ಶಹಾಬಾದ: ಸರ್ವಜ್ಞ ಜಯಂತಿ ಕಾರ್ಯಕ್ರಮ

ಶಹಾಬಾದ: ತ್ರಿಕಾಲ ಜ್ಞಾನಿಯಾಗಿ,ವಾಸ್ತವಿಕೆ ಅರಿತು,ತ್ರಿಪದಿಗಳ ಮೂಲಕ ಕಂಡ ಸತ್ಯವನ್ನು ನೇರ ಮತ್ತು ನಿಷ್ಠುರವಾಗಿ ಹೇಳಿ ಸಮಾಜಕ್ಕೆ ಮಾರ್ಗದರ್ಶನ ನೀಡುವ ಮೂಲಕ ವರಕವಿ ಸರ್ವಜ್ಞ ಇಂದಿಗೂ ಅಜರಾಮರವಾಗಿದ್ದಾರೆ ಎಂದು ನಗರಸಭೆಯ ವ್ಯವಸ್ಥಾಪಕ ಶಂಕರ ಇಂಜಗನೇರಿ ಹೇಳಿದರು.

ಅವರು ಶನಿವಾರ ನಗರದ ನಗರಸಭೆಯ ಕಛೇರಿಯಲ್ಲಿ ಆಯೋಜಿಸಲಾದ ಸರ್ವಜ್ಞ ಜಯಂತಿ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ಸರ್ವಜ್ಞನ ಸಂದೇಶ ಇಡೀ ಮಾನವ ಸಮಾಜಕ್ಕೆ ದಾರಿ ದೀಪವಿದ್ದಂತೆ: ಸೂಫಿಯಾ ಸುಲ್ತಾನ

ನಾಡಿನೆಲ್ಲಡೆ ಸಂಚರಿಸಿ ಎಲ್ಲಾ ಕ್ಷೇತ್ರಗಳಲ್ಲಿ ಕಂಡ ಸತ್ಯವನ್ನು ನೇರವಾಗಿ ಹೇಳುವ ಮೂಲಕ ಸಮಾಜಕ್ಕೆ ಎಚ್ಚರಿಕೆ ನೀಡಿದ್ದಾರೆ. ವಿದ್ಯೆ,ಜಾತಿ,ಕೃಷಿ,ಮಾತು,ದುಶ್ಚಟಗಳ ಕುರಿತು ವಚನಗಳ ಮೂಲಕ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ.ಆದರೆ ಇಂದು ಗುಟಕಾ,ತಂಬಾಕು ಹಾಗೂ ಕುಡಿತ ಮೋಜಿಗೆ ಜನರು ಬಲಿಯಾಗುತ್ತಿದ್ದಾರೆ.ಆದ್ದರಿಂದ ಸರ್ವಜ್ಞನ ವಚನಗಳ ಸಾರಾಂಶವನ್ನು ಪ್ರತಿಯೊಬ್ಬರೂ ತಿಳಿದುಕೊಂಡು ನಡೆದರೆ ದುಶ್ಚಟ ಮುಕ್ತ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಹೇಳಿದರು.

ನಗರಸಭೆಯ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ, ನಗರಸಭೆಯ ಉಪಾಧ್ಯಕ್ಷ ಸಲೀಮಾಬೇಗಂ, ಪೌರಾಯುಕ್ತ ಡಾ.ಕೆ.ಗುರಲಿಂಗಪ್ಪ, ನಗರಸಭೆಯ ಸದಸ್ಯರಾದ ಡಾ.ಅಹ್ಮದ್ ಪಟೇಲ್,ಮಾಜಿ ನಗರಸಭೆಯ ಮಾಜಿ ಅಧ್ಯಕ್ಷ ಗಿರೀಶ ಕಂಬಾಣೂರ, ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಶರಣು ಪಗಲಾಪೂರ,ಎಇ ಶಾಂತರೆಡ್ಡಿ ದಂಡಗುಲಕರ್, ರಘುನಾಥ ನರಸಾಳೆ, ಸುನೀಲ ವೀರಶೆಟ್ಟಿ, ಆರೋಗ್ಯ ನಿರೀಕ್ಷಕ ಶಿವರಾಜಕುಮಾರ, ರಾಜೇಶ, ಶರಣು, ನಾರಾಯಣರೆಡ್ಡಿ, ಅಪ್ಸರ್, ಶಬಾನಾಬೇಗಂ ಇತರರು ಇದ್ದರು.

ಗ್ರಾಮದಲ್ಲಿ ಯಶಸ್ವಿಯಾದ ಜಿಲ್ಲಾಧಿಕಾರಿಗಳ ನಮ್ಮ ನಡೆ ಹಳ್ಳಿ ಕಡೆ ಕಾರ್ಯಕ್ರಮ

sajidpress

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

5 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

8 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

8 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

8 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

8 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420