ಇಂಧನ ಉಳಿತಾಯ: ಚಾಲಕರಿಗೆ ಸಚಿವರಿಂದ 10 ಗ್ರಾಂ. ಚಿನ್ನದ ಪದಕ

ಕಲಬುರಗಿ: ಕೋವಿಡ್-19 ಸಂಕಷ್ಟದ ನಡುವೆಯೂ ಕಳೆದ ವರ್ಷಕ್ಕಿಂತ ಪ್ರಸ್ತುತ ವರ್ಷ ಹೆಚ್ಚಿನ ಸಾರಿಗೆ ಆದಾಯ ಬರಲು ಕಾರಣರಾದ ಈಶಾನ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚಾಲನಾ ಸಿಬ್ಬಂದಿಗಳು ಹಾಗೂ ಅಧಿಕಾರಿಗಳ ಪರಿಶ್ರಮವನ್ನು ರಾಜ್ಯದ ಉಪಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವರಾದ ಲಕ್ಷಣ ಸಂಗಪ್ಪ ಸವದಿ ಅವರು ಶ್ಲಾಘಿಸಿದರು.

ಗ್ರಾಮೀಣ ಭಾಗದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸಂಸ್ಥೆಯ ವತಿಯಿಂದ ತಯಾರಿಸಿದ ಸಂಚಾರಿ ಗ್ರಂಥಾಲಯ ವಾಹನವನ್ನು ಕಲಬುರಗಿಯಲ್ಲಿ ಗುರುವಾರ ವೀಕ್ಷಿಸಿ ಅವರು ಮಾತನಾಡಿದರು.

ಚಾಲನಾ ಸಿಬ್ಬಂದಿಗಳು ಇಂಧನ ಉಳಿತಾಯದಲ್ಲಿ ನಿಟ್ಟಿನಲ್ಲಿ ಶ್ರಮವಹಿಸಿದಲ್ಲಿ ಖರ್ಚು ಕಡಿಮೆ ಮಾಡಬಹುದಾಗಿದೆಂದು ಅವರು ಹೇಳಿದರು.

ಸುರಪುರ ಪೊಲೀಸ್ ಉಪ ವಿಭಾಗದಿಂದ ಪದವಿ ವಿದ್ಯಾರ್ಥಿಗಳಿಗೆ ಲಿಖಿತ ರಸಪ್ರಶ್ನೆ ಕಾರ್ಯಕ್ರಮ

ಸ್ವಂತ ಖರ್ಚಿನಲ್ಲಿ ಚಿನ್ನದ ಪದಕ: ಪ್ರಸ್ತುತ ವರ್ಷ ಅಂದರೆ ಏಪ್ರಿಲ್-2020 ರಿಂದ ಮಾಚ್ರ್À-2021 ರವರೆಗೆ ರಾಜ್ಯದ 04 ಸಾರಿಗೆ ನಿಗಮಗಳಲ್ಲಿ ತಲಾ ಒಬ್ಬರಂತೆ ಅತಿ ಹೆಚ್ಚು ಇಂಧನ ಉಳಿತಾಯ (ಕೆ.ಎಂ.ಪಿ.ಎಲ್.) ಮಾಡಿದ ಚಾಲಕರಿಗೆ ತಮ್ಮ ಸ್ವಂತ ಖರ್ಚಿನಲ್ಲಿ 10 ಗ್ರಾಂ ಚಿನ್ನದ ಪದಕ ನೀಡುವುದಾಗಿ ಅವರು ಈ ಸಂದರ್ಭದಲ್ಲಿ ಘೋಷಿಸಿದರು.

ಚಾಲನಾ ಸಿಬ್ಬಂದಿಗಳನ್ನು ಹುರಿದುಂಬಿಸುವ ನಿಟ್ಟಿನಲ್ಲಿ ಈ ಚಿನ್ನದ ಪದಕ ನೀಡುತ್ತಿದ್ದು, ಈ ಚಿನ್ನದ ಪದಕ ವಿತರಣಾ ಕಾರ್ಯಕ್ರಮವನ್ನು ಬರುವ ಏಪ್ರಿಲ್ ಮಾಹೆÉಯಲ್ಲಿ ನಿಗದಿಪಡಿಸಲು ಉಪಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು

ಸಂಚಾರಿ ಗ್ರಂಥಾಲಯ ವ್ಯವಸ್ಥೆ ಮಾಡಿರುವುದು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ತುಂಬಾ ಅನುಕೂಲವಾಗಿದೆ ಎಂದು ಹೆಮ್ಮೆ ವ್ಯಕ್ತಪಡಿಸಿದ ಅವರು, ಈ ನಿಟ್ಟಿನಲ್ಲಿ ಇನ್ನಷ್ಟು ಸಂಚಾರಿ ಗ್ರಂಥಾಲಯ ವ್ಯವಸ್ಥೆ ಮಾಡಬೇಕು ಎಂದು ಅವರು ಸೂಚಿಸಿದರು.

ಯುನೈಟೆಡ್ ಆಸ್ಪತ್ರೆಯ 9ನೇ ವರ್ಷಿಕೋತ್ಸವದ ನಿಮಿತ್ತ ಆರೋಗ್ಯ ತಪಾಸಣೆ ಶಿಬಿರ

ಈ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಹಾಗೂ ಕಲಬುರಗಿ ದಕ್ಷಿಣ ಶಾಸಕ ದತ್ತಾತ್ರೇಯ ಸಿ. ಪಾಟೀಲ್ ರೇವೂರ, ವಿಧಾನ ಪರಿಷತ್ ಸದಸ್ಯರಾದ ಬಿ.ಜಿ. ಪಾಟೀಲ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಅಮರನಾಥ ಪಾಟೀಲ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೂರ್ಮಾರಾವ್ ಎಂ. ಸೇರಿದಂತೆ ಸಾರಿಗೆ ಇಲಾಖೆ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

sajidpress

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

9 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

11 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

12 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

12 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

12 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

12 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420