ಬಿಸಿ ಬಿಸಿ ಸುದ್ದಿ

ಸುರಪುರ:ತಾಲೂಕು ಪಂಚಾಯತ ಆವರಣದಲ್ಲಿ ವಿಕಲಚೇತನರ ತರಬೇತಿ ಉದ್ಯೋಗ ಶಿಬಿರ

ಸುರಪುರ: ತಾಲೂಕಾ ಪಂಚಾಯತ ಆವರಣದಲ್ಲಿ ದಿ. ಅಸೋಸಿಯೇಷನ್ ಆಫ್ ಪೀಪಲ್ ವಿತ್ ಡಿಸೆಬಿಲಿಟಿ (ಎ.ಪಿ.ಡಿ) ಸಂಸ್ಥೆ ಬೆಂಗಳೂರು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಯಾದಗಿರಿ ಮತ್ತು ತಾಲೂಕಾ ಪಂಚಾಯತ ಸುರಪುರ ಹಾಗೂ ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಿರುದ್ಯೋಗಿ ವಿಕಲಚೇತನರಿಗೆ ತರಬೇತಿ ಮತ್ತು ಉದ್ಯೋಗ ಆಯ್ಕೆ ಶಿಬಿರ ನಡೆಸಲಾಯಿತು.

ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ತಾಲೂಕಾ ಪಂಚಾಯತ ಯೋಜನಾ ಅಧಿಕಾರಿಗಳಾದ ಕುಮಲಯ್ಯ, ವಿಕಲಚೇತನರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಮತ್ತು ಸ್ವಾಲಂಬನೆಗಳ ಜೀವನ ನಡೆಸುವುದರ ಜೊತೆಗೆ ಎ.ಪಿ.ಡಿ. ಸಂಸ್ಥೆಯಂತ ಸಹಕಾರದಿಂದ ಉದ್ಯೋಗ ಪಡೆದು ಇನ್ನೊಬ್ಬರಿಗೆ ಮಾದರಿಯಾಗುವಂತ ವ್ಯಕ್ತಿಗಳಾಗಿ ಬದಲಾಗಬೇಕೆಂದು ನುಡಿದರು. ಹಾಗೂ ಗ್ರಾಮ ಪಂಚಾಯತಿಮಟ್ಟದ ಶೇಕಡಾ ೫ ರಷ್ಟು ಅನುದಾನವನ್ನು ೧೫ನೇ ಹಣಕಾಸು ಯೋಜನೆಯಲ್ಲಿ ಹೊಸ ತಂತ್ರಜ್ಞಾನದಲ್ಲಿ ವಿಕಲಚೇತನರಿಗೆ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ರಾಷ್ಟ್ರೀಯ ಒಲಂಪಿಕ್ ಮಟ್ಟದ ಪರೀಕ್ಷೆಯಲ್ಲಿ ತೇರ್ಗಡೆಯಾದವರಿಗೆ ಬಹುಮಾನ ವಿತರಣೆ

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಗೂ ತಾಲೂಕಾ ವಿಕಲಚೇತನ ನೋಡಲ್ ಅಧಿಕಾರಿಗಳಾದ ಮೀನಾಕ್ಷಿ ಪಾಟೀಲ ಮಾತನಾಡಿ, ಎ.ಪಿ.ಡಿ. ಸಂಸ್ಥೆಯು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ಸಾಕಾಷ್ಟು ವಿಕಲಚೇತನರಿಗೆ ಉದ್ಯೋಗಗಳನ್ನು ನೀಡಿದ್ದು ಅವರ ಕಾರ್ಯ ಶ್ಲಾಘನೀಯ ಎಂದು ನುಡಿದರು.

ಇದೇ ಸಂದರ್ಭದಲ್ಲಿ ವಿಕಲಚೇತನರ ಹಕ್ಕುಗಳ ಒಕ್ಕೂಟದ ವಿಭಾಗಿಯ ಅಧ್ಯಕ್ಷ ಹಾಗು ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಸಂಗನಗೌಡ ಧನರಡ್ಡಿ ಇವರಿಗೆ ಸನ್ಮಾನಿಸಿಗೌರವಿಸಲಾಯಿತು.ಇದೇ ಸಂದರ್ಭದಲ್ಲಿ ೧೦ ವಿಕಲಚೇತನ ಹಾಗೂ ಹಿರಿಯ ನಾಗರಿಕರಿಗೆ ಸಾಧನೆ ಸಲಕರಣೆ ವಿತರಿಸಲಾಯಿತು. ೬೦ಕ್ಕೂ ಅಧಿಕ ವಿಕಲಚೇತನರು ಉದ್ಯೋಗ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದರು.

