ಶಹಾಬಾದ: ಮಹಿಳೆ ತನ್ನ ಹಕ್ಕನ್ನು ಪಡೆಯಲು ಹೋರಾಟ ನಡೆಸಿ ಗೆಲುವುದು ಪಡೆದ ದಿನವನ್ನೇ ಮಹಿಳಾ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದು ಲೇಖಕಿ ನೀಲಮ್ಮ ಕತ್ನಳ್ಳಿ ಹೇಳಿದರು.
ಅವರು ಬಿಜೆಪಿ ಪಕ್ಷದ ಕಾರ್ಯಾಲಯದಲ್ಲಿ ನಗರದ ಬಿಜೆಪಿ ಮಂಡಲ ಮಹಿಳಾ ಮೊರ್ಚಾದ ವತಿಯಿಂದ ಆಯೋಜಿಸಲಾದ ರಾಷ್ರ್ಟಿಯ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿದರು.
ತಿಮ್ಮಾಪುರ ಮರಗಮ್ಮ ದೇವಿ ಜಾತ್ರೆ ಅಂಗವಾಗಿ ಕೊಂಡ ಹಾಯುವ ಆಚರಣೆ
ಮಹಿಳೆಯರ ಆರ್ಥಿಕ, ