ಕಾಮಗಾರಿ ಮಾಡದೇ ಹಣ ದುರ್ಬಳಕೆ ಆರೋಪ: ಕ್ರಮಕ್ಕೆ ಒತ್ತಾಯಿಸಿ ಸರದಿ ಉಪವಾಸ ಸತ್ಯಾಗ್ರಹ

0
38

ಶಹಾಬಾದ: ಡಾ.ಬಿ.ಆರ್.ಅಂಬೇಡ್ಕರ್ ಗ್ರಾಮೀಣ ವಸತಿ ಯೋಜನೆಯ ೨೦೧೬-೧೭ನೇ ಸಾಲಿನ ೧೦೭ ಫಲಾನುಭವಿಗಳ ಪಟ್ಟಿಯನ್ನು ಅನುಮೋದಿಸಬೇಕು ಹಾಗೂ ಎಸ್‌ಸಿಪಿ ಯೋಜನೆಯಲ್ಲಿ ಕಾಮಗಾರಿ ಮಾಡದೇ ಹಣ ದುರ್ಬಳಕೆ ಮಾಡಿದ ಕೆಆರ್‌ಐಡಿಎಲ್ ಜೆಇ ಹಾಗೂ ನಿವೃತ್ತ ಎಇಇ ಮೇಲೆ ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಕೇಸ್ ದಾಖಲಿಸಬೇಕೆಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ತಾಲೂಕಾ ಪಂಚಾಯತ ಕಚೇರಿಯ ಮುಂದೆ ನಡೆಯುತ್ತಿರುವ ಸರದಿ ಉಪವಾಸ ಸತ್ಯಾಗ್ರಹ ಮಂಗಳವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು,ನಿವೇಶನ ರಹಿತ ಮತ್ತು ವಸತಿ ರಹಿತ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಜನರಿಗೆ ಸೂರು ಕಲಿಪಿಸುವುದಕ್ಕಾಗಿ ಜಾರಿಗೆ ತಂದಿರುವ ಡಾ.ಬಿ.ಆರ್.ಅಂಬೇಡ್ಕರ್ ಗ್ರಾಮೀಣ ವಸತಿ ಯೋಜನೆಯ ೨೦೧೬-೧೭ನೇ ಸಾಲಿನಲ್ಲಿ ತೊನಸನಹಳ್ಳಿ(ಎಸ್) ಗ್ರಾಪಂ ಸುಮಾರು ೧೦೭ಫಲಾನುಭವಿಗಳ ಪಟ್ಟಿ ಅನುಮೋದಿಸಬೇಕು.ಅಲ್ಲದೇ ಗೋಳಾ(ಕೆ) ಗ್ರಾಮದಲ್ಲಿ ಎಸ್‌ಸಿಪಿ ಯೋಜನೆಯಲ್ಲಿ ಕಾಮಗಾರಿ ಮಾಡದೇ ಸುಮಾರು ೩೦ ಲಕ್ಷ ರೂ, ಹಣ ದುರ್ಬಳಕೆ ಮಾಡಿದ ಕೆಆರ್‌ಐಡಿಎಲ್ ಜೆಇ ಹಾಗೂ ನಿವೃತ್ತ ಎಇಇ ಮೇಲೆ ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಕೇಸ್ ದಾಖಲಿಸಬೇಕು.ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಶಾಸಕರು ಸ್ಥಳಕ್ಕೆ ಬಂದು ಭರವಸೆ ನೀಡಿದರೇ ಮಾತ್ರ ಸತ್ಯಾಗ್ರಹ ಹಿಂದಕ್ಕೆ ಪಡೆಯಲಾಗುವುದು.ಇಲ್ಲದಿದ್ದರೇ ಈ ಧರಣಿ ಮುಂದೆವರಿಯುವುದು.

Contact Your\'s Advertisement; 9902492681

ಸಂವಿಧಾನ ಈ ದೇಶದ ನಿಜವಾದ ಧರ್ಮ ಗ್ರಂಥ

ಅಲ್ಲದೇ ಕೆಲವು ಅಧಿಕಾರಿಗಳು ನಮಗೆ ಕರೆ ಮಾಡಿ ಧರಣಿಯನ್ನು ಕೈಬಿಡಬೇಕೆಂದು ಒತ್ತಡ ಹಾಕುತ್ತಿದ್ದಾರೆ.ಅಲ್ಲದೇ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲು ನಿರಾಕರಿಸುತ್ತಿದ್ದಾರೆ. ಅಲ್ಲದೇದುರ್ಬಳಕೆ ಮಾಡಿದ ಅಧಿಕಾರಿಗಳಿಗೆ ಸಹಕಾರ ನೀಡುತ್ತಿದ್ದಾರೆ.ಅವರ ವಿರುದ್ಧ ಕ್ರಮಕೈಗೊಳ್ಳುವವರೆಗೂ ಪ್ರತಿಭಟನೆ ಮುಂದುವರೆಯುತ್ತದೆ ಎಂದು ಹೇಳಿದರು.

ದಸಂಸ ಜಿಲ್ಲಾ ಸಂಚಾಲಕ ಕೃಷ್ಣಪ್ಪ ಕರಣಿಕ್, ದಸಂಸ ತಾಲೂಕಾ ಸಂಚಾಲಕ ಮಹಾದೇವ ತರನಳ್ಳಿ,ಲಕ್ಷ್ಮಣ ಕೊಲ್ಲೂರ್, ತಿಪ್ಪಣ್ಣ ಧನ್ನೇಕರ್,ಶರಣು ಧನ್ನೇಕರ್,ತೇಜಸ್ ಧನ್ನಾ, ಕವಿತಾ.ಎಸ್.ಜಂಬಗಿ, ನಾಗೇಂದ್ರಪ್ಪ ಹುಗ್ಗಿ , ಜೈಬೀಮ ರಸ್ತಾಪೂರ,ಮೀನಾಕ್ಷಿ ಹೆಬ್ಬಾಳಕರ್ ಸೇರಿದಂತೆ ಅನೇಕ ಮಹಿಳೆಯರು ಹಾಜರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here