ಬಿಸಿ ಬಿಸಿ ಸುದ್ದಿ

ಎಲ್ಲೆ ಹೋದರೂ ಶಹಾಬಾದನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ-ವೆಂಕನಗೌಡ ಪಾಟೀಲ್

ಶಹಾಬಾದ:ನಗರದ ಡಿವಾಯ್‌ಎಸ್‌ಪಿ ವೆಂಕನಗೌಡ ಪಾಟೀಲ ಅವರು ವರ್ಗಾವಣೆಗೊಂಡ ಪ್ರಯುಕ್ತ ಸೋಮವಾರ ಡಿವಾಯ್‌ಎಸ್‌ಪಿ ಕಚೇರಿ ಹಾಗೂ ಸಾರ್ವಜನಿಕರಿಂದ ಆಯೋಜಿಸಲಾದ ಬಿಳ್ಕೋಡುಗೆ ಸಮಾರಂಭದಲ್ಲಿ ಅವರನ್ನು ಸನ್ಮಾನಿಸಿ ಬಿಳ್ಕೋಡಲಾಯಿತು.

ಈ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿಕೊಂಡು ಮಾತನಾಡಿದ ಡಿವಾಯ್‌ಎಸ್‌ಪಿ ವೆಂಕನಗೌಡ ಪಾಟೀಲ, ಸಾರ್ವಜನಿಕರ ಸೇವೆ ಮಾಡಲು ಪೊಲೀಸ್ ಇಲಾಖೆ ನಮಗೆ ನೀಡಿರುವ ದೊಡ್ಡ ಅವಕಾಶವನ್ನು ನಾವು ಸಮಪರ್ಕವಾಗಿ ಮಾಡುವುದು ನಮ್ಮ ಕರ್ತವ್ಯ. ನಗರದಲ್ಲಿ ಸಿಕ್ಕಂತಹ ಜನರ ಸಹಕಾರ ಹಾಗೂ ಇಲಾಖೆಯ ಮೇಲಾಧಿಕಾರಿಗಳ ಮಾರ್ಗದರ್ಶನ, ಸಿಬ್ಬಂದಿಯ ಸಹಕಾರದಿಂದ ಒಳ್ಳೆಯ ಕೆಲಸ ಮಾಡಿದ್ದೆನೆ ಎಂಬ ತೃಪ್ತಿ ಭಾವನೆ ನನಗಿದೆ. ಅದರಲ್ಲೂ ಸಾರ್ವಜನಿಕರ ಸಹಾಯ ಸಹಕಾರದಿಂದ ಶಹಾಬಾದ ನಗರದಲ್ಲಿ ಉತ್ತಮ ಸೇವೆ ಸಲ್ಲಿಸಲು ಸಹಕಾರಿಯಾಗಿದೆ.ನಾನು ಎಲ್ಲೆ ಹೋದರೂ ಶಹಾಬಾದನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಹೇಳಿದರು.

ದಸಂಸ ರಾಜ್ಯ ಸಂಘಟನಾ ಸಂಚಾಲಕ ಮರೆಪ್ಪ ಹಳ್ಳಿ ಮಾತನಾಡಿ, ಸುಮಾರು ಒಂದು ವರ್ಷಗಳ ಕಾಲ ಅಲ್ಪ ಅವಧಿಯಲ್ಲಿ ತಮ್ಮ ಅಮೋಘ ಸೇವೆಯ ಮೂಲಕ ದಕ್ಷ ಅಧಿಕಾರಿ ಹಾಗೂ ಸಾರ್ವಜನಿಕರೊಂದಿಗೆ ಬೆರೆಯುವ ಸರಳ ಸಜ್ಜನಿಕೆ ವ್ಯಕ್ತಿಯಾಗಿದ್ದರು.
ನೂತನ ಶಹಾಬಾದ ಡಿವಾಯ್‌ಎಸ್‌ಪಿ ಉಮೇಶ ಚಿಕ್ಕಮಠ, ಚಿತ್ತಾಪೂರ ಪಿಐ ಕೃಷ್ಣಪ್ಪ ಕಲ್ಲದೇವರು, ಡಾ.ಗುಂಡಣ್ಣ ಬಾಳಿ, ಅರುಣ ಪಟ್ಟಣಕರ್, ಮೃತ್ಯುಂಜಯ್ ಹಿರೇಮಠ, ಈರಣ್ಣ ಕಾರ್ಗಿಲ್, ಸಿದ್ಧಲಿಂಗ ಬಾಳಿ ಅನಿಸಿಕೆ ವ್ಯಕ್ತಪಡಿಸಿದರು.

ಡಿವಾಯ್‌ಎಸ್‌ಪಿ ಕೆ.ಬಸವರಾಜ, ಕಾಳಗಿ ಪಿಐ ವಿನಾಯಕ,ಕರ್ನಾಟಕ ತೊಗರಿ ಮಂಡಳಿ ಅಧ್ಯಕ್ಷ ಲಿಂಗಾರಡ್ಡಿ ಪಾಟೀಲ ವೇದಿಕೆಯ ಮೇಲಿದ್ದರು.

ಚಿತ್ತಾಪೂರ ಪಿಎಸ್‌ಐ ಮಂಜುನಾಥ ರೆಡ್ಡಿ, ಶಹಾಬಾದ ಪಿಎಸ್‌ಐ ತಿರುಮಲೇಶ, ಕಾಳಗಿ ಪಿಎಸ್‌ಐ ದಿವ್ಯ,ವಾಡಿ ಪಿಎಸ್‌ಐ ಶ್ರೀಶೈಲ ಅಂಭಾಟಿ, ಮಾಡಬೂಳ ಪಿಎಸ್‌ಐ ವಿಜಯಕುಮಾರ, ಗುಂಡಪ್ಪ ಕೋಗನೂರ, ನಾಗೇಂದ್ರ ತಳವಾರ,ಹಣಮಂತ ಅಷ್ಟಗಿ, ಯಾದವ ರಾಠೋಡ, ಮಹಾನಂದ,ಅಮರೇಶ, ಸತೀಶ ಪೂಜಾರಿ,ಸಿದ್ರಾಮ ಹಿರೊಳ್ಳಿ, ಸೇರಿದಂತೆ ನಗರದ ಸಾರ್ವಜನಿಕರು ಇದ್ದರು.

ಡಿವಾಯ್‌ಎಸ್‌ಪಿ ವೆಂಕನಗೌಡ ಪಾಟೀಲ ಅವರು ವರ್ಗಾವಣೆಗೊಂಡ ಪ್ರಯುಕ್ತ ಸೋಮವಾರ ಡಿವಾಯ್‌ಎಸ್‌ಪಿ ಕಚೇರಿ ಹಾಗೂ ಸಾರ್ವಜನಿಕರಿಂದ ಆಯೋಜಿಸಲಾದ ಬಿಳ್ಕೋಡುಗೆ ಸಮಾರಂಭದಲ್ಲಿ ನೂತನ ಶಹಾಬಾದ ಡಿವಾಯ್‌ಎಸ್‌ಪಿ ಉಮೇಶ ಚಿಕ್ಕಮಠ ಮಾತನಾಡಿದರು.

ಸನ್ಮಾನ ಸ್ವೀಕರಿಸಿಕೊಂಡು  ಡಿವಾಯ್‌ಎಸ್‌ಪಿ ವೆಂಕನಗೌಡ ಪಾಟೀಲ ಮಾತನಾಡಿದರು.

emedia line

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

2 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

3 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

3 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

3 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

4 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

4 hours ago