ಫೆ. 28ಕ್ಕೆ ಶಾಸಕ ಡಾ. ಅಜಯ್ ಸಿಂಗ್ ಎರಡನೇಯ ಗ್ರಾಮ ವಾಸ್ತವ್ಯ

ಕಲಬುರಗಿ/ ಜೇವರ್ಗಿ: ಜೇವರ್ಗಿ ಶಾಸಕರು ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರೂ ಆಗಿರುವ ಡಾ. ಅಜಯ್ ಸಿಂಗ್ ತಮ್ಮ 2 ನೇ ಗ್ರಾಮ ವಾಸ್ತವ್ಯಕ್ಕೆ ಜೇವರ್ಗಿ ಮತಕ್ಷೇತ್ರದ ಯಡ್ರಾಮಿ ತಾಲೂಕಿನ ವಡಗೇರಾ ಗ್ರಾಮವನ್ನ ಆಯ್ಕೆ ಮಾಡಿಕೊಂಡಿದ್ದಾರೆ.

ವಡಗೇರಾ ಗ್ರಾಮದಲ್ಲಿ ಇದೇ ಫೆ. 28 ರ ಭಾನುವಾರ ವಾಸ್ತವ್ಯ ಹೂಡಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಲಿದ್ದಾರೆ. ಗ್ರಾಪಂ ಮುಖ್ಯ ಕೇಂದ್ರವಾಗಿರುವ ವಡಗೇರಾದಲ್ಲಿರುವ ಸಣ್ಣ ರೈತ ಶಿವಾನಂದ ಕುಂಬಾರ ಇವರ ಮನೆಯಲ್ಲೇ ವಾಸ್ತವ್ಯ ಹೂಡಲಿರುವ ಡಾ. ಅಜಯ್ ಸಿಂಗ್ ಅಂದು ಸಂಜೆ 5 ಗಂಟೆಗೇ ಗ್ರಾಮಕ್ಕೆ ಆಗಮಿಸಿ ಸಾರ್ವಜನಿಕ ಸಭೆ, ಸಂವಾದ, ಜನರ ಸಮಸ್ಯೆಗಳಿಗೆ ಕಿವಿಯಾಗಲಿದ್ದಾರೆ. ಸಾರ್ವಜನಿಕ ಸಭೆಯಲ್ಲಿಯೇ ಜನರೊಂದಿಗೆ ನೇರವಾಗಿಯೇ ಮಾತುಕತೆ ನಡೆಸಲಿರುವ ಡಾ. ಅಜಯ್ ಸಿಂಗ್ ಅವರು ಅಲ್ಲೇ ಜನರ ಅಹವಾಲು ಆಲಿಸಲಿದ್ದಾರೆ.

ಕೆ.ಕೆ.ಆರ್.ಡಿ.ಬಿ: ನಾಲ್ಕನೇ ಕಂತಿನ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಕೆ

ತಾಲೂಕು ಆಡಳಿತದ ತಹಶೀಲ್ದಾರ್, ತಾಪಂ ಮುಖ್ಯಾಧಿಕಾರಿಗಳು, ಸೇರಿದಂತೆ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳೆಲ್ಲರೂ ಈ ಗ್ರಾಮ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ರಾಜ್ಯ ಸರಕಾರ ಅದಿಕಾರಿಗಳ ನಡೆ ಹಳ್ಳಿಗಳ ಕಡೆ ಎಂದು ತಿಂಗಳ 3 ನೇ ಶನಿವಾರ ಹಳ್ಳಿಗಳಿಗೆ ಹೋಗಿ ಅಹವಾಲು ಆಲಿಸಿರೆಂದು ಆರಂಭಿಸಿರುವ ಕಾರ್ಯಕ್ರಮ, ಜಿಲ್ಲಾಧಿಕಾರಿಗಳು ನಡೆಸುತ್ತಿರುವ ಗ್ರಾಮ ವಾಸ್ತವ್ಯದ ಕಾರ್ಯಕ್ರಮ ತಾವು ಜ. 28 ರಿಂದ ಆರಂಭಿಸಿರುವ ವಾಸ್ತವ್ಯದ ನೇರ ಪರಿಣಾಮ, ಸಿಹಿಫಲವಾಗಿದೆ ಎಂದು ಡಾ. ಅಜಯ್ ಸಿಂಗ್ ಸಂತಸಪಟ್ಟಿದ್ದಾರೆ.

ಕಳೆದ ತಿಂಗಳು ಜ. 28ರಂದು ತಮ್ಮ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಜೇವರ್ಗಿ ತಾಲೂಕಿನ ಜೇರಟಗಿಯಿಂದ ಡಾ. ಅಜಯ್ ಸಿಂಗ್ ಅವರು ಮಹತ್ವಾಕಾಂಕ್ಷಿ ಗ್ರಾಮ ವಾಸ್ತವ್ಯದ ತಮ್ಮ ಜನಪರ ಯೋಜನೆ ಪ್ರಕಟಿಸಿ ಜಾರಿಗೆ ತಂದವರು. ಜೇರಟಗಿಯಲ್ಲಿ ಮೋದಿನ್ ಸಾಬ್ ಹಣಗಿಕಟ್ಟಿ ಮನೆಯಲ್ಲಿ ವಾಸ್ತವ್ಯ ಮಾಡಿದ್ದ ಡಾ. ಅಜಯ್ ಸಿಂಗ್ ಶಾಲೆಯಲ್ಲಿ ಸಭೆ ನಡಜೆಸಿ ಜನರ ಸಮಸ್ಯೆ ಆಲಿಸಿದ್ದರು.

