ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಂತರರಾಷ್ಟ್ರೀಯ ಸಮ್ಮೇಳನ

1
54

ಕಲಬುರಗಿ: ಬಸವಪೀಠ ಹಾಗೂ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಇವುಗಳ ಸಂಯುಕ್ತಾಶ್ರಯದಲ್ಲಿ “ವಚನ ಸಾಹಿತ್ಯ: ಸಾಮಾಜಿಕ, ಸಾಂಸ್ಕøತಿಕ ಮತ್ತು ವೈಚಾರಿಕ ಅನುಸಂಧಾನ” ಕುರಿತು ಇದೇ ಫೆಬ್ರವರಿ 25 ಮತ್ತು 26 ರಂದು ಎರಡು ದಿನಗಳ ಅಂತರರಾಷ್ಟ್ರೀಯ ಸಮ್ಮೇಳನವನ್ನು ಕಲಬುರಗಿ ಕೇಂದ್ರೀಯ ವಿಶ್ವವಿದ್ಯಾಲಯದ ವ್ಯವಹಾರ ಅಧ್ಯಯನ ನಿಕಾಯದ ಹತ್ತಿರದ ಸಮ್ಮೇಳನ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ಫೆಬ್ರವರಿ 25 ರಂದು ಬೆಳಿಗ್ಗೆ 10.30 ಗಂಟೆಗೆ ಖ್ಯಾತ ಕನ್ನಡ ಸಾಹಿತಿಗಳಾದ ಪ್ರೊ. ಮ.ಗು. ಬಿರಾದಾರ ಅಂತರರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸುವರು. ಬೆಂಗಳೂರಿನ ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ ಹಾಗೂ ಕರ್ನಾಟಕ ಲೋಕಸೇವಾ ಆಯೋಗ ಸದಸ್ಯ ಪ್ರೊ.ರಂಗರಾಜ ವನದುರ್ಗ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

Contact Your\'s Advertisement; 9902492681

ಕಾಗಿಣಾ ನದಿಗೆ ಹಾರಿದ ವೃದ್ಧೆಯನ್ನು ರಕ್ಷಿಸಿದ ಯುವಕರು

ಪ್ರಸಿದ್ದ ಲೇಖಕರು ಮತ್ತು ಚಿಂತಕರಾದ ಪ್ರೊ. ಬಸವರಾಜ ಕಲ್ಗುಡಿ ಆಶಯ ಭಾಷಣ ಮಾಡುವರು. ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಕುಲಪತಿ ಪ್ರೊ. ಎಮ್.ವಿ. ಆಳಗವಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಅಂದು ಮಧ್ಯಾಹ್ನ 2 ರಿಂದ ಮಧ್ಯಾಹ್ನ 3.30 ಗಂಟೆಯವರೆಗೆ ವಿಚಾರ ಗೋಷ್ಠಿ-1 ಹಾಗೂ ಮಧ್ಯಾಹ್ನ 3.45 ರಿಂದ ಸಂಜೆ 5.15 ಗಂಟೆಯವರೆಗೆ ಗೋಷ್ಠಿ-2 ನಡೆಯಲಿದೆ. ಅದೇ ರೀತಿ ಸಂಜೆ 5.30 ರಿಂದ 6.30 ಗಂಟೆಯವರೆಗೆ ವಚನ ಗಾಯನ ಕಾರ್ಯಕ್ರಮ ಜರುಗಲಿದೆ.

ವಾಡಿ-ಚಿತ್ತಾಪುರ ಬಸ್ ಸೌಲಭ್ಯ ಒದಗಿಸಲು ವಿದ್ಯಾರ್ಥಿಗಳ ಪ್ರತಿಭಟನೆ

ಫೆಬ್ರವರಿ 26 ರಂದು ಮಧ್ಯಾಹ್ನ 3.30 ಗಂಟೆಗೆ ಎರಡನೇ ದಿನದ ಅಂತರರಾಷ್ಟ್ರೀಯ ಸಮ್ಮೇಳನದ ಕಾರ್ಯಕ್ರಮದಲ್ಲಿ ಬಸವಕಲ್ಯಾಣ ಬಸವ ಮಹಾಮನೆ ಸಂಸ್ಥೆಯ ಅಧ್ಯಕ್ಷ ಪೂಜ್ಯ ಶ್ರೀ ಬೆಲ್ದಾಳ ಸಿದ್ದರಾಮ ಶರಣರು ಹಾಗೂ ಕಲಬುರಗಿಯ ಹಿಂಗುಲಾಂಬಿಕಾ ಆಯುರ್ವೇದ ವಿಜ್ಞಾನ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಅಲ್ಲಮಪ್ರಭು ಗುಡ್ಡಾ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಪ್ರಸಿದ್ಧ ಲೇಖಕ ಮತ್ತು ಚಿಂತಕರಾದ ಪ್ರೊ.ಎಚ್.ಎಸ್. ರಾಘವೇಂದ್ರರಾವ್ ಅವರು ಸಮಾರೋಪ ಭಾಷಣ ಮಾಡುವರು. ಕರ್ನಾಟಕ ಕೇಂದ್ರಿಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಮ್.ವಿ. ಅಳಗವಾಡಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ಸಾರಿಗೆ ಬಸ್ ಡಿಕ್ಕಿ: ಮೃತ ಕುಟುಂಬಕ್ಕೆ ಪರಿಹಾರಕ್ಕೆ ಒತ್ತಾಯಿಸಿ ರಸ್ತೆ ತಡೆದು ಪ್ರತಿಭಟನೆ

ಅಂದು ಬೆಳಿಗ್ಗೆ 10 ರಿಂದ ಬೆಳಿಗ್ಗೆ 11.30 ಗಂಟೆಯವರೆಗೆ ಮೂರನೇ ಗೋಷ್ಠಿ, ಬೆಳಿಗ್ಗೆ 11.15 ರಿಂದ ಮಧ್ಯಾಹ್ನ 1.15 ರವರೆಗೆ ನಾಲ್ಕನೇ ಗೋಷ್ಠಿ ಹಾಗೂ ಮಧ್ಯಾಹ್ನ 2 ರಿಂದ ಮಧ್ಯಾಹ್ನ 3.30 ಗಂಟೆಯವರೆಗೆÉ ಐದನೇ ಗೋಷ್ಠಿ ನಡೆಯಲಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here