ಬಿಜೆಪಿ ಪ್ರಶಿಕ್ಷಣ ವರ್ಗದ ಸಮಾರೋಪ ಸಮಾರಂಭ

0
41

ಶಹಾಬಾದ: ಭಾರತೀಯ ಜನತಾ ಪಕ್ಷವು ದೇಶ ಭಕ್ತರನ್ನು ಮತ್ತು ರಾಷ್ಟ್ರಪ್ರೇಮಿಗಳನ್ನು ಕಟ್ಟಿದ ಪಕ್ಷವಾಗಿದ್ದು, ಇಂದು ಹೆಮ್ಮರವಾಗಿ ಬೆಳೆಯುತ್ತಿದೆ ಎಂದರೆ ಅದು ಪಕ್ಷದ ಕಾರ್ಯಕರ್ತರಿಂದಲೇ ಎಂಬುದನ್ನು ನಾವು ತಿಳಿದುಕೊಳ್ಳಬೇಕೆಂದು ಶಾಸಕ ಬಸವರಾಜ ಮತ್ತಿಮಡು ಹೇಳಿದರು.

ಅವರು ನಗರದ ಪಾರ್ವತಿ ಕಲ್ಯಾಣ ಮಂಟಪದಲ್ಲಿ ಶಹಾಬಾದ ಬಿಜೆಪಿ ಮಂಡಲದಿಂದ ಆಯೋಜಿಸಲಾದ ಪ್ರಶಿಕ್ಷಣ ವರ್ಗದ  ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಭಾರತ ದೇಶಕ್ಕೆ ವಿಶ್ವಮಟ್ಟದಲ್ಲಿ ಹೆಸರನ್ನು ತಂದುಕೊಟ್ಟವರು ಪ್ರಧಾನಿ ನರೆಂದ್ರ ಮೋದಿಯವರು. ಅವರ ನಾಯಕತ್ವದಲ್ಲಿ ಮುನ್ನಡೆಯುತ್ತಿರುವ ಬಿಜೆಪಿ ಕಾರ್ಯಕರ್ತರು ಶಿಸ್ತು ಮತ್ತು ಬದ್ಧತೆಯನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜಮುಖಿಯಾಗಿ ಮುನ್ನಡೆಯಬೇಕು.ಮುಂಬರುವ ತಾಪಂ,ಜಿಪಂ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಾಮಾಣಿಕವಾಗಿ ಕೆಲಸ ಮಾಡಿ ಪಕ್ಷದ ಸಂಘಟನೆಯನ್ನು ಬಲಿಷ್ಠಗೊಳಿಸಬೇಕೆಂದು ಹೇಳಿದರು.

Contact Your\'s Advertisement; 9902492681

ಪೊಗರು ಸಿನಿಮಾದಲ್ಲಿ ಬ್ರಾಹ್ಮಣರಿಗೆ ಅಪಮಾನ: ದೃಶ್ಯ ತೆಗೆದು ಹಾಕಲು ಆಗ್ರಹ

ಬಿಜೆಪಿ ಮಂಡಲ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ ಮಾತನಾಡಿ, ನಿಷ್ಠಾವಂತ ಕಾರ್ಯಕರ್ತರೇ ಬಿಜೆಪಿ ಪಕ್ಷಕ್ಕೆ ಆಸ್ತಿ. ಆದ್ದರಿಂದ ನಾವು ಯಾವದೇ ಪಕ್ಷಗಳ ಬಗ್ಗೆ ತಲೆ ಕೆಡಿಸಿಕೊಳ್ಳದೇ ಆರೋಗ್ಯವಂತ ಸಮಾಜ ಹಾಗೂ ಸದೃಢ ಭಾರತ ಕಟ್ಟಲು ನಮ್ಮನ್ನು ನಾವು ಸಮರ್ಪಿಸಿಕೊಂಡು ಕೆಲಸ ಮಾಡಬೇಕೆಂದರು. ಬಿಜೆಪಿಯಲ್ಲಿ ಸಾಮಾನ್ಯ ಕಾರ್ಯಕರ್ತರು ಹಾಗೂ ಚಹಾ ಮಾರುವವ ಸಾಮಾನ್ಯ ಕಾರ್ಯಕರ್ತನು ಪ್ರಧಾನ ಮಂತ್ರಿಯಾಗಲು ಸಾಧ್ಯ. ಬೆರಳೆಣಿಕೆಯ ಸ್ಥಾನ ಗಳಿಸುತ್ತಿದ್ದ ಬಿಜೆಪಿ ಪಕ್ಷ ತತ್ವ ಸಿದ್ಧಾಂತಗಳ ನೆಲೆಗಟ್ಟಿನಲ್ಲಿ ಈ ಮಟ್ಟಕ್ಕೆ ದೊಡ್ಡದಾಗಿ ಬೆಳೆದಿದೆ ಎಂದು ಹೇಳಿದರು.

ಸ್ಮಾರ್ಟ್ ಕ್ಲಾಸ್ ಆರಂಭಕ್ಕೆ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಸಂಘ ನೆರವು

ಪ್ರಶಿಕ್ಷಣ ವರ್ಗದ ರಾಜ್ಯ ಸಂಚಾಲಕ ಶ್ರೀಕಾಂತ ಕುಲಕರ್ಣಿ, ವಿಭಾಗೀಯ ಸಹ ಸಂಚಾಲಕ ಈಶ್ವರಸಿಂಗ್ ಠಾಕೂರ, ವಿಭಾಗಿಯ ಪ್ರಭಾರಿ ಸಂಜಯ ಮಿಸ್ಕಿನ,ಮಂಡಲ ಉಸ್ತುವಾರಿಯಾದ ಲಿಂಗರಾಜ ಬಿರಾದಾರ, ಮಂಡಲ ಸಂಚಾಲಕ ಅರುಣ ಪಟ್ಟಣ್ಣಕರ, ಸಹ ಸಂಚಾಲಕ ನಿಂಗಣ್ಣ ಹುಳಗೋಳಕರ,ಶಿಬಿರದ ಪ್ರಬಂಧಕರು, ಪ್ರತಿನಿಧಿಗಳು  ಶಿಬಿರದಲ್ಲಿ ಭಾಗವಹಿಸಿದ್ದರು.

ಸದಾನಂದ ಕುಂಬಾರ ನಿರೂಪಿಸಿದರು, ಸಿದ್ರಾಮ ಕುಸಾಳೆ ಸ್ವಾಗತಿಸಿದರು, ಬಸವರಾಜ ಬಿರಾದಾರ ವಂದಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here