ಸುರಪುರದಲ್ಲಿ ಸಾಹಿತ್ಯ ಪರಿಷತ್ ಭವನ ನಿರ್ಮಾಣಕ್ಕೆ ನಿವೇಶನ ಒದಗಿಸಲು ಡಿಸಿಗೆ ಮನವಿ

1
17

ಸುರಪುರ: ನಮ್ಮ ನಡೆ ಹಳ್ಳಿ ಕಡೆ ಯೋಜನೆಯ ಯಾದಗಿರಿ ಜಿಲ್ಲಾಧಿಕಾರಿಗಳು ಖಾನಾಪುರ ಎಸ್.ಹೆಚ್ ಗ್ರಾಮದಲ್ಲಿ ಗ್ರಾಮ ವಾಸ್ತವ್ಯಕ್ಕೆ ಆಗಮಿಸಿದ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ:ರಾಗಪ್ರಿಯ ಆರ್.ಅವರನ್ನು ಭೇಟಿ ಮಾಡಿದ ಸುರಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷರು ಹಾಗು ಇತರೆ ಮುಖಂಡರು, ಸುರಪುರ ನಗರದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಭವನ ನಿರ್ಮಿಸಲು ನಿವೇಶನ ಒದಗಿಸುವಂತೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಶ್ರೀನಿವಾಸ ಜಾಲವಾದಿ,ಮುಖಂಡರಾದ ನಿವೃತ್ತ ಎಸ್ಪಿ ಚಂದ್ರಕಾಂತ ಭಂಡಾರೆ ಗಾಯಕರಾದ ಶ್ರೀಹರಿರಾವ್ ಆದವಾನಿ ರಾಘವೇಂದ್ರ ಭಕ್ರಿ ಇತರರಿದ್ದರು.ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಿಗೆ ಕಸಾಪ ವತಿಯಿಂದ ಹೊರತರಲಾಗಿರುವ ಸುರಗಿರಿ ಕೃತಿಯನ್ನು ಉಡುಗೊರೆಯಾಗಿ ನೀಡಲಾಯಿತು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here