ಹಿರಿಯರನ್ನು ಗೌರವಿಸುವ ಮನೋಭಾವ ಯುವಜನತೆ ಬೆಳೆಸಿಕೊಳ್ಳಬೇಕು: ಜಯಶ್ರೀ ಮತ್ತಿಮಡು

0
29

ಕಲಬುರಗಿ: ಸಮಾಜದಲ್ಲಿನ ಹಿರಿಯರನ್ನು ಗೌರವಿಸುವ ಮನೋಭಾವ ಇಂದಿನ ಯುವಜನತೆ ಬೆಳೆಸಿಕೊಳ್ಳುವುದರ ಮೂಲಕ ಅವರ ಜೀವನ ಅನುಭವ ಹಾಗೂ ಮಾರ್ಗದರ್ಶನ ಪಡೆದು ಸುಂದರ ಬದುಕು ರೂಪಿಸಿಕೊಳ್ಳುವಂತೆ ಸಮಾಜ ಸೇವಕಿ ಜಯಶ್ರೀ ಬಸವರಾಜ ಮತ್ತಿಮಡು ಕರೆ ನೀಡಿದರು.

ನಗರದ ಸೈಯದ ಚಿಂಚೋಳಿಸ ರಸ್ತೆಯಲ್ಲಿರುವ ಮಹಾದೇವಿ ವೃದ್ಧಾಶ್ರಮದಲ್ಲಿ ಕರ್ನಾಟಕ ರಾಜ್ಯ ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮದ ರಾಜ್ಯ ನಿರ್ದೇಶಕರಾದ ಸುರೇಶ ಎಸ್.ತಂಗಾ ಅವರು ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕರಾದ ಬಸವರಾಜ ಮತ್ತಿಮಡು ರವರ ಜನ್ಮ ದಿನದ ಅಂಗವಾಗಿ ಆಯೋಜಿಸಿದ ಪ್ರಸಾದ ವಿತರಣೆ ಸಮಾರಂಭವನ್ನು ಹಿರಿಯರಿಗೆ ಊಟ ಬಡಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ಶಿಕ್ಷಣದ ಜೊತೆಗೆ ಮಕ್ಕಳಿಗೆ ಮನೆಯಲ್ಲಿ ಸಂಸ್ಕಾರ ನೀಡುವುದು ಅತ್ಯವಶ್ಯವಾಗಿದ್ದು ಸಂಸ್ಕಾರ ಕಲಿತ ಮಗು ಸಂತಸದಿಂದ ಹಾಗೂ ಸಮಾಜಕ್ಕೆ ಶಕ್ತಿಯಾಗಿ ಬೆಳೆಯಬಲ್ಲದು ಎಂದು ಅವರು ಅಭಿಪ್ರಾಯಪಟ್ಟರು.  ಜನ್ಮ ದಿನವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಿದ ಸುರೇಶ ತಂಗಾ ಅವರಿಗೆ ಮತ್ತಿಮಡು ರವರು ಅಭಿನಂದನೆ ಸಲ್ಲಿಸಿದರು.

Contact Your\'s Advertisement; 9902492681

ಸಮಾರಂಭದಲ್ಲಿ ಅಖಿಲ ಭಾರತ ವೀರಶೈವ ಮಹಾಸಭೆಯ ಕಾರ್ಯಕಾರಿ ಸಮಿತಿ ಸದಸ್ಯರಾದ ನಾಗಲಿಂಗಯ್ಯ ಮಠಪತಿ, ಶಹಾಬಾದ ನಗರ ಸಭೆಯ ಸದಸ್ಯರಾದ ರವಿ ರಾಠೋಡ, ಜೈನ ಸಮಾಜದ ಯುವ ಮುಖಂಡರಾದ ರಾಜೇಂದ್ರ ಕುಣಚಗಿ, ಬಿ.ಜೆ.ಪಿ. ಮಹಿಳಾ ಪ್ರಮುಖರಾದ ಭಾಗೀರಥಿ ಗುನ್ನಾಪೂರ ಮುಖಂಡರಾದ ಮಂಜುನಾಥ ವಾರದ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಸಮಾರಂಭದ ಅಧ್ಯಕ್ಷತೆಯನ್ನು ಕೆ.ಎಂ.ಡಿ.ಸಿ. ನಿರ್ದೇಶಕರಾದ ಸುರೇಶ ಎಸ್.ತಂಗಾ ವಹಿಸಿದ್ದರು. ವೃದ್ಧಾಶ್ರಮದಲ್ಲಿರುವ ವಯೋವೃದ್ಧರಿಗೆ ಜನ್ಮ ದಿನದ ಅಂಗವಾಗಿ ಹೋಳಿಗೆ, ಹಾಲು, ತುಪ್ಪದ ಪ್ರಸಾದ ವ್ಯವಸ್ಥೆ ಮಾಡಿರುವ ಕಾರ್ಯ ಎಲ್ಲರಿಂದ ಪ್ರಶಂಸನೆಗೊಳಗಾಯಿತು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here