ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು

0
28

ಕೋಲಾರ: ಜಿಲ್ಲೆ ಮತ್ತು ತಾಲೂಕಿನ ಮುದುವತ್ತಿ ಗ್ರಾಮದಲ್ಲಿ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಡಾ ಬಿ ಆರ್ ಅಂಬೇಡ್ಕರ್ ಮಹಿಳಾ ಸೇವಾ ಟ್ರಸ್ಟ್ (ರಿ) ಹಾಗೂ ಜೀವನ ಜ್ಯೋತಿ ಚಾರಿಟೇಬಲ್ ಸೋಶಿಯಲ್ ಸರ್ವಿಸ್ ಟ್ರಸ್ಟ್ (ರಿ) ಇವರ ಸಂಯುಕ್ತ ಆಶ್ರಯದಲ್ಲಿ ಬೆಂಗಳೂರಿನ ಶಂಕರ ಕಣ್ಣಿನ ಆಸ್ಪತ್ರೆ ವತಿಯಿಂದ ಕಳೆದ 15ದಿನಗಳ ಹಿಂದೆ ನಡೆದ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

Contact Your\'s Advertisement; 9902492681

ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ: ಮತ್ತಿಮೂಡ

ಈ ಶಿಬಿರದಲ್ಲಿ 200ಕ್ಕೂ ಹೆಚ್ಚು ಜನರು ಪಾಲ್ಗೊಂಡು ನೇತ್ರ ತಪಾಸಣೆ ಮಾಡಿಸಿ ಕೊಂಡು ಇದರಲ್ಲಿ ಕನ್ನಡಕಕ್ಕೆ ಆಯ್ಕೆ ಆದವರಿಗೆ ಸೋಮವಾರ ಬೆಳಿಗ್ಗೆ ಮುದುವತ್ತಿ ಗ್ರಾಮ ಪಂಚಾಯ್ತಿ ಆವರಣದಲ್ಲಿ 35 ಜನರಿಗೆ ಉಚಿತವಾಗಿ ಕನ್ನಡಕಗಳನ್ನು ಗ್ರಾಮ ಪಂಚಾಯ್ತಿ ಸದಸ್ಯರಾದ ಎಮ್ ಎಮ್ ವೆಂಕಟೇಶ್ ರವರು ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಜೀವನ ಜ್ಯೋತಿ ಚಾರಿಟೇಬಲ್ ಸೋಶಿಯಲ್ ಸರ್ವಿಸ್ ಟ್ರಸ್ಟ್ ನ ಸಂಸ್ಥಾಪಕರರು ಹಾಗೂ ಅಧ್ಯಕ್ಷರಾದ ಕುಮಾರಿ ಡಾ. ನೇತ್ರಾವತಿ, ಡಾ.ಬಿ.ಆರ್ ಅಂಬೇಡ್ಕರ್ ಮಹಿಳಾ ಸೇವಾ ಟ್ರಸ್ಟ್ ನ ಸಂಸ್ಥಾಪಕರು ಹಾಗೂ ಅಧ್ಯಕ್ಷರಾದ ಶೋಭಾ ಕೆ, ನಿರ್ದೇಶಕರಾದ ಅವಿನಾಶ್, ಹಿರಿಯ ಮುಖಂಡರಾದ ಕಡತ್ತೂರು ಕೃಷ್ಣಪ್ಪ, ಮುದುವತ್ತಿ ಗ್ರಾಮ ಪಂಚಾಯ್ತಿ ಸದಸ್ಯರು, ಊರಿನ ಗ್ರಾಮಸ್ಥರು ಹಾಜರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here