ಬಿಜೆಪಿ ಪ್ರಶಿಕ್ಷಣ ವರ್ಗದ ಸಮಾರೋಪ ಸಮಾರಂಭ

ಶಹಾಬಾದ: ಭಾರತೀಯ ಜನತಾ ಪಕ್ಷವು ದೇಶ ಭಕ್ತರನ್ನು ಮತ್ತು ರಾಷ್ಟ್ರಪ್ರೇಮಿಗಳನ್ನು ಕಟ್ಟಿದ ಪಕ್ಷವಾಗಿದ್ದು, ಇಂದು ಹೆಮ್ಮರವಾಗಿ ಬೆಳೆಯುತ್ತಿದೆ ಎಂದರೆ ಅದು ಪಕ್ಷದ ಕಾರ್ಯಕರ್ತರಿಂದಲೇ ಎಂಬುದನ್ನು ನಾವು ತಿಳಿದುಕೊಳ್ಳಬೇಕೆಂದು ಶಾಸಕ ಬಸವರಾಜ ಮತ್ತಿಮಡು ಹೇಳಿದರು.

ಅವರು ನಗರದ ಪಾರ್ವತಿ ಕಲ್ಯಾಣ ಮಂಟಪದಲ್ಲಿ ಶಹಾಬಾದ ಬಿಜೆಪಿ ಮಂಡಲದಿಂದ ಆಯೋಜಿಸಲಾದ ಪ್ರಶಿಕ್ಷಣ ವರ್ಗದ  ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಭಾರತ ದೇಶಕ್ಕೆ ವಿಶ್ವಮಟ್ಟದಲ್ಲಿ ಹೆಸರನ್ನು ತಂದುಕೊಟ್ಟವರು ಪ್ರಧಾನಿ ನರೆಂದ್ರ ಮೋದಿಯವರು. ಅವರ ನಾಯಕತ್ವದಲ್ಲಿ ಮುನ್ನಡೆಯುತ್ತಿರುವ ಬಿಜೆಪಿ ಕಾರ್ಯಕರ್ತರು ಶಿಸ್ತು ಮತ್ತು ಬದ್ಧತೆಯನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜಮುಖಿಯಾಗಿ ಮುನ್ನಡೆಯಬೇಕು.ಮುಂಬರುವ ತಾಪಂ,ಜಿಪಂ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಾಮಾಣಿಕವಾಗಿ ಕೆಲಸ ಮಾಡಿ ಪಕ್ಷದ ಸಂಘಟನೆಯನ್ನು ಬಲಿಷ್ಠಗೊಳಿಸಬೇಕೆಂದು ಹೇಳಿದರು.

ಪೊಗರು ಸಿನಿಮಾದಲ್ಲಿ ಬ್ರಾಹ್ಮಣರಿಗೆ ಅಪಮಾನ: ದೃಶ್ಯ ತೆಗೆದು ಹಾಕಲು ಆಗ್ರಹ

ಬಿಜೆಪಿ ಮಂಡಲ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ ಮಾತನಾಡಿ, ನಿಷ್ಠಾವಂತ ಕಾರ್ಯಕರ್ತರೇ ಬಿಜೆಪಿ ಪಕ್ಷಕ್ಕೆ ಆಸ್ತಿ. ಆದ್ದರಿಂದ ನಾವು ಯಾವದೇ ಪಕ್ಷಗಳ ಬಗ್ಗೆ ತಲೆ ಕೆಡಿಸಿಕೊಳ್ಳದೇ ಆರೋಗ್ಯವಂತ ಸಮಾಜ ಹಾಗೂ ಸದೃಢ ಭಾರತ ಕಟ್ಟಲು ನಮ್ಮನ್ನು ನಾವು ಸಮರ್ಪಿಸಿಕೊಂಡು ಕೆಲಸ ಮಾಡಬೇಕೆಂದರು. ಬಿಜೆಪಿಯಲ್ಲಿ ಸಾಮಾನ್ಯ ಕಾರ್ಯಕರ್ತರು ಹಾಗೂ ಚಹಾ ಮಾರುವವ ಸಾಮಾನ್ಯ ಕಾರ್ಯಕರ್ತನು ಪ್ರಧಾನ ಮಂತ್ರಿಯಾಗಲು ಸಾಧ್ಯ. ಬೆರಳೆಣಿಕೆಯ ಸ್ಥಾನ ಗಳಿಸುತ್ತಿದ್ದ ಬಿಜೆಪಿ ಪಕ್ಷ ತತ್ವ ಸಿದ್ಧಾಂತಗಳ ನೆಲೆಗಟ್ಟಿನಲ್ಲಿ ಈ ಮಟ್ಟಕ್ಕೆ ದೊಡ್ಡದಾಗಿ ಬೆಳೆದಿದೆ ಎಂದು ಹೇಳಿದರು.