15 ದಿನದಲ್ಲಿ ನೆರೆಯ ರಾಜ್ಯಗಳಿಂದ ಮರಳಿದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ

ಈ ಸಂದರ್ಭದಲಿ ವಿಕಲಚೇತನರ ಮುಖಂಡರಾದ ವಿಕಲಚೇತನರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬೈರಿಮರಡಿ,ತಾಲೂಕು ಅಧ್ಯಕ್ಷ ನಾಗೇಂದ್ರ ದೊರಿ ಚಂದಲಾಪೂರ, ಎಪಿ.ಡಿ. ಸಂಸ್ಥೆಯ ಅಧಿಕಾರಿಗಳಾದ ಶಿವಯೋಗಿ ಗುಲಬರ್ಗಾ, ಶ್ರೀಧರ ಮಂಗಳೂರು ಎಮ್.ಆರ್.ಡಬ್ಲ್ಯೂ, ಮಾಳಪ್ಪ ಪೂಜಾರಿ, ದೇವಿಂದ್ರಪ್ಪ ಬಾಚಿಮಟ್ಟಿ ಉಪಾಧ್ಯಕ್ಷರು, ಶರಣಯ್ಯಸ್ವಾಮಿ ದೇವಪುರ, ಪ್ರದೀಪಗೌಡ ಪಾಟೀಲ, ಶಂಕ್ರಯ್ಯಸ್ವಾಮಿ ಸಹ ಕಾರ್ಯದರ್ಶಿ, ಸಿದ್ದಪ್ಪ ಅರಿಕೇರಿ ಸ್ವಾಗತಿಸಿದರು, ರೇಣುಕಾ ಪಾಟೀಲ ಪ್ರಾರ್ಥಿಸಿದರು, ದೊಡ್ಡಪ್ಪಗೌಡ ನಾಗರಾಳ ನಿರೂಪಿಸಿದರು, ಮರಲಿಂಗಪ್ಪ ಚಂದ್ಲಾಪುರ ವಂದಿಸಿದರು.

sajidpress

Recent Posts

ಶಹಾಬಾದ: ಸಂಪೂರ್ಣತಾ ಅಭಿಯಾನ ಉತ್ಸವಕ್ಕೆ ಚಾಲನೆ

ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…

4 mins ago

ಗಿಡ-ಮರಗಳ ಸಂರಕ್ಷಣೆ ಮಾಡದಿದ್ದರೇ ಪ್ರಕೃತಿಗೆ ಗಂಡಾಂತರ ತಪ್ಪಿದ್ದಲ್ಲ

ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…

7 mins ago

ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮ

ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…

15 mins ago

ಸಮಸ್ತ ಲಿಂಗಾಯತರ ಪ್ರಗತಿಗೆ ಲಿಂಗಾಯತ ಸ್ವತಂತ್ರ ಧರ್ಮ ಅಗತ್ಯ: ಪೂಜ್ಯ ಶ್ರೀ ಶಿವಾನಂದ ಮಹಾಸ್ವಾಮಿಗಳು

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗಕ್ಕೆ ಕಲಂ 371ಜೆ ಯಂತೆ ಲಿಂಗಾಯತ ಧರ್ಮವನ್ನು ಸ್ವತಂತ್ರ ಧರ್ಮ ಎಂದು ಘೋಷಣೆ ಮಾಡಲು ಸರಕಾರದ…

1 hour ago

ವಿಭಾಗ ಮಟ್ಟದ ದಾಸ ಸಾಹಿತ್ಯ ಸಮ್ಮೇಳನದಲ್ಲಿ ವೈದ್ಯ ಶ್ರೀ ಪುರಸ್ಕೃತ ಡಾ. ಶರಣಬಸಪ್ಪ ಕ್ಯಾತನಾಳ ಪುರಸ್ಕಾರ

ಕಲಬುರಗಿ: ನಗರದ ಸಂಗಮೇಶ್ವರ ಸಭಾಗೃಹದಲ್ಲಿ  ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ವಲಯದ ವಿಭಾಗ ಮಟ್ಟದ 2ನೇ ದಾಸ ಸಾಹಿತ್ಯ ಸಮ್ಮೇಳನ…

2 hours ago

ಜಪಾನ್ ವಿ. ವಿಯಲ್ಲಿ ಪ್ರಬಂಧ ಮಂಡನೆ ಮಾಡಿದ ಡಾ. ಪಾಸೋಡಿ

ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…

4 hours ago