ಸುರಪುರ: ದೇಶದಲ್ಲಿನ ದಲಿತರ ಸ್ಥಿತಿ ನಿತ್ಯವು ಚಿಂತಾಜನಕವಾಗುತ್ತಿದೆ ಇದಕ್ಕಾಗಿ ನಾವೆಲ್ಲರು ಸಂಘಟಿತರಾಗಿ ಹೋರಾಟಕ್ಕೆ ಮುಂದಾಗಬೇಕಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಎನ್.ಮೂರ್ತಿ ಸ್ಥಾಪಿತ) ಸಂಘಟನೆಯ ಜಿಲ್ಲಾಧ್ಯಕ್ಷ ಹಣಮಂತ ಕಟ್ಟಿಮನಿ ಬೊಮ್ಮನಹಳ್ಳಿ ಮಾತನಾಡಿದರು.
ನಗರದ ಟೈಲರ್ ಮಂಜಿಲ್ನಲ್ಲಿ ನಡೆದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ,ನಮ್ಮ ರಾಜ್ಯದಲ್ಲಿ ಮೊದಲಿಗೆ ದಲಿತ ಸಂಘರ್ಷ ಸಮಿತಿಯನ್ನು ಕಟ್ಟುವ ಮೂಲಕ ಎಲ್ಲರಲ್ಲಿ ಹೋರಾಟದ ಕಿಚ್ಚು ಮೂಡಿಸಿದ ಕೀರ್ತಿ ಪ್ರೋ ಬಿ.ಕೃಷ್ಣಪ್ಪನವರಿಗೆ ಸಲ್ಲುತ್ತದೆ.ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಮ್ಮನ್ನೆಲ್ಲ ಸಂಘಟನೆಯೊಂದಿಗೆ ತೊಡಗಿಸಿಕೊಂಡು ದೇಶದಲ್ಲಿನ ದಲಿತರ ಪರವಾಗಿ ಧ್ವನಿ ಎತ್ತುವಂತೆ ಮಾಡಿದ ಕೀರ್ತಿ ನಮ್ಮ ಸಂಘಟನೆಯ ಸಂಸ್ಥಾಪಕರಾದ ಎನ್.ಮೂರ್ತಿ ಯವರಿಗೆ ಸಲ್ಲುತ್ತದೆ.ಇಂತಹ ಸಂಘಟನೆಗೆ ತಾವೆಲ್ಲರು ಸೇರ್ಪಡೆಗೊಂಡಿರುವುದು ತುಂಬಾ ಸಂತೋಷದ ಸಂಗತಿಯಾಗಿದೆ ಎಂದರು.
ಶರಣಬಸವೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿನಿ ಪ್ರಾಚಿಗೆ ಯುವ ವಿಜ್ಞಾನಿ ಪ್ರಶಸ್ತಿ
ಇದೇ ಸಂದರ್ಭದಲ್ಲಿ ವಿವಿಧ ಸಂಘಟನೆಗಳ ಮುಖಂಡರಾದ ಹಣಮಂತ ದೊಡ್ಮನಿ ಬೋನಾಳ ಸೋಮು ಆಲ್ದಾಳ ಭೀಮಪ್ಪ ಕೊಡೇಕಲ್ ದುರ್ಗಪ್ಪ ಮಾಲಗತ್ತಿ ಪರಮಣ್ಣ ದೊಡ್ಮನಿ ಬಸಪ್ಪ ದೊಡ್ಮನಿ ಮರೆಪ್ಪ ದೊಡ್ಮನಿ ಮುದಕಪ್ಪ ಕೊಡೇಕಲ್ ಚಂದಪ್ಪ ಸುರಪುರ ಮಲ್ಲಪ್ಪ ದೊಡ್ಮನಿ ಸೇರ್ಪಡೆಗೊಂಡರು.ಎಲ್ಲರಿಗೂ ಹೂಮಾಲೆ ಹಾಕಿ ಬರಮಾಡಿಕೊಳ್ಳಲಾಯಿತು.
ಸಭೆಯಲ್ಲಿ ಮುಖಂಡರಾದ ಪಂಡೀತ ನಿಂಬೂರ ಹಯ್ಯಾಳಪ್ಪ ಗುತ್ತೇದಾರ ಜಾಲಿಬೆಂಚಿ ಹಣಮಂತ ಬಿಲ್ಲವ್ ಮಲ್ಲಿಕಾರ್ಜುನ ಮಂದಾಲೆ ದುರ್ಗಪ್ಪ ನಾಗರಾಳ ಭೀಮಣ್ಣ ದೀವಳಗುಡ್ಡ ನಾಗರಾಜ ಓಕಳಿ ಹಾಗು ಭೀಮಣ್ಣ ಹುಲಕಲ್ ಸೇರಿದಂತೆ ಅನೇಕರಿದ್ದರು.
ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…
ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…