ಕಲಬುರಗಿಯಲ್ಲಿ ನಾಳೆ ಉದ್ಯೋಗ ಮೇಳ

ಕಲಬುರಗಿ: ರಾಷ್ಟ್ರೀಯ ವೃತ್ತಿ ಸೇವೆ ಯೋಜನೆ ಹಾಗೂ ಮಾದರಿ ವೃತ್ತಿ ಕೇಂದ್ರದ ಅಡಿಯಲ್ಲಿ ಕಲಬುರಗಿಯ ಎಂ.ಎಸ್.ಕೆ. ಮಿಲ್ ರಸ್ತೆಯಲ್ಲಿರುವ ಸರ್ಕಾರಿ ಐ.ಟಿ.ಐ. ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಇದೇ ಫೆಬ್ರವರಿ 24 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಉದ್ಯೋಗ ಮೇಳವನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಉದ್ಯೋಗ ಮೇಳದಲ್ಲಿ ರಾಜ್ಯದ ಪ್ರತಿಷ್ಠಿತ ಕಂಪನಿಗಳಾದ ಬೆಂಗಳೂರಿನ ಕ್ವಿಸ್ ಕಾರ್ಪ್ ಲಿ., ಎಕ್ಸ್‍ಟ್ರಿಮ್ ಸಾಫ್ಟ್‍ಟೆಕ್, ಕಲಬುರಗಿಯ ಹೆಚ್.ಸಿ.ಜಿ. ಕ್ಯಾನ್ಸರ್ ಸೆಂಟರ್, ಭಾರತ ಫೈನಾನ್‍ಷಿಯಲ್ ಇನ್‍ಕ್ಲೂಜನ್ ಲಿ., ಮಠ ಕಾರ್ಪೋರೇಟ್ ಸಲ್ಯೂಷನ್, ಕಿಸಾನ ಕ್ರಾಫ್ಟ್ ಅಗ್ರೋ ಫರ್ಟಿಲೈಜರ್, ಬೆಂಗಳೂರಿನ ಜೋಶ್ ಮ್ಯಾನೇಜ್‍ಮೆಂಟ್, ಹೈದರಾಬಾದಿನ ಫುಟರಜ್ ಸ್ಟಾಫಿಂಗ್ ಸಲ್ಯೂಷನ್ ಪೈ.ಲಿ., ಬೆಂಗಳೂರಿನ ಪ್ರಗತಿ ಸಲ್ಯೂಷನ್, ತುಮಕೂರಿನ ಅಭಯ ಸರ್ವೀಸಸ್ ಹಾಗೂ ಎ1 ಜಾಬ್ ಕನ್ಸಲ್‍ಟೆನ್ಸಿ ಆಂಡ್ ಸರ್ವೀಸಸ್ ಕಂಪನಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲಿವೆ. ಈ ಉದ್ಯೋಗ ಮೇಳದಲ್ಲಿ ವಯೋಮಿತಿ 18 ರಿಂದ 35 ವರ್ಷದೊಳಗಿನ  ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.

ತಹಸೀಲ್ದಾರರಿಂದ ಗ್ರಾಮ ವಾಸ್ತವ್ಯ: ಸಮಸ್ಯೆ ಆಲಿಸಿದ ನಾಗಮ್ಮಾ

ಈ ಉದ್ಯೋಗ ಮೇಳದಲ್ಲಿ ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐ.ಟಿ.ಐ., ಡಿಪ್ಲೋಮಾ, ಬಿ.ಫಾರ್ಮಾ, ಎಂ.ಹೆಚ್.ಎ. ಇಂಜಿನಿಯರಿಂಗ್ (ಸಿವಿಲ್ ಬ್ರ್ಯಾಂಚ್ ಹೊರತುಪಡಿಸಿ) ಹಾಗೂ ಪದವೀಧರ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆಯಬೇಕು. ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆ ನೀಡಲಾಗುವುದಿಲ್ಲ.

ಕೋವಿಡ್-19 ಹಿನ್ನೆಲೆಯಲ್ಲಿ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಎಲ್ಲಾ ಅಭ್ಯರ್ಥಿಗಳು   ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಹಾಗೂ ಸ್ಯಾನಿಟೈಜ್ ಉಪಯೋಗಿಸಬೇಕು.

ಕೊರೊನಾ ಬಗ್ಗೆ ನಿರ್ಲಕ್ಷ್ಯ ವಹಿಸಿದರೇ ಮುಂದೆ ಗಡಾಂತರ: ತಹಸೀಲ್ದಾರ ವರ್ಮಾ

ಮತ್ತಿತರ  ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ  ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-274846 ಗೆ ಸಂಪರ್ಕಿಸಲು ಕೋರಲಾಗಿದೆ.

sajidpress

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

7 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

9 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

10 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

10 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

10 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

10 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420