ಗುಲಬರ್ಗಾ ವಿಶ್ವವಿದ್ಯಾಲಯ ಅಕ್ಯಾಡೆಮಿಕ್ ಕೌನ್ಸಿಲ್‌ಗೆ ಹಿರೇಮಠ್ ನಾಮನಿರ್ದೇಶನ

ಸಭೆಯಲ್ಲಿ 23 ಸಂಗತಿಗಳ ಬಗ್ಗೆ ಸಾರ್ವಜನಿಕರು ಅಹವಾಲು ಸಲ್ಲಿಸಿದ್ದರು. ಈ ಪೈಕಿ 7 ಅಹವಾಲುಗಳಿಗೆ ಸ್ಥಳದಲ್ಲೇ ಪರಿಹಾರ ದೊರಕಿದ್ದು ಉಳಿದಂತೆ ಸಿಸಿ ರಸ್ತೆ, ಬಸ್ ನಿಲ್ದಾಣ, ಚರಂಡಿ ನಿರ್ಮಾಣದಂತಹ ಕಾಮಗಾರಿಗಳಿಗೆ ಬರುವ ದಿನಗಳಲ್ಲಿ ಮಂಜೂರಾತಿ ನೀಡುವ ಕೆಲಸ ನಡೆಯಲಿದೆ. ಜೇರಟಗಿ ಊರಿನ ಜನರ ಬಸ್ ನಿಲ್ದಾಣ ಬೇಡಿಕೆಗೆ ತಾವೇ ಖುದ್ದು ಈಶಾನ್ಯ ಸಾರಿಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ತಕ್ಷಣ ಆ ಯೋಜನೆ ಜೇರಟಗಿಗೆ ಬರುವಂತೆ ಮಾಡುವುದಾಗಿಯೂ ಡಾ. ಅಜಯ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.

ನನ್ನ ಗ್ರಾಮ ವಾಸ್ತವ್ಯ ಯಶಸ್ಸು ಕಂಡದ್ದನ್ನ ಮಾಧ್ಯಮದವರು ರಾಜ್ಯಾದ್ಯಂತ ಬಿಂಬಿಸಿದ್ದರಿಂದಾಗಿ ಇಂತಹ ಜನಪರ ಕಾರ್ಯಕ್ರಮ ಸರಕಾರದಿಂದಲೇ ನೀಡಬಾರದ್ಯಾಕೆ ಎಂದು ಇದೀಗ ಎಲ್ಲರೂ ಹಳ್ಳಿಕಡೆಗೆ ಹೆಜ್ಜೆ ಹಾಕುತ್ತಿರೋದನ್ನ ನಾನು ಸ್ವಾಗತಿಸುವೆ. ಇದರಿಂದಲಾದರೂ ಹಳ್ಳಿ ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಸಿಗುವಂತಾದರೆ ಅದೇ ನನಗೆ ಸಂತೃಪ್ತಿ, ಹಳ್ಳಿ ಕಡೆಗೆ ಅಧಿಕಾರಿಗಳು, ಜನಪ್ರತಿನಿಧಿಗಳ ನಡೆಯನ್ನ ಸ್ವಾಗತಿಸುವೆ ಎಂದು ಶಾಸಕ ಡಾ. ಅಜಯ್ ಸಿಂಗ್ ಹೇಳಿದ್ದಾರೆ.

sajidpress

Recent Posts

ನಾಡಹಬ್ಬ ಆಚರಣೆ ಅಂಗವಾಗಿ ನಾಡ ದೇವತೆ ಸ್ತಬ್ಧ ಚಿತ್ರಗಳ ಮೆರವಣಿಗೆ

ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…

13 hours ago

ವೀರಪ್ಪ ನಿಷ್ಠಿ ಕಾಲೇಜ್ ಮಹಾತ್ಮ ಗಾಂಧಿಜಿ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ

ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…

13 hours ago

ಲೈಂಗಿಕ ದೌರ್ಜನ್ಯ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ 8ಕ್ಕೆ ಸುರಪುರ ಬಂದ್

ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…

13 hours ago

ಗರ್ಭಿಣಿ ಮಹಿಳೆಯರಿಗೆ ಹಣ್ಣು ಹಂಪಲು ವಿತರಣೆ

ಕಲಬುರಗಿ:  ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…

13 hours ago

ಮಹಾತ್ಮ ಗಾಂಧೀಜಿಯವರ ತತ್ವಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು

ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…

13 hours ago

ಜುಡೋಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಲಬುರಗಿ: ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೊಗಳ ಸ್ಪರ್ಧೆ 2024 25 ಈಚೆಗೆ ಬೆಂಗಳೂರಿನಲ್ಲಿ ನಡೆದ…

13 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420