ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯ ಸೇರಿದಂತೆ ಪದವಿಪೂರ್ವ ಮತ್ತು ಸ್ನಾತಕೋತ್ತರ ಕೋರ್ಸ್ಗಳಲ್ಲಿ ಅನೇಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು ಅದರಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು), ಹಾಗೂ ಇತರ ಖಾಸಗಿ ವಿಶ್ವವಿದ್ಯಾಲಯ ಮತ್ತು ಶಿಕ್ಷಣ ಸಂಸ್ಥೆಗಳು ಒಳಗೊಂಡಿದ್ದು ಇದರಲ್ಲಿ ಸುಮಾರು ೧೯೭ ವಿದ್ಯಾರ್ಥಿಗಳು ಶರಣಬಸವ ವಿಶ್ವವಿದ್ಯಾಲಯವು ಏರ್ಪಡಿಸಿದ್ದ ಉದ್ಯೋಗ ಮೇಳದಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಲು ಸಫಲರಾಗಿದ್ದಾರೆ.
ವಿಶ್ವವಿದ್ಯಾಲಯದ ಡೀನ್ ಡಾ.ಲಕ್ಷ್ಮಿ ಪಾಟೀಲ್ ಮಾಕಾ ಅವರು ಹೇಳಿದಂತೆ, ಮಂಗಳವಾರ ನಡೆದ ಒಂದು ದಿನದ ಉದ್ಯೋಗ ಮೇಳದಲ್ಲಿ ೩೦ ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಮತ್ತು ಕೈಗಾರಿಕೆಗಳು ಭಾಗವಹಿಸಿದ್ದವು ಮತ್ತು ಉದ್ಯೋಗ ಮೇಳದಲ್ಲಿ ಭಾಗವಹಿಸಿದ ಶರಣಬಸವ ವಿಶ್ವವಿದ್ಯಾಲಯ ಮತ್ತು ಇತರ ಸಂಸ್ಥೆಗಳ ೧೫೦೦ ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಿವಿಧ ಕಂಪನಿಗಳ ಪ್ರತಿನಿಧಿಗಳು ನಡೆಸಿದ ಆರಂಭಿಕ ಸಂದರ್ಶನಗಳಲ್ಲಿ ಒಟ್ಟು ೩೬೬ ವಿದ್ಯಾರ್ಥಿಗಳ ಕಿರುಪಟ್ಟಿ ಮಾಡಲಾಯಿತು ಮತ್ತು ಅಂತಿಮವಾಗಿ ೧೯೭ ವಿದ್ಯಾರ್ಥಿಗಳನ್ನು ವಿವಿಧ ಕಂಪನಿಗಳು ಮತ್ತು ಕೈಗಾರಿಕೆಗಳಲ್ಲಿ ವಿವಿಧ ಹುದ್ದೆಗಳಿಗೆ ಆಯ್ಕೆ ಮಾಡಲಾಯಿತು.
ಕಿವಿಗಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಸಲಹೆ
ಉದ್ಯೋಗ ಮೇಳದಲ್ಲಿ ಉದ್ಯೋಗ ಗಳಿಸಿದ ಒಟ್ಟು ೧೯೭ ವಿದ್ಯಾರ್ಥಿಗಳ ಪೈಕಿ ೧೨೮ ವಿದ್ಯಾರ್ಥಿಗಳು ಶರಣಬಸವ ವಿಶ್ವವಿದ್ಯಾಲಯ ಮತ್ತು ಶರಣಬಸವೇಶ್ವರ ವಿದ್ಯಾ ವರ್ಧಕ ಸಂಘ ನಡೆಸುತ್ತಿರುವ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಾಗಿದ್ದಾರೆ. ಉದ್ಯೋಗ ಮೇಳದಲ್ಲಿ ಯಶಸ್ವಿಯಾದ ಇತರ ವಿದ್ಯಾರ್ಥಿಗಳು ಗುಲ್ಬರ್ಗ ವಿಶ್ವವಿದ್ಯಾಲಯ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು), ಪಿಇಎಸ್ ವಿಶ್ವವಿದ್ಯಾಲಯ, ಬೆಂಗಳೂರು ಮತ್ತು ಇತರ ಸಂಸ್ಥೆಗಳ ವಿದ್ಯಾರ್ಥಿಗಳಾಗಿರುವರು.
ಈ ಉದ್ಯೋಗ ಮೇಳದಲ್ಲಿ ಭಾಗವಹಿಸಿರುವ ಕೆಲವು ಕಂಪನಿಗಳು ತಮ್ಮ ಫಲಿತಾಂಶಗಳನ್ನು ತಡೆಹಿಡಿದಿರುವುದರಿಂದ ಮುಂದಿನ ಒಂದು ಅಥವಾ ಎರಡು ದಿನಗಳಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಡಾ.ಲಕ್ಷ್ಮೀ ಪಾಟೀಲ ಮಾಕಾ ತಿಳಿಸಿದರು.
ರಂಜಣಗಿ- ಹಾಲಘತ್ತರಗಾ- ತೆರಗಬಾಳ ರಸ್ತೆ ಕಾಮಗಾರಿಗೆ ಶಿಲಾನ್ಯಾಸ
ಕಾರ್ವಿ ಕಂಪನಿ ಅತಿ ಹೆಚ್ಚು ೩೩ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿದ್ದರೆ, ಉಳಿದ ಫ್ಯೂಚರ್ ಫೋಕಸ್ ೨೭, ಯುರೇಕಾ ಫೋರ್ಬ್ಸ್ ೨೬, ಆದಿತ್ಯ ಸೊಲ್ಯೂ?ನ್ಸ್ ೧೬, ಟೀಮ್ ಲೀಸ್ ೧೭, ಕೆಎಸ್ ಬೇಕರ್ಸ್ ೧೧, ಶಂಡಿಡರ್ ಎಲೆಕ್ಟ್ರಿಕಲ್ಸ್ ೦೩, ಇನ್ಫೋ ಸೋರ್ಸ್ ಕಾರ್ಪೋರೇಷನ್ ೦೪, ಮತ್ತು ಐಸಿಸಿಎಸ್ ೦೧ ವಿದ್ಯಾರ್ಥಿಗಳಿಗೆ ವಿವಿಧ ಹುದ್ದೆಗಳಿಗೆ ಆಯ್ಕೆ ಮಾಡಿರುತ್ತಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…