ಅಫಜಲಪುರ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ರಾಜ್ಯ ಸರಕಾರದ ೨ಎ ಮೀಸಲಾತಿ ಹಾಗೂ ಲಿಂಗಾಯತ ಬಡ ಸಮಾಜದವರಿಗೆ ಕೇಂದ್ರದ ಓ.ಬಿ.ಸಿ. ಮೀಸಲಾತಿಗಾಗಿ ಸರಕಾಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಅಫಜಲಪುರ ತಾಲೂಕಾ ಲಿಂಗಾಯತ ಪಂಚಮಸಾಲಿ ಸಮಾಜ ಹಾಗೂ ಯುವ ಘಟಕದ ವತಿಯಿಂದ ತಹಸೀಲ್ದಾರರ ಮೂಲಕ ರಾಜ್ಯದ ಮುಖ್ಯಮಂತ್ರಿಯವರಿಗೆ ಮನವಿಪತ್ರ ಸಲ್ಲಸಿದರು.
ಮನವಿ ಪತ್ರ ನೀಡಿ ಮಾತನಾಡಿದ ತಾಲೂಕಾ ಪಂಚಮಸಾಲಿ ಯುವ ಘಟಕ ಅಧ್ಯಕ್ಷರಾದ ಸಿದ್ದಣ್ಣಗೌಡ ಮಾಲಿಪಾಟೀಲ ಮಾತನಾಡಿ ಕರ್ನಾಟಕ ರಾಜ್ಯದಲ್ಲಿ ಕೃಷಿಯನ್ನು ಕುಲಕಸಬುನ್ನಾಗಿಸಿಕೊಂಡು ಹಾಗೂ ಕೃಷಿ ಕೂಲಿಕಾರರಾಗಿರುವ ಪಂಚಮಸಾಲಿ ಸಮಾಜ ಆರ್ಥಿಕವಾಗಿ, ಶೈಕ್ಷಣಿಕವಾಗಿ, ಹಾಗೂ ಔದೋಗಿಕವಾಗಿ, ಅತ್ಯಂತ ಹಿಂದುಳಿದ ಸಮಾಜವಾಗಿದೆ ಎಂದು ತಿಳಿಸಿದ ಅವರು ೨೬ ವರ್ಷಗಳಿಂದಲೂ ಸರಕಾರಕ್ಕೆ ಮನವಿ ಮಾಡುತ್ತ ಬಂದಿದ್ದರು ಸಹ ಯಾವುದೇ ಯಾವುದೇ ಸರಕಾರಗಳು ಸ್ಪಂದಿಸಿಲ್ಲ ಎಂದು ಅಸಮಾಧಾನ ಹೊರಹಾಕಿದ ಅವರು ಆದಷ್ಟು ಬೇಗ ಈ ಹಿಂದುಳಿದ ಸಮುದಾಯಕ್ಕೆ ೨ ಎ ಮೀಸಲಾತಿ ನೀಡಿ ನ್ಯಾಯ ನೀಡಬೇಕು ಎಂದು ಸರಕಾರಕ್ಕೆ ಮನವಿ ಮಾಡಿದರು.
ಕಾಮಗಾರಿ ಮಾಡದೇ ಹಣ ದುರ್ಬಳಕೆ ಆರೋಪ: ಕ್ರಮಕ್ಕೆ ಒತ್ತಾಯಿಸಿ ಸರದಿ ಉಪವಾಸ ಸತ್ಯಾಗ್ರಹ
ಈ ಸಂದರ್ಭದಲ್ಲಿ ತಾಲೂಕಾ ಲಿಂಗಾಯತ ಪಂಚಮಸಾಲಿ ಸಮಾಜ ಅಧ್ಯಕ್ಷರಾದ ಚಂದು ದೇಸಾಯಿ, ಮುಖಂಡರಾದ ಮಲ್ಲು ಸೋಲಾಪುರ, ಕಾಂತು ಮ್ಯಾಳೇಶಿ, ಬಸವರಾಜಗೌಡ ಪಾಟೀಲ, ನಾಗರಾಜ ಬುಜರಿ, ಸುರೇಶ ಮಳ್ಳಿ, ಬಸವರಾಜ, ಸಿದ್ದರಾಮ ಕಲಕೇರಿ, ರೇವಣಸಿದ್ದ ಮಲ್ಲಬಾದ, ಮಹಾಂತೇಶ, ಗುರುಪಾದಗೌಡ, ಯಶ್ವರಾಯ ಅಳ್ಳಗಿ, ಶಿವರಾಯ ರಟಕಲ್, ಭೀಮರಾವ, ಸಿದ್ದಪ್ಪ ರಾಂಪೂರೆ, ಬಾಬುಗೌಡ ಪಾಟೀಲ, ದಾದಗೌಡ ಜವಳಿ, ಸುರೇಶ ಮಾಲಿ ಪಾಟೀಲ, ಶಿವಾನಂದಗೌಡ, ಸಂತೋಷ ಮಾಲೀಪಾಟೀಲ, ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…