ಸುರಪುರ: ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ೨೦೧೭-೧೮ನೇ ಸಾಲಿನಲ್ಲಿ ಹಾಕಲಾಗಿರುವ ಕೊಳವೆಬಾವಿಗಳಿಗೆ ಇಲ್ಲಿಯವರೆಗೂ ವಿದ್ಯುತ್ ಸಂಪರ್ಕ ಕಲ್ಪಿಸಿಲ್ಲ,ಇದರಿಂದ ರೈತರು ತೀವ್ರ ತೊಂದರೆ ಪಡುವಂತಾಗಿದೆ.ಆದ್ದರಿಂದ ಕೂಡಲೇ ಗಂಗಾಕಲ್ಯಾಣ ಯೋಜನೆ ಅಡಿಯಲ್ಲಿನ ಎಲ್ಲಾ ಫಲಾನುಭವಿಗಳಿಗೆ ವಿದ್ಯುತ್ ಪರಿವರ್ತಕ ಅಳವಡಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಡಾ: ಚಲಪತಿಗೌಡ ಬಣ) ವತಿಯಿಂದ ಜೆಸ್ಕಾಂ ಇಲಾಖೆಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ಎಸ್ಸಿಪಿ ಟಿಎಸ್ಪಿ ಅಡಿಯಲ್ಲಿ ರೈತರ ಕೊಳವೆಬಾವಿ ಹಾಕಿ ಇದುವರೆಗೂ ವಿದ್ಯುತ್ ಸಂಪರ್ಕ ಕಲ್ಪಿಸದೆ ಇರುವುದರಿಂದ ದೇವರು ವರ ಕೊಟ್ಟರು ಪೂಜಾರಿ ಕೊಡಲಿಲ್ಲ ಎನ್ನುವಂತಹ ಪರಸ್ಥಿತಿ ನಿರ್ಮಾಣವಾಗಿದೆ,ಇದರಿಂದ ರೈತರು ತೀವ್ರ ಸಂಕಷ್ಟ ಪಡುವಂತಾಗಿದೆ.ಆದ್ದರಿಂದ ರೈತರ ಕೊಳವೆಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಲ್ಲಿ ನಡೆದಿರುವ ಅಕ್ರಮವನ್ನು ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ಶಿವಮೊನಯ್ಯ ಎಲ್.ಡಿ.ನಾಯಕ ತಾಲೂಕು ಗೌರವಾಧ್ಯಕ್ಷ ಇಮಾಮಸಾಬ್ ಅರಕೇರಿ ತಾಲೂಕು ಅಧ್ಯಕ್ಷ ಮೌನೇಶ ಆರ್.ಭೋಯಿ ಬಸವರಾಜ ಕವಡಿಮಟ್ಟಿ ಸೋಮನಾಥ ನಾಯಕ ರಮೇಶ ಹಸನಾಪುರ ಹುಸೇನಪ್ಪ ಜೀವಣಗಿ ಇತರರಿದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…