ಎಸ್.ಟಿ ಜಂಟಿ ಹೋರಾಟ ಸಮಿತಿ ಸಭೆ ನಾಳೆ

0
221

ಶಹಾಬಾದ: ನಗರದ ಮರಗೋಳ ಕಾಲೇಜಿನ ಪಕ್ಕದಲ್ಲಿರುವ ಬೀರಪ್ಪ ಬೆಟ್ಟದ ಶ್ರೀ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಮಾರ್ಚ ೭ ರಂದು ಬೆಳಿಗ್ಗೆ ೧೦-೦೦ ಗಂಟೆಗೆ ಕುರುಬ ಮತ್ತು ಕೋಲಿ ಸಮಾಜದ ಎಸ್.ಟಿ ಜಂಟಿ ಹೋರಾಟ ಸಮಿತಿ ವತಿಯಿಂದ ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ತಾಲೂಕು ಕರ್ನಾಟಕ ಪ್ರದೇಶ ಕುರುಬರ ಸಂಘದ ಅಧ್ಯಕ್ಷ ಮಲ್ಕಣ್ಣ ಮುದ್ದಾ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಈ ಒಂದು ಸಭೆಯಲ್ಲಿ ಎಸ್.ಟಿ ಜಂಟಿ ಹೋರಾಟ ಸಮಿತಿಯ ಗೌರವ ಅಧ್ಯಕ್ಷ ತಿಪ್ಪಣ ಕಮಕನೂರ, ದೇವೇಂದ್ರಪ್ಪ ಪೂಜಾರಿ ಮರತೂರ, ಭೀಮಣ್ಣಾ ಸಾಲಿ,ತಿಪ್ಪಣ್ಣ ಬಳಬಟ್ಟಿ, ಮಲ್ಲಿಕಾರ್ಜುನ ಪೂಜಾರಿ ಭಂಕೂರ,ರಾಜ್ಯ ಮಟ್ಟದ ಮತ್ತು ಜಿಲ್ಲಾ ಮಟ್ಟದ ನಾಯಕರು ಆಗಮಿಸಲಿದ್ದಾರೆ. ಎರಡು ಸಮಾಜದ ಭಾಂದವರು ಪದಾಧಿಕಾರಿಗಳು ಮತ್ತು ನಾಯಕರು ಈ ಸಭೆಗೆ ಆಗಮಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಬೇಕೆಂದು ಮನವಿ ಮಾಡಿದರು.

Contact Your\'s Advertisement; 9902492681

ಅಸ್ಪೃಶ್ಯತೆ ಹೋಗಲಾಡಿಸಲು ಪ್ರತಿಯೊಬ್ಬರೂ ಸಂಕಲ್ಪ ಮಾಡಬೇಕು: ಬಸವರಾಜ.ಕೆ ತೋಟದ್

ಈ ಸಂದರ್ಭದಲ್ಲಿ ತಾಲೂಕ ಕೋಲಿ ಸಮಾಜ ಅಧ್ಯಕ್ಷ ಶಿವಕುಮಾರ ತಳವಾರ,ಕರ್ನಾಟಕ ಪ್ರದೇಶ ಕುರುಬರ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಹಣಮಂತರಾಯ ಪೂಜಾರಿ, ಕರ್ನಾಟಕ ಪ್ರದೇಶ ಕುರುಬರ ಸಂಘದ ಕಾರ್ಯಾಧ್ಯಕ್ಷ ನಿಂಗಣ್ಣ ಪೂಜಾರಿ, ಕರ್ನಾಟಕ ಪ್ರದೇಶ ಕುರುಬರ ಸಂಘದ ತಾಲ್ಲೂಕು ಉಪಾಧ್ಯಕ್ಷ ಮಲ್ಲಿಕಾರ್ಜುನ್.ಸಿ.ಪೂಜಾರಿ,ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ತಿಪ್ಪಣ್ಣ ನಾಟೀಕರ್ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here