ಕಲಬುರಗಿ : ನಗರದ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಶನಿವಾರ ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಜೇಷನ್ ( ಎ ಐ ಡಿ ವೈ ಓ) ಜಿಲ್ಲಾ ಸಮಿತಿ ಯಿಂದ ಮಹಾನ್ ಕ್ರಾಂತಿಕಾರಿ ಚಂದ್ರಶೇಖರ್ ಆಜಾದ್ ರ 91ನೇ ಸ್ಮರಣ ದಿನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಭಾಷಣಕಾರರಾಗಿ ಆಗಮಿಸಿ ಎಐಡಿವೈಓ ರಾಜ್ಯಾಧ್ಯಕ್ಷೆ ಎಂ. ಉಮಾದೇವಿ ಮಾತನಾಡಿ ‘ಚಂದ್ರಶೇಖರ್ ಆಜಾದ್ ಅಪ್ರತಿಮ ಕ್ರಾಂತಿಕಾರಿಯಾಗಿದ್ದರು. ಅವರು ವಿದ್ಯಾರ್ಥಿ ದೆಸೆಯಿಂದಲೇ ಕ್ರಾಂತಿಕಾರಿ ಹೋರಾಟದಲ್ಲಿ ಧುಮುಕಿದರು. ಬ್ರಿಟಿಷರ ವಿರುದ್ಧ ಹೋರಾಡಿ ದೇಶದ ತುಂಬಾ ಹೊಸ ಸಂಚಲನ ಮೂಡಿಸಿದೆ. ಹರಿದು ಹಂಚಿಹೋಗಿದ್ದ ಕ್ರಾಂತಿಕಾರಿಗಳನ್ನು ಒಗ್ಗೂಡಿ ಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.
ರಾಷ್ಟ್ರದ ಅಭಿವೃದ್ಧಿಗೆ ಎನ್ಜಿಓಗಳ ಕೊಡುಗೆ ಅಮೋಘ
ಭಾರತ ಸ್ವಾತಂತ್ರ್ಯಸಂಗ್ರಾಮದ ಕೆಚ್ಚೆದೆಯ ನಾಯಕರಾಗಿದ್ದರು. ಅವರ ದೇಶಪ್ರೇಮ ಮತ್ತು ಸಾಹಸಮಯ ಚಳುವಳಿ ಸಾವಿರಾರು ವಿದ್ಯಾರ್ಥಿ-ಯುವಕರಲ್ಲಿ ಸ್ಪೂರ್ತಿಯನ್ನು ತುಂಬಿ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಸುವಂತೆ ಮಾಡಿತ್ತು ಎಂದರು.
ಅವರ ಕನಸು ನನಸು ಮಾಡಲು ಪ್ರತಿಯೊಬ್ಬರು ಮುಂದೆ ಬರಬೇಕು. ಅವರ ಭವ್ಯ ಮತ್ತು ಸಾಹಸಮಯ ಜೀವನ ನಮಗೆಲ್ಲರಿಗೂ ಆದರ್ಶ ಸ್ಪೂರ್ತಿ ಎಂದರು.
ಶಾಲಾ-ಕಾಲೇಜು ಸಮಯಕ್ಕೆ ಬಸ್ ಓಡಿಸಿ ಹಿಂಚಗೇರಾ ಗ್ರಾಮದ ವಿದ್ಯಾರ್ಥಿಗಳು, ಪಾಲಕರ ಆಗ್ರಹ
ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಜಯ ಲಕ್ಷ್ಮೀ ಎಲ್. ಕೆ. ವಹಿಸಿ ಮಾತನಾಡಿದರು.ಪ್ರಾಸ್ತಾವಿಕ ವಾಗಿ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಜಗನ್ನಾಥ ಎಸ್. ಎಚ್ ಮಾತನಾಡಿದರು. ಸ್ವಾಗತ ಮತ್ತು ನಿರೂಪಣೆ ಜಿಲ್ಲಾ ಉಪಾಧ್ಯಕ್ಷ ಭೀಮಾಶಂಕರ್ ಪಾಣೇಗಾಂವ್ ನಡೆಸಿಕೊಟ್ಟರು.
ವೇದಿಕೆ ಮೇಲೆ ಕಾಲೇಜಿನ ಕುಲ ಸಚಿವ ಶಿವಶರಣ ಗೌರ, ವಿದ್ಯಾರ್ಥಿ ಕಲ್ಯಾಣಾಧಿಕಾರಿ ವನಿತಾ ಮೇಡಂ ಸೇರಿದಂತೆ ಕಾಲೇಜಿನ ಸಿಬ್ಬಂದಿ ವರ್ಗ ಮತ್ತು ಸಂಘಟನೆಯ ಜಿಲ್ಲಾ ಸಮಿತಿ ಸದಸ್ಯ ಬಸವರಾಜ ಬೇಲೂರ್, ಶಿವಗಣೇಶ್ ಮಾಳಾ, ವಿದ್ಯಾರ್ಥಿನಿಯರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.
ಬೆಂಗಳೂರು: ಮೊಬೈಲ್ ಆಪ್ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆಹಚ್ಚಲು ಜುಲೈ 15 ರಿಂದ 30 ರವರೆಗೆ ಸಮೀಕ್ಷೆ ನಡೆಸಲಾಗುವುದು…
ಬೆಂಗಳೂರು: ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ…
ಕಲಬುರಗಿ: ಡಾ.ಸರೋಜನಿ ಮಹಿಷಿ ವರದಿ ಅನುಷ್ಠಾನಕ್ಕೆ ನಡೆದ, ನಡೆಯುತ್ತಿರುವ ಹೋರಾಟಗಳಿಗೆ ಲೆಕ್ಕವೇ ಇಲ್ಲ. ಮಹಿಷಿ ವರದಿಯ ಹೆಸರು ಹೇಳಿ ಆಳಿದ…
ಕಲಬುರಗಿ: ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಕಾರ್ಯಕಾರಿ ಸದಸ್ಯ ಸಮಿತಿಗೆ ಮಹಾಸಭಾದ ಅಧ್ಯಕ್ಷ ಶರಣಕುಮಾರ ಮೋದಿ ಹಾಗೂ ಸಮಾಜದ…
ಕಲಬುರಗಿ: ಕರ್ನಾಟಕ ನೆಲದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ವಿಫಲವಾದ ರಾಜ್ಯ ಸರ್ಕಾರ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಪುನೀತರಾಜ…
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸ್ಥಳೀಯ ಪೊಲೀಸ್ ಠಾಣೆಯಲ್ಲಿ 20 ವರ್ಷ ಒಂದೇ ಕಡೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ ಎಎಸ್'ಐ…