ಕಲಬುರಗಿ: ಶಿಕ್ಷಕರು, ಉಪನ್ಯಾಸಕರು ತಮ್ಮ ಪಾಲಿನ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸಿದರೆ, ವಿದ್ಯಾರ್ಥಿಗಳ ಅಭಿವೃದ್ಧಿಯೊಂದಿಗೆ, ಶೈಕ್ಷಣಿಕ ಕ್ಷೇತ್ರವೂ ಅಭಿವೃದ್ಧಿ ಹೊಂದುತ್ತದೆ ಎಂದು ಬೆಂಗಳೂರು ಹೆಚ್.ಕೆ.ಇ.ಸಂಸ್ಥೆಯ ಪತ್ರಿಕೋದ್ಯಮ ವಿಭಾಗದ ಹಿರಿಯ ಉಪನ್ಯಾಸಕ ಡಾ.ಹಾಲಸ್ವಾಮಿ ಕೆ.ಜಿ ಅವರು ಅಭಿಪ್ರಾಯ ಪಟ್ಟರು.
ಇಲ್ಲಿನ ಗ್ರ್ಯಾಂಡ್ ಹೋಟೆಲ್ನಲ್ಲಿ ಭಾನುವಾರ ಅವರ ಪತ್ರಿಕೋದ್ಯಮ ವಿದ್ಯಾರ್ಥಿಗಳು, ಪತ್ರಕರ್ತರು ಹಾಗೂ ಹಿತೈಷಿಗಳು ನೀಡಿದ ಆತ್ಮೀಯ ಸನ್ಮಾನ ಸ್ವೀಕರಿಸಿ ಮಾತನಾಡಿ, ಉಪನ್ಯಾಸಕನಾದ ನಾನು ನನ್ನ ಕರ್ತವ್ಯವನ್ನು ಸೇವಾ ಮನೋಭಾವನೆಯೊಂದಿಗೆ ನಿರ್ವಹಿಸಿದ್ದೇನೆ ಎಂದರು.
ಭಾರತ ದೇಶದ ಯುವಜನತೆ ಬೂದಿಮುಚ್ಚಿದ ಕೆಂಡದಂತೆ : ಪ್ರೊ. ದಯಾನಂದ ಅಗಸರ
ಪತ್ರಿಕೋದ್ಯಮ ಕ್ಷೇತ್ರ ಪವಿತ್ರವಾದದ್ದು, ಸಾಮಾಜಿಕ ಅಭಿವೃದ್ಧಿ ಪರ ಚಿಂತನೆಯೊಂದಿಗೆ ಸರಳತೆ, ನಿಸ್ವಾರ್ಥ ಸೇವಾ ಮನೋಭಾವದಿಂದ ಮುನ್ನಡೆದಾಗ ಮಾತ್ರ ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಅಭಿಪ್ರಾಯ ಪಟ್ಟರು. ಗುರು-ಶಿಷ್ಯರ ಮನೋಭಾವನೆ ಒಂದೇ ಆಗಿದ್ದಾಗ, ಅಲ್ಲಿ ಒಂದು ಉತ್ತಮ ವಾತಾವರಣ ನಿರ್ಮಾಣವಾಗುತ್ತದೆ. ಅಲ್ಲದೆ ಅವರಿಬ್ಬರ ಬಾಂಧವ್ಯ ನಿರಂತರವಾಗಿ ಮುಂದುವರೆಯುತ್ತದೆ ಎಂದು ಹೇಳಿದರು.
ಪತ್ರಿಕೋದ್ಯಮ ಕ್ಷೇತ್ರ ಇಂದು ಮೊದಲಿನಂತಿಲ್ಲ. ಸಾಕಷ್ಟು ವಿಸ್ತಾರಗೊಂಡಿದೆ. ಅಷ್ಠೆ ಸವಾಲುಗಳು ಎದುರಾಗಿವೆ. ಬರುವಂತಹ ಸವಾಲುಗಳನ್ನು ಆರೋಗ್ಯಕರ ಸ್ಪರ್ಧೆಯೊಂದಿಗೆ ಎದುರಿಸಿ, ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕಾಗಿದೆ. ಈ ದಿಶೆಯುಲ್ಲಿ ಪತ್ರಕರ್ತರು ಸಾಕಷ್ಟು ಶ್ರಮವಹಿಸಬೇಕೆಂದು ಹೇಳಿದರು.
