ಸುರಪುರ: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಮಿಯವರು ಹಿಂದೆ ೨೦೧೮ರ ಅಕ್ಟೋಬರ್ ೧೦ ರಂದು ನಡೆದ ದುಂಡು ಮೇಜಿನ ಸಭೆಯಲ್ಲಿ ಎ.ಜೆ.ಸದಾಶೀವ ಆಯೋಗದ ವರದಿ ಜಾರಿ ಕುರಿತು ನೀಡಿದ ಭರವಸೆಯನ್ನು ಮರೆತಿದ್ದಾರೆ,ಆದ್ದರಿಂದ ಚಂಡ್ರಕಿ ಗ್ರಾಮದಲ್ಲಿ ಈ ತಿಂಗಳ ೨೧ನೇ ತಾರೀಖು ನಡೆಯುವ ಮುಖ್ಯಮಂತ್ರಿಗಳ ಗ್ರಾಮ ವಾಸ್ತ್ಯವದ ಸಂದರ್ಭದಲ್ಲಿ ಮಾದಿಗ ಯುವ ಸೇನೆಯಿಂದ ಘೇರಾವ್ ಹಾಕುವುದಾಗಿ ಘೋಷಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಹೊರಡಿಸಿರುವ ಅವರು,ರಾಜ್ಯದಲ್ಲಿರುವ ಮಾದಿಗ ಸಮುದಾಯ ಪರಿಶಿಷ್ಟ ಜಾತಿಗಳಲ್ಲೆ ಅತಿ ಹೆಚ್ಚಿನ ಜನಸಂಖ್ಯೆ ಹೊಂದಿದೆ,ಆದರೆ ಮಾದಿಗ ಸಮುದಾಯದ ಜನಂಖ್ಯೆಗೆ ಅನುಗುಣವಾಗಿ ಸಿಗಬೇಕಾದ ಸೌಲಭ್ಯಗಳ ಹಂಚಿಕೆಯಲ್ಲಿ ಅನ್ಯಾಯವಾಗುತ್ತಿದೆ,ಆದ್ದರಿಂದ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಹಿಂದಿನಿಂದಲೂ ಮನವಿ ಮಾಡುತ್ತಿದ್ದರು ಪ್ರಯೋಜನೆಯಾಗುತ್ತಿಲ್ಲ.
ಈಗಾಗಲೆ ನಮ್ಮ ಮನವಿಗೆ ಸ್ಪಂಧಿಸದ ಹಿಂದಿನ ಸರಕಾರದ ಸಚಿವರಾಗಿದ್ದ ಹೆಚ್.ಆಚಿಜನೆಯರ ವಿರುಧ್ಧ ರಾಜಕೀಯ ನಿರ್ಣಯ ಕೈಗೊಳ್ಳಲಾಗಿತ್ತು,ಈಗ ಸಚಿವರಾಗಿರುವ ಪ್ರಯಾಂಕ್ ಖರ್ಗೆಯವರ ವಿರುಧ್ದವು ರಾಜಕೀಯ ನಿರ್ಣಯ ಕೈಗೊಳ್ಳಬೇಕಾಗುವುದು.ಆದ್ದರಿಂದ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ಇದರ ಕುರಿತು ಸಮಾಜ ಕಲ್ಯಾಣ ಸಚಿವರಾದ ಮಾನ್ಯ ಪ್ರಿಯಾಂಕ ಖರ್ಗೆಯವರಿಗು ಮನವಿ ಮಾಡಿದ್ದು,ಅವರು ನೀಡಿದ ಭರವಸೆ ಹುಸಿಯಾಗಿದೆ ಆದ್ದರಿಂದ ಅವರ ನಿರ್ಲಕ್ಷ್ಯವನ್ನು ಖಂಡಿಸುತ್ತೆವೆ ಹಾಗು ಮುಖ್ಯಮಂತ್ರಿಗಳು ಕೂಡಲೆ ಕೇಂದ್ರಕ್ಕೆ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸುವುದಾಗಿ ತಿಳಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…