ಸ್ಮಾರ್ಟ್ ಕ್ಲಾಸ್ ಆರಂಭಕ್ಕೆ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಸಂಘ ನೆರವು

ಪ್ರಶಿಕ್ಷಣ ವರ್ಗದ ರಾಜ್ಯ ಸಂಚಾಲಕ ಶ್ರೀಕಾಂತ ಕುಲಕರ್ಣಿ, ವಿಭಾಗೀಯ ಸಹ ಸಂಚಾಲಕ ಈಶ್ವರಸಿಂಗ್ ಠಾಕೂರ, ವಿಭಾಗಿಯ ಪ್ರಭಾರಿ ಸಂಜಯ ಮಿಸ್ಕಿನ,ಮಂಡಲ ಉಸ್ತುವಾರಿಯಾದ ಲಿಂಗರಾಜ ಬಿರಾದಾರ, ಮಂಡಲ ಸಂಚಾಲಕ ಅರುಣ ಪಟ್ಟಣ್ಣಕರ, ಸಹ ಸಂಚಾಲಕ ನಿಂಗಣ್ಣ ಹುಳಗೋಳಕರ,ಶಿಬಿರದ ಪ್ರಬಂಧಕರು, ಪ್ರತಿನಿಧಿಗಳು  ಶಿಬಿರದಲ್ಲಿ ಭಾಗವಹಿಸಿದ್ದರು.

ಸದಾನಂದ ಕುಂಬಾರ ನಿರೂಪಿಸಿದರು, ಸಿದ್ರಾಮ ಕುಸಾಳೆ ಸ್ವಾಗತಿಸಿದರು, ಬಸವರಾಜ ಬಿರಾದಾರ ವಂದಿಸಿದರು.

sajidpress

Recent Posts

ವಿದ್ಯಾರ್ಥಿನಿಯರಿಗೆ ಶಾಸಕ ಅಲ್ಲಮಪ್ರಭು ಪಾಟೀಲ ಸೈಕಲ್‍ ವಿತರಣೆ

ಕಲಬುರಗಿ: ನಗರದ ಎನ್.ವಿ ಸಂಸ್ಥೆಯ ಸತ್ಯಪ್ರಮೋದತೀರ್ಥ ಸಭಾಂಗಣದಲ್ಲಿ ಎನ್.ವಿ ಸಂಸ್ಥೆ ಮತ್ತು ರೋಟರಿ ಕ್ಲಬ್ ಆಫ್ ಗುಲಬರ್ಗ ನಾರ್ಥವತಿಯಿಂದ ವಿದ್ಯಾರ್ಥಿನಿಯರಿಗೆ…

2 mins ago

ಕಲಬುರಗಿಯಲ್ಲಿ ರೈತರ ಜಿಲ್ಲಾ ಸಮಾವೇಶ

ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಶಾಖೆ ನಗರದ ಡಾ.ಎಸ್.ಎಂ.ಪಂಡಿತ್ ರಂಗಮಂದಿರದಲ್ಲಿ ಆಯೋಜಿಸಿದ್ದ ಜಿಲ್ಲಾ ರೈತ ಸಮಾವೇಶವನ್ನು ಸಂಘದ…

3 mins ago

ಪ್ರಶಾಂತ ಡಿ ಜಾನಕರ ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಲಬುರಗಿ: ದಾವಣಗೆರೆಯಲ್ಲಿ ನಡೆದ ಸಿ.ಬಿ.ಎಸ್.ಇ ಕ್ಲಸ್ಟರ 8ನೇ ಎಥ್ಲೇಟಿಕ್ ಮೀಟ್ 2024-25 ರಾಜ್ಯ ಮಟ್ಟದ 200 ಮಿಟರ್ ಓಟದ ಸ್ಪರ್ಧೆಯಲ್ಲಿ…

7 mins ago

ಶಿಕ್ಷಕಿ ನಿರ್ಮಲಾ ವೀರಭದ್ರಪ್ಪ ದೇಸಾಯಿಗೆ ಬಿಳ್ಕೊಡುಗೆ

ಕಲಬುರಗಿ: ಕಮಲಾಪೂರ ತಾಲೂಕಿನ ಯಕ್ಕಂಚಿ ಗ್ರಾಮದಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ನಿರ್ಮಲಾ ವೀರಭದ್ರಪ್ಪ ದೇಸಾಯಿ ಇವರ…

12 mins ago

ಕ.ಕ ಪ್ರದೇಶದ ರಚನಾತ್ಮಕ ಪ್ರಗತಿಗೆ ಪ್ರತ್ಯೇಕ ಸಚಿವಾಲಯ ಶೀಘ್ರ ಅಸ್ತಿತ್ವಕ್ಕೆ; ಸಿದ್ದರಾಮಯ್ಯ

ರಾಯಚೂರು; ಕಲ್ಯಾಣ ಕರ್ನಾಟಕಕ್ಕೆ 371ನೇ ಜೇ ಕಲಂ ಜಾರಿಗೆಗೆ ದಶಕಗಳಿಂದ ಹೋರಾಟ ನಡೆಸಿದ ಎಳು ಜಿಲ್ಲೆಗಳ ಸಹಸ್ರಾರು ಹೋರಾಟಗಾರರ ಪರವಾಗಿ…

18 mins ago

ಎಲೇಕ್ಷನ್’ನಲ್ಲಿ ಗಿಮಿಕ್ ಮಾಡಿ ಮತಪಡೆದುಕೊಳ್ಳುವುದು ಮಾತ್ರ ಗೊತ್ತು; ಮಣಿಕಂಠ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420