ವೀರಶೈವ ಜಂಗಮ ಅರ್ಚಕ ಪುರೋಹಿತರ ಸಂಘದ ಪದಾಧಿಕಾರಿಗಳ ನೇಮಕ

ಸುರಪುರ: ತಾಲೂಕಿನ ಲಕ್ಷ್ಮೀಪುರ ಶ್ರೀಗಿರಿ ಮಠದ ಆವರಣದಲ್ಲಿ ಕರ್ನಾಟಕ ರಾಜ್ಯ ವೀರಶೈವ ಜಂಗಮ ಅರ್ಚಕ ಪುರೋಹಿತರ ಸಂಘದ ಸುರಪುರ ತಾಲೂಕು ಘಟಕದ ನೂತನ ಪದಾಧಿಕಾರಿಗಳ ನೇಮಕ ಸಭೆಯನ್ನು ನಡೆಸಲಾಯಿತು.

ಸಭೆಯ ಸಾನಿಧ್ಯ ವಹಿಸಿದ್ದ ಶ್ರೀಗಿರಿ ಮಠದ ಚೆನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಆದಿಕಾಲ ದಿಂದಲೂ ಸನಾತನ ಪರಂಪರೆಯಲ್ಲಿ ವೇದ ಶಾಸ್ತ್ರ ಪುರಾಣಗಳಿಗೆ ಅದರದ್ದೇ ಆದ ಮಹತ್ವವಿದೆ,ಅದನ್ನು ಮಾನವ ಸಮಾಜಕ್ಕೆ ತಲುಪಿಸುವ ಮೂಲಕ ವೇದಾಗಮಗಳ ಪಠಣ ಮತ್ತು ಮಂತ್ರ ಶಾಸ್ತ್ರೋಕ್ತ ಆಚರಣೆಗಳನ್ನು ನಡೆಸಿಕೊಂಡು ಬಂದಿರುವುದು ವೀರಶೈವ ಜಂಗಮ ಅರ್ಚಕ ಪುರೋಹಿತರು.ಇಂತಹ ಒಂದು ವಿದ್ಯೆ ನಿರಂತರವಾಗಿ ಮುಂದುವರೆಯಲು ಹಾಗು ವೀರಶೈವ ಜಂಗಮ ಅರ್ಚಕರ ಅನೇಕ ಸಮಸ್ಯೆಗಳನ್ನು ನಿವಾರಣೆಗೆ ಸಂಘಟನೆಯ ಅವಶ್ಯಕತೆಯಿದೆ.

ಸುರಪುರ:ತಾಲೂಕು ಪಂಚಾಯತ ಆವರಣದಲ್ಲಿ ವಿಕಲಚೇತನರ ತರಬೇತಿ ಉದ್ಯೋಗ ಶಿಬಿರ

ಇದನ್ನು ಅರಿತು ರಾಜ್ಯದಲ್ಲಿ ಸಂಘಟನೆಯನ್ನು ಕಟ್ಟುವ ಮೂಲಕ ಪುರೋಹಿತ ಸಮುದಾಯವನ್ನು ಬೆಳೆಸುವ ಕಾರ್ಯಕ್ಕೆ ಮುಂದಾಗಿರುವ ಸಂಘಟನೆಯ ಸೇವೆ ಅನನ್ಯವಾಗಿದೆ.ಇಂತಹ ಸಂಘ ಇಂದು ನಮ್ಮ ಸುರಪುರ ತಾಲೂಕಿನಲ್ಲಿಯೂ ಜನಿಸಿರುವುದು ಸಂತೋಷದ ಸಂಗತಿಯಾಗಿದೆ.ಸಂಘಟನೆಯ ಬೆಳವಣಿಗೆಗೆ ಎಲ್ಲ ರೀತಿಯ ನೆರವನ್ನು ನೀಡಲು ಶ್ರೀಮಠ ಸದಾ ನಿಮ್ಮೊಂದಿಗಿದೆ ಎಂದರು.

ಇದೇ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷರಾದ ಶ್ರೀ ವೇದ ವಿದ್ಯಾಭೂಷಣ ಚನ್ನಯ್ಯ ಶಾಸ್ತ್ರಿಗಳು ಸಂಸ್ಥಾನಮಠ ಹಾಗು ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ವೇದ ಶಿವಯ್ಯ ಗುಡಿಮಠ ಬೀರನಾಳ ಇವರುಗಳ ನೇತೃತ್ವದಲ್ಲಿ ನೂತನ ಪದಾಧಿಕಾರಿಗಳನ್ನು ನೇಮಕಗೊಳಿಸಲಾಯಿತು.

15 ದಿನದಲ್ಲಿ ನೆರೆಯ ರಾಜ್ಯಗಳಿಂದ ಮರಳಿದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ

ಪದಾಧಿಕಾರಿಗಳು: ಶ್ರೀ ವೇ.ಮೂ ಶಿವಪುತ್ರ ಸ್ವಾಮಿ ಮುಷ್ಠಹಳ್ಳಿ ಗೌರವಾಧ್ಯಕ್ಷರನ್ನಾಗಿ ಶ್ರೀ ವೇ.ಮೂ ಬಸವಲಿಂಗಯ್ಯ ಶಾಸ್ತ್ರಿ ಶ್ರೀಗಿರಿ ಮಠ ಲಕ್ಷ್ಮೀಪುರ ಅಧ್ಯಕ್ಷರಾಗಿ,ಶ್ರೀ ವೇ.ಮೂ.ಷಡಕ್ಷರಿ ಶಾಸ್ತ್ರಿ ಸೂಗುರು ಪ್ರಧಾನ ಕಾರ್ಯದರ್ಶಿಶ್ರೀ ಮಹೇಶ ಶಾಸ್ತ್ರಿ ಹಿರೇಮಠ ತಿಮ್ಮಾಪುರ ಸಹ ಕಾರ್ಯದರ್ಶಿಯನ್ನಾಗಿ ನೇಮಕಗೊಳಿಸಲಾಯಿತು.

ಸಭೆಯಲ್ಲಿ ಗಂಗಾಧರಯ್ಯ ಶಾಸ್ತ್ರಿ ಹಿರೇಮಠ ವಿದ್ವಾನ್ ಶರಣಯ್ಯ ಶಾಸ್ತ್ರಿ ಶಹಾಪುರ ವಿರೇಶ ಪಂಚಾಂಗಮಠ ಹಾಗು ತಾಲೂಕು ವೀರಶೈವ ಜಂಗಮ ಪುರೋಹಿತ ಅರ್ಚಕ ವೃಂದ ಇದ್ದರು.

sajidpress

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

6 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

8 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

8 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

8 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

8 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420