ಮನಾಲಿ: ಸುಂದರ ನಗರ ಮನಾಲಿಯ ಕುಲು ಜಿಲ್ಲೆಯ ಸಮೀಪ ಖಾಸಗಿ ಬಸ್ ವೊಂದು ಕಣಿವೆಯಲ್ಲಿ ಬಿದ್ದ ಪರಿಣಾಮ 34 ಮಂದಿ ಸಾವನಪ್ಪಿ, 35 ಮಂದಿ ಗಂಭೀರ ರೀತಿಯಲ್ಲಿ ಗಾಯಗೊಂಡಿರುವ ದಾರುಣ ಘಟನೆ ಸಂಭವಿಸಿದೆ.
ಘಟನೆಯಲ್ಲಿ 10 ಮಕ್ಕಳು ಸೇರಿ 10 ಮಹಿಳೆಯರು ಮೃತಪಟ್ಟಿದ್ದಾರೆಂದು ಕುಲು ಜಿಲ್ಲೆಯ ಪೊಲೀಸ್ ಅಧಿಕಾರಿ ಮಾಹಿತಿ ನೀಡಿ, ಗಾಯಗೊಂಡ ಪ್ರಯಾಣಿಕರಿಗೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಯಾಣಿಕರು ಹೊತ್ತು ಒಯ್ಯುತ್ತಿರುವ ಬಸ್ ಕಾಲುವೆಯಿಂದ 200 ಅಡಿ ಆಳದ ಕಣಿವೆಗೆ ಬಿದ್ದಿದ್ದ ಪರಿಣಾಮ ಘಟನೆ ಸಂಭವಿಸಿದೆ. ಘಟನಾ ಸಂದರ್ಭದಲ್ಲಿ ಸ್ಥಳೀಯರು ಆಗಮಿಸಿ ಪ್ರಯಾಣಿಕರ ರಕ್ಷಣೆಗೆ ಮುಂದಾಗಿದ್ದಾರೆಂದು ತಿಳಿದುಬಂದಿದೆ.
ಎಂ.ಎಚ್ 65/7065 ಹಿಮಾಚಲ್ ಪ್ರದೇಶದ ನೊಂದಣಿ ಸಂಖ್ಯೆ ಹೊಂದಿ ಈ ಬಸ್, ಕುಲು-ಗದಗುಶಾಯಿನಿಗೆ ಮರಳಿ ಬರುವಾಗ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಬಸ್ ಸಂಪೂರ್ಣ ನಜ್ಜು ಗುಜ್ಜಾಗಿದ್ದು, ಘಟನೆಯಲ್ಲಿ ಪ್ರಯಾಣಿಕರ ರಕ್ಷಣೆಗೆ ಹರಸಹಾಸ ಪಡುವಂತಾಗಿದೆ.
ಘಟನಾ ಸ್ಥಳಕ್ಕೆ ಸಾರಿಗೆ ಸಚಿವ ಭೇಟಿ ನೀಡಿ ಘಟನೆಯ ಕುರಿತು ಮಾಹಿತಿ ಪಡೆದರು. ಸ್ಥಳೀಯ ಆಡಳಿತ ಅಧಿಕಾರಿಗಳು ಘಟನೆಯಲ್ಲಿ ತೀವ್ರವಾಗಿ ಹಿಮಾಚಲ್ ಪ್ರದೇಶ ಸರಕಾರ 50 ಸಾವಿರ ಪರಿಹಾರ ಘೋಷಿಸಿದೆ.
ಘಟನೆಯ ಕುರಿತು ಪ್ರಧಾನಿ ಮೋದಿ ಟ್ವೀಟ್ ಮಾಡಿ ಸಂತಾಪ ಸೂಚಿಸಿ, ಘಟನೆಯಲ್ಲಿ ಗಾಯಗೊಂಡವರಿಗೆ ಶೀಘ್ರ ಗುಣಮುಖ್ಯವಾಗಲೆಂದು ಹಾರೈಸಿದ್ದಾರೆ. ಅಲ್ಲದೇ ತಮ್ಮ ಟ್ವೀಟ್ ನಲ್ಲಿ ಘಟನೆಯ ಕುರಿತು ಸರಕಾರ ಅಗತ್ಯ ಕ್ರಮ ಕೈಗೊಳಬೇಕೆಂಬು ತಿಳಿಸಿದ್ದಾರೆ.
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…