ಶಹಾಬಾದ: ಖಾಸಗಿ ಶಾಲಾ ಕಾಲೇಜು ಆಡಳಿತ ಮಂಡಳಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರ ಬಗ್ಗೆ ಸರಕಾರ ಅನುಸರಿಸುತ್ತಿರುವ ಧೋರಣೆಯನ್ನು ಬಿಟ್ಟು ಅವರ ಸ್ಪಂದಿಸುವತ್ತ ಮುಂದಾಗಬೇಕೆಂದು ಕಾಂಗ್ರೆಸ್ ಪಕ್ಷದ ಜಿಲ್ಲಾ ವಕ್ತಾರ ಪೀರಪಾಶಾ ಹೊನಗುಂಟಾ ತಿಳಿಸಿದರು.
ಅವರು ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕೋವಿಡ್-೧೯ದಿಂದ ಖಾಸಗಿ ಶಾಲಾ ಕಾಲೇಜು ಆಡಳಿತ ಮಂಡಳಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದರೂ ಸರ್ಕಾರ ಮಾತ್ರ ಇವರಿಗೆ ಸ್ಪಂದಿಸುವಲ್ಲಿ ಎಡವುತ್ತಿದೆ.ಇದರಿಂದ ಶಿಕ್ಷಕರು ಮತ್ತು ಖಾಸಗಿ ಆಡಳಿತ ಮಂಡಳಿಯವರು ಆತ್ಮಹತ್ಯ ಮಾಡಿಕೊಳ್ಳು ಮುಂದಾಗುತ್ತಿರುವುದು ದುರ್ದೈವದ ಸಂಗತಿ.ಅಲ್ಲದೇ ರಾಜ್ಯ ಎಲ್ಲಾ ಖಾಸಗಿ ಶಾಲಾ-ಕಾಲೇಜಿನ ಶಿಕ್ಷಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದರು.
ಗರುಡಾದ್ರಿ ಕಲಾ ಮಂದಿರದಲ್ಲಿ ಸಿದ್ದಿವಿನಾಯಕ ಮಹಿಳಾ ಮಂಡಳಿ ಲೋಕಾರ್ಪಣೆ
ಈಗಾಗಲೇ ಖಾಸಗಿ ಶಾಲಾ ಕಾಲೆಜು ಅಭಿವೃದ್ಧಿಗಾಗಿ ಮತ್ತು ೧೫೦೦ ಕೋಟಿ ರೂ. ಅನುದಾನ ಮೀಸಲಿದ್ದರೂ ಸರಕಾರ ಅದನ್ನು ಅಭಿವೃದ್ಧಿಗಾಗಿ ಬಳಸದೇ ನಿರಾಸಕ್ತಿಯನ್ನು ತೊರುತ್ತಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯ ಪರಿಣಾಮ ಆಡಳಿತ ಮಂಡಳಿಯವರ ಹಾಗೂ ಶಿಕ್ಷಕರ ಆತ್ಮಹತ್ಯೆಗೆ ಸರ್ಕಾರವೇ ಕಾರಣ. ಕೂಡಲೇ ಸರಕಾರ ಖಾಸಗಿ ಶಾಲಾ-ಕಾಲೇಜಿನ ಹಾಗೂ ಶಿಕ್ಷಕರ ಸಮಸ್ಯೆಗೆ ಸ್ಪಂದಿಸಬೇಕು.ಇಲ್ಲದಿದ್ದರೆ ಬೀದಿಗಿಳಿದು ಹೋರಾಟ ಮಾಡಲಾಗುವುದೆಂದು ಪಿರಪಾಶಾ ಹೊನಗುಂಟಾ ಎಚ್ಚರಿಕೆ ನೀಡಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…