥಿತಿಯಲ್ಲಿ ಯುವಜನರು ನಿರುದ್ಯೋಗ ಸಮಸ್ಯೆಯನ್ನು ತಿವ್ರವಾಗಿ ಎದುರಿಸುತ್ತಿದ್ದಾರೆ. ಇನ್ನೊಂದು ಕಡೆ ಸರ್ಕಾರವು ಸಾರ್ವಜನಿಕ ಸೇವೆಗಳಾದ ಆರೋಗ್ಯ, ಶಿಕ್ಷಣ ,ರೈಲ್ವೆ, ಬ್ಯಾಂಕ ಗಳನ್ನು ವ್ಯಾಪಾರಿಕರಣ ಮಾಡುತ್ತಿದ್ದು, ಇದರಿಂದ ನಿರುದ್ಯೋಗ ಸಮಸ್ಯೆ ಮತ್ತಷ್ಟು ಉಲ್ಬಣಗೊಂಡಿದೆ. ಇದರ ವಿರುದ್ಧ ಸಂಘನೆಯು ರಾಷ್ಟ್ರದ್ಯಾದಂತ ಸಹಿ ಸಂಗ್ರಹ ಅಭಿಯಾನ ಕಾರ್ಯಕ್ರಮ ಹಮ್ಮಿಕೊಂಡಿದ್ದು ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟಕ್ಕೆ ಶಕ್ತಿ ತುಂಬಬೇಕೆಂದು ಹೇಳಿದರು.

ಕೋವಿಡ್ ಲಸಿಕೆಗಳು ಸಂಪೂರ್ಣ ಸುರಕ್ಷಿತ,ಯಾರೂ ಭಯಪಡಬೇಕಿಲ್ಲ: ಡಿಸಿ

ಎಐಡಿವೈಒ ಅಧ್ಯಕ್ಷ ಸಿದ್ದು ಚೌದ್ರಿ ಮಾತನಾಡಿ, ಸರಕಾರವು ಭಗತ್‌ಸಿಂಗ್ ಜೀವನ ಚರಿತ್ರೆಯು ಪಠ್ಯಪುಸ್ತಕದಲ್ಲಿ ತೆಗೆದು ಹಾಕಿರುವುದು ಬಹಳ ಬೇಸರದ ಸಂಗತಿಯಾಗಿದೆ. ಯುವಜನ ಸಂಘಟನೆಯಿಂದ ಗ್ರಾಮೀಣ ಕ್ರೀಡಾಕೂಟ ಹಾಗೂ ಮಹಾಮ ವ್ಯಕ್ತಿಗಳ  ಕಾರ್ಯಕ್ರಮಗಳು ಯುವಜನರ ಮಧ್ಯೆ ಆಯೋಜಿಸಲಾಗುತ್ತಿದೆ. ಆದ್ದರಿಂದ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇವರ  ವಿಚಾರಗಳನ್ನು ತಿಳಿದುಕೋಳಬೇಕೆಂದರು. ಇದೇ ಸಂದರ್ಭದಲ್ಲಿ ಎಐಡಿವೈಒ ಹೊನಗುಂಟ ಗ್ರಾಮದ ಯುವಜನ ಸಮಿತಿ ರಚಿಸಲಾಯಿತು.

ಅಧ್ಯಕ್ಷರಾಗಿ ಶ್ರೀಶೈಲ ಬುರ್ಲಿ-ಅಧ್ಯಕ್ಷ, ಸಂತೋಷ ಪ್ರಭಾನೂರ್-ಉಪಾಧ್ಯಕ್ಷ, ಹುಲಿಯಪ್ಪ ಕರಗಾರ, ಕಾರ್ಯದರ್ಶಿಯಾಗಿ ಶಂಕರ್ ಭಂಜತ್ರಿ ,ಸದಸ್ಯರಾಗಿ ದೇವರಾಜ ರಾಜೋಳ, ಮನು ಪೂಜಾರಿ , ಮೌನೇಶ ರಾಜೋಳ, ಮೈಲಾರಿ ಇಟಗಿ ಕ್ರಿಷ್ಣಾ ,ಸೈಬಣ್ಣಾ ಹಾಗೂ ಚಂದ್ರು ಮರಗೋಳ,ದತ್ತು ಕಂಟಿಕರ್ ಸಲಹೆಗಾರರಾಗಿ ಆಯ್ಕೆಯಾಗಿದ್ದಾರೆ.

ಉದ್ಯೋಗಕ್ಕಾಗಿ ಆಗ್ರಹಿಸಿ ಎಐಡಿವೈಒ ಸಹಿ ಸಂಗ್ರಹ ಚಳುವಳಿ

sajidpress

Recent Posts

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

2 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

7 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

7 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

9 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

20 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

23 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420