ರಾಷ್ಟ್ರದ ಅಭಿವೃದ್ಧಿಗೆ ಎನ್‌ಜಿಓಗಳ ಕೊಡುಗೆ ಅಮೋಘ

2
26

ಕಲಬುರಗಿ: ಸರ್ಕಾರೇತರ ಸಂಸ್ಥೆಗಳು(ಎನ್‌ಜಿಓ) ಶೈಕ್ಷಣಿಕ, ಆರ್ಥಿಕ ಸಹಾಯ, ಪರಿಸರ, ಸಾಮಾಜಿಕ ಸಮಸ್ಯೆಗಳ ಬಗ್ಗೆ ಜನಜಾಗೃತಿ, ವೈಜ್ಞಾನಿಕ ಮನೋಭಾವನೆ ಬೆಳೆಸುವುದು, ಸ್ವಚ್ಛತೆ, ಸರ್ಕಾರದ ಯೋಜನೆಯಗಳ ಬಗ್ಗೆ ವ್ಯಾಪಕ ಪ್ರಚಾರ ಹಾಗೂ ಅನುಷ್ಠಾನ ಸೇರಿದಂತೆ ಅನೇಕ ಸಮಾಜಮುಖಿ ಕಾರ್ಯಗಳನ್ನು ನಿರಂತರವಾಗಿ ಮಾಡುವ ಮೂಲಕ ರಾಷ್ಟ್ರದ ಅಭಿವೃದ್ಧಿಗೆ ಅಮೋಘವಾದ ಕೊಡುಗೆಯನ್ನು ನೀಡುತ್ತಿವೆಯೆಂದು ಜಿಲ್ಲಾ ಎನ್‌ಜಿಓ ಒಕ್ಕೂಟ(ಫೆವಾರ್ಡ್) ಕಾರ್ಯದರ್ಶಿ ರಾಮಚಂದ್ರ ಕಾರಭೋಸಗಾ ಅಭಿಮತ ವ್ಯಕ್ತಪಡಿಸಿದರು.

ನಗರದಲ್ಲಿ ’ಸುಜಯ್ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆ’ ಮತ್ತು ’ಬಸವೇಶ್ವರ ಸಮಾಜ ಸೇವಾ ಬಳಗ’ ಇವುಗಳ ವತಿಯಿಂದ ಶನಿವಾರ ಹಮ್ಮಿಕೊಳ್ಳಲಾಗಿದ್ದ ’ವಿಶ್ವ ಎನ್‌ಜಿಓ ದಿನಾಚರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

Contact Your\'s Advertisement; 9902492681

“ಮೇ ಆಜಾದ್ ತಾ. ಆಜಾದ್ ಹೊಂಔ ಆಜಾದ್ ಹೀ ರಹೊಂಗಾ “

ಸುಜಯ್ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆ ಅಧ್ಯಕ್ಷ ಸುನೀಲುಮಾರ ವಂಟಿ ಮಾತನಾಡಿ, ಅನೇಕ ಎನ್‌ಜಿಓಗಳು ಸರ್ಕಾರದ ಅನುದಾನವನ್ನು ಪಡೆದು ಉತ್ತಮವಾದ ಕಾರ್ಯವನ್ನು ಮಾಡುತ್ತಿವೆ. ಅನುದಾನವನ್ನು ಸರಿಯಾಗಿ ಬಳಸಿಕೊಂಡು ಅಭಿವೃದ್ಧಿ ಕಾರ್ಯಗಳ ಪ್ರಮಾಣ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಜರುಗಬೇಕಾಗಿದೆ. ಯಾವುದೇ ಕಾರಣಕ್ಕೂ ಸರ್ಕಾರದ ಅನುದಾನವನ್ನು ದುರುಪಯೋಗವಾಗದಂತೆ ಎಚ್ಚರ ವಹಿಸಬೇಕು. ಸಾರ್ವಜನಿಕರು ಕೂಡಾ ಇದರ ಬಗ್ಗೆ ಕಾಳಜಿ ವಹಸಿ, ಕೆಲಸ ಮಾಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಪ್ರಮುಖರಾದ ಎಂ.ಬಿ.ನಿಂಗಪ್ಪ, ಎಚ್.ಬಿ.ಪಾಟೀಲ, ಶಿವಶಂಕರ ಬಿ., ಎಂ.ಎನ್.ಸುಗಂಧಿ, ಬಸಯ್ಯಸ್ವಾಮಿ ಹೊದಲೂರ, ಬಸವರಾಜ ಎಸ್.ಪುರಾಣೆ, ದೇವೇಂದ್ರಪ್ಪ ಗಣಮುಖಿ, ತುಕಾರಾಮ ವರ್ಮಾ, ವಿಜಯಕುಮಾರ ಬೊಮ್ಮಾ, ಇರಗಪ್ಪ ಬರಗಲಿ, ಶಿವಪುತ್ರ ಗೊಬ್ಬೂರಕರ್, ಶಿವಕುಮಾರ ಹೊನಗೇರಾ, ಮನೋಹರ ಗಾಯಕವಾಡ್ ಸೇರಿದಂತೆ ಹಲವರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here