ನಿರಂತರ ಅಧ್ಯಯನ, ಸಂಶೋಧನೆಯ ಗುಣ ಅಳವಡಿಸಿಕೊಳ್ಳಿ: ಡಾ.ಉಮೇಶ ಜಾಧವ

0
21

ಕಲಬುರಗಿ: ಸೋಲು ಗೆಲುವಿನ ಮೊದಲ ಮೆಟ್ಟಿಲು, ಹೀಗಾಗಿ ನಿರಂತರ ಅಧ್ಯಯನ, ಸಂಶೋಧನೆಯ ಗುಣ ಅಳವಡಿಸಿಕೊಳ್ಳವುದು ವಿದ್ಯಾರ್ಥಿ ಜೀವನಕ್ಕೆ ಅಗತ್ಯ ಎಂದು ಸಂಸದ ಡಾ.ಉಮೇಶ ಜಾಧವ ಅವರು ಅಭಿಪ್ರಾಯಪಟ್ಟರು.

ಭಾನುವಾರ ನಗರದ ವಿಶ್ವೇಶ್ವರಯ್ಯ ತಾಂತ್ರಿಕ ವಿದ್ಯಾಲಯದ ಕಲಬುರಗಿ ಪ್ರಾದೇಶಿಕ ಕಚೇರಿಯಲ್ಲಿನ ಸೆಮಿನಾರ್ ಹಾಲ್ ನಲ್ಲಿ 35ನೇ ರಾಷ್ಟ್ರೀಯ ವಿಜ್ಞಾನ ದಿನ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

Contact Your\'s Advertisement; 9902492681

ಇಂದು ಶಹಾಪುರ ನಗರಕ್ಕೆ ನಾಡೋಜ ಮಹೇಶ್ ಜೋಷಿ

ಕೋವಿಡ್-19 ವಿರುದ್ಧದ ಹೋರಾಟಕ್ಕಾಗಿ ವ್ಯಾಕ್ಸಿನ್ ಕಂಡುಹಿಡಿಯಲು ಇಡೀ ಜಗತ್ತೇ ಶ್ರಮಿಸುತ್ತಿದ್ದಾಗ, ಭಾರತವು ಅತ್ಯಂತ ಪರಿಣಾಮಕಾರಿ ವ್ಯಾಕ್ಸಿನ್ ನನ್ನು ಸಂಶೋಧಿಸಿದೆ. ಈ ಶ್ರೇಯಸ್ಸು ನಮ್ಮ ವಿಜ್ಞಾನಿಗಳಿಗೆ ಸಲ್ಲಬೇಕು ಎಂದು ಹೆಮ್ಮೆ ಪಟ್ಟರು. ಹಲವು ವೈಜ್ಞಾನಿಕ ಕ್ರಾಂತಿಗೆ ಭಾರತದ ವಿಜ್ಞಾನಿಗಳು ಸಾಕ್ಷಿಯಾಗಿದ್ದಾರೆ ಎಂದು ಶ್ಲಾಘಿಸಿದರು.

ಪ್ರಸ್ತುತ ವಿಜ್ಞಾನ, ತಂತ್ರಜ್ಞಾನ ಸಾಕಷ್ಟು ಮುಂದುವರಿದಿದ್ದು, ವಿದ್ಯಾರ್ಥಿಗಳು ಎಂಜಿಯರ್, ಡಾಕ್ಟರ್ ಏನೇ ಆಗಲು ಬಯಸಲಿ. ಆದರೆ, ಹಣಕ್ಕಿಂತ ಸಮಯಕ್ಕೆ ಹೆಚ್ಚು ಒತ್ತುಕೊಟ್ಟು ಅವರು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಸಂಸದರು ಸಲಹೆ ನೀಡಿದರು.

ಜೇವರ್ಗಿ ರಾಷ್ಟೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ವ್ಯಕ್ತಿ ಸಾವು

ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಪ್ರಾದೇಶಿಕ ಆಯುಕ್ತರಾದ ಡಾ.ಎನ್.ವಿ.ಪ್ರಸಾದ ಅವರು ಮಾತನಾಡಿ, ಜೀವ ವಿಜ್ಞಾನ, ಸಾಮಾಜಿಕ ಅಭಿವೃದ್ಧಿ, ಸಂಶೋಧನಾತ್ಮಕ, ಆಧುನಿಕ ತಂತ್ರಜ್ಞಾನ ವಿಷಯಗಳ ಬಗ್ಗೆ ಗುಣಮಟ್ಟದ ಶಿಕ್ಷಣವು ವಿದ್ಯಾರ್ಥಿಗಳಿಗೆ ನೀಡುವುದು ಅಗತ್ಯವಾಗಿದೆ. ಗುಣಮಟ್ಟದ ಶಿಕ್ಷಣದೊಂದಿಗೆ ಸಂಶೋಧನೆಯಲ್ಲಿ ನಾವು ತೊಡಗಿಸಿಕೊಳ್ಳಬೇಕಿರುವುದು ಇಂದಿನ ಅವಶ್ಯಕ ಎಂದು ತಿಳಿಸಿದರು.

ನಾಸಾದ ಮಾಜಿ ವಿಜ್ಞಾನಿ ನಾರಾಯಣ ಇನಾಮದಾರ ಅವರು ಮಾತನಾಡಿ, ಸರ್. ಸಿ.ವಿ.ರಾಮನ್ ಅವರ ಸ್ಮರಣಾತ್ಮಕವಾಗಿ ‘ರಾಷ್ಟ್ರೀಯ ವಿಜ್ಞಾನ ದಿನ’ ಆಚರಿಸಲಾಗುತ್ತಿದ್ದು, ವಿಜ್ಞಾನ ಕ್ಷೇತ್ರಕ್ಕೆ ಅವರ ಕೊಡುಗೆ ಅಪಾರವೆಂದರು. ಇದೇ ವೇಳೆ ಶಾಂತಿ ಮತ್ತು ಅಭಿವೃದ್ಧಿಗಾಗಿ ವಿಜ್ಞಾನ ಎಂಬ ವಿಷಯ ಕುರಿತು ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ, ಹೈದರಾಬಾದ ಶಿಕ್ಷಣ ಸಂಸ್ಥೆಯ (ಎಚ್.ಕೆ.ಇ.) ಅಧ್ಯಕ್ಷ ಡಾ.ಭೀಮಾಶಂಕರ ಬಿಲಗುಂದಿ, ಡಾ.ಶರಣಬಸಪ್ಪ ಹರವಾಳ, ವಿ.ಟಿ.ಯು.ನ ಪ್ರಾದೇಶಿಕ ನಿರ್ದೇಶಕ ಡಾ.ಬಸವರಾಜ ಗಡಗಯ್, ಪ್ರೊ. ಎಂ.ಎಸ್.ಜೋಗದ, ಪ್ರೊ.ಶಂಭುಲಿಂಗಪ್ಪ.ಬಿ. , ವಿ.ಟಿ.ಯು.ನ ಭೋದಕ-ಭೋದಕೇತರ ಸಿಬ್ಬಂದಿ ಹಾಗೂ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here