ಶಹಾಪುರ : ಪ್ರಸ್ತುತ ದಿನಮಾನಗಳಲ್ಲಿ ಮಹಿಳೆಯರು ಎಲ್ಲ ಅಡೆತಡೆಗಳನ್ನು ಮೀರಿ ಕಲೆ,ಸಾಹಿತ್ಯ,ಸಂಗೀತ,ಸಂಸ್ಕೃತಿ,ರಾಜಕೀಯ,ವಿಜ್ಞಾನ,ತಂತ್ರಜ್ಞಾನ,ಆರ್ಥಿಕ,ಸಾಮಾಜಿಕ,ಹೀಗೆ ಹಲವಾರು ಕ್ಷೇತ್ರಗಳಲ್ಲಿ ಮಹಿಳೆಯರು ಸಾಧನೆಯನ್ನು ಮಾಡಿ ಮೆರೆದಿದ್ದಾರೆ ಅವರೆಲ್ಲರ ಆದರ್ಶ ತತ್ವಗಳು ನಮಗೆ ಸ್ಫೂರ್ತಿಯಾಗಿವೆ ಎಂದು ಭಾರತೀಯ ಜನತಾ ಪಾರ್ಟಿಯ ಮಹಿಳಾ ಮೋರ್ಚಾ ಮಂಡಲ ಅಧ್ಯಕ್ಷೆ ಶ್ರೀಮತಿ ಗಂಗಮ್ಮ ಮಣ್ಣೂರ ಹೇಳುದರು.
ಶಹಾಪುರ ತಾಲ್ಲೂಕಿನ ಗೋಗಿ ಗ್ರಾಮದ ಸವಿತಾ ಸಮಾಜ ಕಲ್ಯಾಣ ಮಂಟಪದಲ್ಲಿ ಭಾರತೀಯ ಮಹಿಳಾ ಮೋರ್ಚಾ ಘಟಕದ ವತಿಯಿಂದ ಹಮ್ಮಿಕೊಂಡಿರುವ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಶಹಾಪೂರ ಮಂಡಲ ಬಿಜೆಪಿ ಅಧ್ಯಕ್ಷ ರಾಜುಗೌಡ ಉಕ್ಕಿನಾಳ ಮಾತನಾಡಿ ಪ್ರತಿಯೊಬ್ಬ ಮಹಿಳೆಯರಿಗೆ ಗೌರವ ಕೊಡುವ ಅತ್ಯವಶ್ಯಕವಾಗಿದೆ,ಮಹಿಳೆ ಪ್ರತಿಯೊಂದು ಕ್ಷೇತ್ರದಲ್ಲಿ ದಾಪುಗಾಲು ಹಾಕುತ್ತಿರುವುದು ನಿಜಕ್ಕೂ ಸಂತಸದ ಸಂಗತಿ ಎಂದು ಹರ್ಷ ವ್ಯಕ್ತಪಡಿಸಿದರು.
ಸಮಾರಂಭದ ವೇದಿಕೆ ಮೇಲೆ ಮುಖಂಡರಾದ ಯಲ್ಲಯ್ಯ ನಾಯಕ,ವನದುರ್ಗ ತಾಲ್ಲೂಕು ಪಂಚಾಯಿತಿ ಸದಸ್ಯರಾದ ಚನ್ನಮ್ಮ ಜೇರಬಂಡಿ,ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಸುರೇಖಾ,ಪ್ರಧಾನ ಕಾರ್ಯದರ್ಶಿ ಸಂಗೀತಾ ಹೂಗಾರ,ಮಲ್ಲಿಕಾರ್ಜುನ ಹಿರೇಮಠ,ನಿರ್ಮಲ,ಮೀನಾಕ್ಷಿ,ಭಾಗ್ಯಶ್ರೀ ಕರಣಿಗಿ ತಿಪ್ಪಣ್ಣ ಬಾವಿ,ರಾಘವೇಂದ್ರ ಹಡಪದ್, ವಿಮಲಾಕ್ಷಿ,ಮಾದೇವಪ್ಪ ಅವಂಟಿ,ಸಂಗಣ್ಣ ಬಡಗ ಮಲ್ಲಿಕಾರ್ಜುನ್ ದೋತ್ರೆ,ಹಾಗೂ ಇತರರು ಉಪಸ್ಥಿತರಿದ್ದರು.ಇದೇ ಸಂದರ್ಭದಲ್ಲಿ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಬಸವಲಿಂಗಮ್ಮ ಹಾಗೂ ಯಮುನಮ್ಮ ಕೆಂಬಾವಿ ಅವರನ್ನು ಸನ್ಮಾನಿಸಿ ಸತ್ಕರಿಸಲಾಯಿತು ಜೊತೆಗೆ ಆರೋಗ್ಯ ತಪಾಸಣೆ ಕೂಡ ಹಮ್ಮಿಕೊಳ್ಳಲಾಗಿತ್ತು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…