ರಂಗಂಪೇಟೆ: ಆಕಸ್ಮಿಕ ವಿದ್ಯುತ್ ತಗುಲಿ ಕಾರ್ಮಿಕ ಸಾವು

0
30

ಸುರಪುರ: ನಗರದ ರಂಗಂಪೇಟೆಯಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಕಟ್ಟಡ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ.

ರಂಗಂಪೇಟೆಯ ವೀರಶೈವ ಕಲ್ಯಾಣ ಮಂಟಪ ಬಳಿಯಲ್ಲಿ ನಿರ್ಮಾಣ ಹಂತದಲ್ಲಿರುವ ರಾವುತರಾಯ ಕಮತಗಿ ಎಂಬುವವರಿಗೆ ಸೇರಿದ ಕಟ್ಟಡದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಅಂಬ್ರೇಶ ಕೊಂಬಿನರ್ ಎಂಬುವವರು ಆಕಸ್ಮಿಕವಾಗಿ ವಿದ್ಯುತ್ ತಗುಲಿ ಸಾವನ್ನಪ್ಪಿದ್ದಾರೆ.

Contact Your\'s Advertisement; 9902492681

ಮೆಗಾ ಉದ್ಯೋಗ ಮೇಳ: 200 ಉದ್ಯೋಗ ಆಕಾಂಕ್ಷಿಗಳಿಗೆ ಒಲಿದ ಉದ್ಯೋಗಗಳು

ತಾಲೂಕಿನ ರುಕ್ಮಾಪುರ ಗ್ರಾಮದವನಾದ ಅಂಬ್ರೇಶ ಕೊಂಬಿನ್ ಕಳೆದ ಅನೇಕ ವರ್ಷಗಳಿಮದ ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದು,ಈಗ ಮೃತಪಟ್ಟಿರುವ ಕಟ್ಟಡದಲ್ಲಿ ಕಳೆದ ಕೆಲ ತಿಂಗಳುಗಳಿಂದ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ,ಮಂಗಳವಾರ ಕಟ್ಟಡದಲ್ಲಿ ಕೆಲಸ ಮಾಡುತ್ತಿರುವಾಗ ಸಂಪಲ್ಲಿನ ನೀರು ತರಲು ಹೋದಾಗ ವಿದ್ಯುತ್ ತಗುಲಿ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದ್ದು ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here