ಸುರಪುರ: ತಾಲೂಕಿನ ಅನೇಕ ಗ್ರಾಮಗಳಲ್ಲಿ ಸರಿಯಾದ ವಿದ್ಯುತ್ ಸರಬರಾಜು ಇಲ್ಲದ ಕಾರಣ ರೈತರ ಬೆಳೆಗಳಿಗೆ ನೀರಿನ ತೊಂದರೆಯುಂಟಾಗಿ ಬೆಳೆಗಳು ಒಳಗಲಾರಂಭಿಸಿವೆ ಎಂದು ಆರೋಪಿಸಿ ನಗರದ ರಂಗಂಪೇಟೆಯ ಜೆಸ್ಕಾಂ ಕಚೇರಿ ಮುಂದೆ ಜಾಲಿಬೆಂಚಿ ಗ್ರಾಮದ ರೈತರು ಪ್ರತಿಭಟನೆ ನಡೆಸಿದರು.
ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಿ ಮಾತನಾಡಿದ ರೈತರು,ಪೇಠ ಅಮ್ಮಾಪುರ ವಿದ್ಯುತ್ ಸರಬರಾಜು ಶಾಖಾ ಕಚೇರಿ ವ್ಯಾಪ್ತಿಯ ಜಾಲಿಬೆಂಚಿ ಗ್ರಾಮಕ್ಕೆ ಸರಿಯಾದ ವಿದ್ಯುತ್ ಸರಬರಾಜು ಇಲ್ಲದ ಕಾರಣ ರೈತರ ಬೆಳೆಗಳು ಒಣಗುತ್ತಿವೆ.ಅಲ್ಲದೆ ಇನ್ನು ಕೆಲ ದಿನಗಳು ವಿದ್ಯುತ್ ಹೀಗೆ ಮುಂದುವರೆದರೆ ರೈತರು ಎಲ್ಲಾ ಬೆಳೆಗಳನ್ನು ಕಳೆದುಕೊಂಡು ತೀವ್ರ ಸಂಕಷ್ಟಕ್ಕೀಡಾಗಬೇಕಾಗುತ್ತದೆ.
ಪತ್ರಕರ್ತರ ವಿವಿಧ ಬೇಡಿಕೆಗಳ ಈಡೇರಿಸಲು ನಗರಸಭೆ ಅಧ್ಯಕ್ಷರಿಗೆ ಮನವಿ
ಇದಕ್ಕೆ ಕಾರಣ ಲೈನಮ್ಯಾನ್ಗಳ ನಿರ್ಲಕ್ಷ್ಯ ಕಾರಣವಾಗಿದೆ.ಆದ್ದರಿಂದ ನಮಗೆ ಸರಿಯಾಗಿ ವಿದ್ಯುತ್ ಸರಬರಾಜಿಗೆ ಕ್ರಮ ಕೈಗೊಳ್ಳಬೇಕು ಇಲ್ಲದೆ ಹೋದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ತಮ್ಮ ಕಚೇರಿ ಮುಂದೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ರಸ್ತೆ ಅಗಲಿಕರಣದಲ್ಲಿ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ: ರಾಜಾ ಪಿಡ್ಡನಾಯಕ ಆರೋಪ
ನಂತರ ಜೆಸ್ಕಾಂ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ರೈತ ಮುಖಂಡರಾದ ಬಸವರಾಜ ಸಾಹು ಅಂಬ್ರೇಶ ಮರಾಠ ಸುಭಾಸ್ ಸಾಹುಕಾರ ಅಂಬ್ರೇಶ ಹಚ್ಚರಡ್ಡಿ ಚಂದ್ರಶೇಖರ ಕುಂಬಾರ ಜಾವೀದ್ ಹುಸೇನ್ ವಿರೇಶ ಕುಂಬಾರ ಮೌನೇಶ ಪಡದಳ್ಳಿ ರವಿ ಕಾಮತ್ ರಾಮು ಬೂದನೂರ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…