ಸುರಪುರ: ಸಾಮಾಜಿಕ ಅಂತರ ಕಾಪಾಡಿಕೊಂಡು ಕೆಲವ ನಿರ್ವಹಿಸಬೇಕಾದ ಅನಿವಾರ್ಯತೆ ಇರುವ ಕೆಲವೊಂದು ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ತಮ್ಮ ಒತ್ತಡಮಯ ಕರ್ತವ್ಯದ ಮಧ್ಯೆ ಅವರ ಎಲ್ಲಾ ಕುಟುಂಬ ವರ್ಗದವರು ಒಂದು ಕಡೆ ಸೇರಿ ಪರಸ್ಪರ ಭೇಟಿಯಾಗುವ ಇಂತಹ ಕಾರ್ಯಕ್ರಮಗಳಿಂದ ಒಬ್ಬರಿಗೊಬ್ಬರು ಮಾತನಾಡಿದಾಗ ಮನಸ್ಸು ಹಗುರಗೊಳ್ಳುವುದು ಎಂದು ಇಲ್ಲಿನ ಜೆಎಂಎಫ್ಸಿ ಹಾಗೂ ಸಿವಿಲ್ ನ್ಯಾಯಾಧೀಶರಾದ ಚಿದಾನಂದ ಬಡಿಗೇರ ಹೇಳಿದರು.
ನಗರದ ಬಂಧಿಖಾನೆ ಬಳಿ ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಕಾರಾಗೃಹ ಇಲಾಖೆಯ ಸಿಬ್ಬಂದಿ ಕುಟುಂಬ ಕಲ್ಯಾಣ ನಿಧಿ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿ ಮಾತನಾಡಿ ಕೊರೋನಾ ಸೋಂಕು ತಡೆಯಲು ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಲು ಹೇಳಲಾಯಿತು.
ಮಹಿಳಾ ಸ್ವ-ಸಹಾಯ ಗುಂಪುಗಳ ಬಲವರ್ಧನೆಗೆ ಯೋಜನೆಗಳು ಜಾರಿ: ಶಶಿಕಲಾ ಜೊಲ್ಲೆ
ಸರಕಾರದ ಕೆಲವೊಂದು ಇಲಾಖೆಗಳಲ್ಲಿ ನೌಕರರು ತಾವು ನೌಕರಿಗೆ ಸೇರಿದಾಗಿನಿಂದ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಕೆಲಸವನ್ನು ನಿರ್ವಹಿಸಬೇಕಾಗುತ್ತದೆ ಅಂತಹ ಇಲಾಖೆಗಳಲ್ಲೊಂದಾಗಿರುವ ಬಂಧಿಖಾನೆ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ತಮ್ಮ ದಿನನಿತ್ಯದ ಕರ್ತವ್ಯದ ಒತ್ತಡ ಮಧ್ಯೆ ಮನಸ್ಸು ಹಗುರವಾಗಲು ಹಾಗೂ ನಮ್ಮತನವನ್ನು ಮರುಕಳಿಸಲು ಇಂತಹ ಸಭೆ ಸಮಾರಂಭಗಳು ತುಂಬಾ ಅವಶ್ಯಕ ಎಂದ ಅವರು ಹೇಳಿದರು, ಇಲಾಖೆಯ ನೌಕರರ ಕುಟುಂಬಗಳು ಒಂದು ಕಡೆ ಸೇರಿಕೊಂಡು ತಮ್ಮ ಸುಖ ದು:ಖಗಳನ್ನು ಹಂಚಿಕೊಳ್ಳಲು ನೆರವಾಗುವುದು ಎಂದು ಹೇಳಿದರು.
ಸುರಪುರ: ಸಾವಯವ ಕೃಷಿ ಪದ್ಧತಿ ಕುರಿತು ಸಂವಾದ ಕಾರ್ಯಕ್ರಮ
ಮುಖ್ಯ ಅತಿಥಿಗಳಾಗಿದ್ದ ಉಪ ಖಜಾನಾಧಿಕಾರಿ ಡಾ.ಎಂ.ಎಸ್.ಶಿರವಾಳ, ಮುಖಂಡರಾದ ವೇಣುಗೋಪಾಲ ನಾಯಕ ಜೇವರ್ಗಿ ಮಾತನಾಡಿದರು, ಬಂಧಿಖಾನೆ ಅಧಿಕ್ಷಕಿ ವಿಜಯಲಕ್ಷ್ಮೀ ಹಾದಿಮನಿ ಅಧ್ಯಕ್ಷತೆ ವಹಿಸಿದ್ದರು, ಸಹಾಯಕ ಜೈಲರುಗಳಾದ ಅರುಣಕುಮಾರ ಪಾಟೀಲ,ಪುಂಡಲೀಕ ಟಿ.ಕೆ ಉಪಸ್ಥಿತರಿದ್ದರು, ಬಂಧಿಖಾನೆ ವೀಕ್ಷಕರಾದ ಬಸವರಾಜ ನಾಯಕ ಡೊಣ್ಣಿಗೇರಿ ನಿರೂಪಿಸಿದರು ಹಾಗೂ ಪ್ರವೀಣ ತಗೋಣಿ ವಂದಿಸಿದರು.
ಈ ಸಂದರ್ಭದಲ್ಲಿ ಪಿಯುಸಿ ದ್ವಿತೀಯ ವರ್ಷದಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಂಶಿಕೃಷ್ಣ ಪುಂಡಲೀಕ ಅವರಿಗೆ ೨೦ಸಾವಿರ ರೂ ಪ್ರೋತ್ಸಾಹ ಧನ ವಿತರಿಸಲಾಯಿತು, ಅಲ್ಲದೆ ಇದೇ ಸಂದರ್ಭದಲ್ಲಿ ಮಕ್ಕಳಿಗಾಗಿ ವಿವಿಧ ಕ್ರೀಡೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.
ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…
ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…