ಬಿಸಿ ಬಿಸಿ ಸುದ್ದಿ

ಮಹಿಳಾ ಸ್ವಾವಲಂಬನೆಯಿಂದಲೇ ದೇಶದ ಅಭಿವೃದ್ಧಿ

ಆಳಂದ: ಮಹಿಳೆಯರು ಸಮಾಜದ ಮುಖ್ಯ ವಾಹಿನಿಯಲ್ಲಿ ಬಂದು ಪುರುಷನಂತೆ ದುಡಿದು ಸ್ವಾವಲಂಬನೆಯಿಂದ ಜೀವನ ಸಾಧಿಸಿದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಎಸ್‌ಆರ್‌ಜಿ ಫೌಂಡೇಶನ್‌ನ ಆಡಳಿತಾಧಿಕಾರಿ ಡಾ. ರಾಘವೇಂದ್ರ ಚಿಂಚನಸೂರ ಅಭಿಪ್ರಾಯಪಟ್ಟರು.

ಆಳಂದ ಪಟ್ಟಣದ ಪ್ರತಿಷ್ಟಿತ ಎಸ್‌ಆರ್‌ಜಿ ಫೌಂಡೇಶನ್ ಅಡಿಯಲ್ಲಿ ನಡೆಯುತ್ತಿರುವ ವೆಂಕಯ್ಯ ಕೂಸಯ್ಯ ಗುತ್ತೇದಾರ ಸ್ಮಾರಕ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಹಾಗೂ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ, ಕ್ರೀಡೆ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗಳ ಉದ್ಘಾಟನೆ ನೇರವೇರಿಸಿ ಮಾತನಾಡಿದರು.

ಬರೀ ಮಾತಲ್ಲೇ ಕಲ್ಯಾಣ, ಕೃತಯಲ್ಲಿ ಏನೂ ಇಲ್ಲ: ಡಾ. ಅಜಯ್ ಸಿಂಗ್ ಲೇವಡಿ

ಸಧ್ಯ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಶೇ ೩೩ ರಷ್ಟು ಮೀಸಲಾತಿ ನೀಡಲಾಗಿದೆ ಈ ಅವಕಾಶಗಳನ್ನು ಬಳಸಿಕೊಂಡು ಮಹಿಳೆಯರು ಮುಂದೆ ಬರಬೇಕು ಪ್ರಸ್ತುತ ಮಹಿಳೆಯರಿಗೂ ಸಮಾನ ಅವಕಾಶಗಳನ್ನು ಎಲ್ಲ ಕ್ಷೇತ್ರದಲ್ಲಿ ಕೊಡಲಾಗುತ್ತಿದೆ ಅದನ್ನು ಬಳಸಿಕೊಳ್ಳಬೇಕು ಎಂದು ಕರೆ ನೀಡಿದರು.

ಪದವಿ ಹಂತವು ಪಕ್ವತೆಯ ಹಂತವಾಗಿದ್ದು ಇಲ್ಲಿ ವಿದ್ಯಾರ್ಥಿಗಳು ಎಲ್ಲ ರೀತಿಯಿಂದ ಪ್ರಬುದ್ಧರಾಗುತ್ತಾರೆ ಅವರಿಗೆ ಈ ಹಂತದಲ್ಲಿ ಸೂಕ್ತ ಮಾರ್ಗದರ್ಶನದ ಅವಶ್ಯಕತೆ ಇದೆ. ವಿದ್ಯಾರ್ಥಿಗಳು ಕೂಡ ಸ್ವಪ್ರಯತ್ನ, ಸತತ ಅಧ್ಯಯನಶೀಲರಾಗಿ ಗುರಿ ಮುಟ್ಟುವ ಎದೆಗಾರಿಕೆ ಹೊಂದಬೇಕು ಎಂದು ಹೇಳಿದರು.

ಸರ್ವರ ಕಲ್ಯಾಣಕ್ಕೆ ಬಜೆಟ್: ಸ್ವಾಗತಾರ್ಹ

ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ಮಹಾದೇವ ವಡಗಾಂವ ಅವರು, ಈ ಭಾಗದ ಹೆಚ್ಚು ಹೆಚ್ಚು ವಿದ್ಯಾರ್ಥಿಗಳು ಉನ್ನತ ಅಧ್ಯಯನ ಕೈಗೊಂಡು ನಾಗರಿಕ ಸೇವಾ ಪರೀಕ್ಷೆಗಳಲ್ಲಿ ಯಶಸ್ಸು ಗಳಿಸಬೇಕು ಅಂದಾಗ ಮಾತ್ರ ಈ ಭಾಗದ ನಿಜವಾದ ಅಭಿವೃದ್ಧಿ ಸಾಧಿಸಿದಂತಾಗುತ್ತದೆ. ಮಾನವ ಅಭಿವೃದ್ಧಿ ಸೂಚ್ಯಾಂಕದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶವು ತೀರ ಹಿಂದೆ ಇದೆ ಈ ಹಣೆಪಟ್ಟಿ ಹೋಗಬೇಕಾದರೆ ನಾವು ಎಲ್ಲ ಕ್ಷೇತ್ರಗಳಲ್ಲಿ ಸುಸ್ಥಿರ ಅಭಿವೃದ್ಧಿ ಸಾಧಿಸಬೇಕಿದೆ ಎಂದರು.

ಬಿ.ಎಡ್ ಕಾಲೇಜ್ ಪ್ರಾಚಾರ್ಯ ಅಶೋಕರೆಡ್ಡಿ, ಎಂಎಆರ್‌ಜಿ ಕಾಲೇಜಿನ ಪ್ರಾಚಾರ್ಯ ಡಾ. ಅಪ್ಪಾಸಾಬ ಬಿರಾದಾರ ಮಾತನಾಡಿದರು. ವೇದಿಕೆಯ ಮೇಲೆ ಎಸ್ ಎನ್ ಕೋರೆ, ಎಸ್‌ಆರ್‌ಜಿ ಆಂಗ್ಲ್ ಮಾಧ್ಯಮ ಶಾಲೆಯ ಮುಖ್ಯಗುರು ಜ್ಯೋತಿ ವಿಶಾಖ್, ವಿದ್ಯಾರ್ಥಿ ಪ್ರತಿನಿಧಿ ವಿನೋದ ರಾಠೋಡ ಇದ್ದರು.

ರಾಷ್ಟ್ರೀಯ ಶಿಕ್ಷಣ ನೀತಿ 2020ರಲ್ಲಿ ನ್ಯಾಯ ಮತ್ತು ಒಗ್ಗೂಡುವಿಕೆ ಕಾರ್ಯಕ್ರಮ

ಶಿವಶರಣಪ್ಪ ಪೂಜಾರಿ ಪ್ರಾರ್ಥಿಸಿದರು. ಆಯೇಶಾ ಅಂಜುಮ್ ಸ್ವಾಗತಿಸಿದರು. ಖಂಡಪ್ಪ ವಗ್ಗಿ ನಿರೂಪಿಸಿದರೆ, ರಾಜಕುಮಾರ ಸುತಾರ ವಂದಿಸಿದರು. ಪ್ರಾಚಾರ್ಯ ಕಲ್ಯಾಣಿ ಸಾವಳಗಿ ಅಧ್ಯಕ್ಷತೆ ವಹಿಸಿದ್ದರು.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

28 mins ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

31 mins ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

34 mins ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

2 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

3 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

6 hours ago