ದಲಿತ ಮಾದಿಗ ಸಮನ್ವಯ ಸಮಿತಿಯಿಂದ ಗ್ರಾಪಂ ಸದಸ್ಯರಿಗೆ ಸನ್ಮಾನ
ಹಿರಿಯ ಪತ್ರಕರ್ತ ಹಾಗೂ ಹಾಲಸ್ವಾಮಿ ಅವರ ವಿದ್ಯಾರ್ಥಿ ಸುಭಾಷ ಬಣಗಾರ ಮಾತನಾಡಿ, ಕಳೆದ ಮೂವತ್ತು ವರ್ಷಗಳಿಂದ ಹಾಲಸ್ವಾಮಿ ಅವರು ಸಾವಿರಾರು ವಿದ್ಯಾರ್ಥಿಗಳಿಗೆ ಪಾಠ ಮಾಡಿದ್ದಾರೆ. ನೂರಾರು ವಿದ್ಯಾರ್ಥಿಗಳು ಮಾಧ್ಯಮ ಕ್ಷೇತ್ರದಲ್ಲಿ ವರದಿಗಾರರಾಗಿ, ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರಲ್ಲಿನ ಸರಳತೆ, ಆತ್ಮೀಯತೆ, ಪ್ರಾಮಾಣಿಕತೆ ಪ್ರತಿಯೊಬ್ಬರೂ ಮೇಲೂ ಪರಿಣಾಮ ಬೀರಿದೆ. ಅವರೊಬ್ಬ ಅಪರೂಪದ ಉಪನ್ಯಾಸಕರಾಗಿದ್ದಾರೆ ಎಂದು ಹೇಳಿದರು.
ಮತ್ತೋರ್ವ ವಿದ್ಯಾರ್ಥಿನಿಯೂ ಆದ ಕಲಬುರಗಿಯ ಎಂ.ಎಂಇ. ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ವಾಣಿಶ್ರೀ ನಂದ್ಯಾಳ ಮಾತನಾಡಿ, ಹಾಲಸ್ವಾಮಿ ಸರ್ ವ್ಯಕ್ತಿತ್ವ ನಡೆ-ನುಡಿ ಆದರ್ಶಮಯವಾಗಿದೆ. ಅವರೊಬ್ಬ ಮಾದರಿ ಉಪನ್ಯಾಸಕರಾಗಿದ್ದಾರೆ ಎಂದು ಹೇಳಿದರು.
ರಾಜ್ಯ ಸರಕಾರಿ ವಿಕಲಚೇತನ ನೌಕರರ ಸಂಘದಿಂದ ಸನ್ಮಾನ ಕಾರ್ಯಕ್ರಮ
ಇದೇ ಸಂದರ್ಭದಲ್ಲಿ ಗುಲ್ಬರ್ಗಾ ವಿಶ್ವವಿದ್ಯಾಲಯದ ಉಪನ್ಯಾಸಕರಾದ ಡಾ.ಪಾರ್ವತಿ, ಕುಸುಮ ಜಿ.ಆರ್., ಪ್ರೊ.ಮಹೇಶ್ವರಪ್ಪ, ಡಾ.ವಿ.ಬಿ.ನಂದ್ಯಾಳ, ಹಿರಿಯ ಪತ್ರಕರ್ತ ಸಂಜಯ ಚಿಕ್ಕಮಠ, ರಾಹುಲ್ ಬೆಳಗೇರಿ, ಲಕ್ಷ್ಮಣ ನಾಯಕ್, ಗುರುರಾಜ, ರೇಣುಕಪ್ಪ ಕೆ.ಜಿ. ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…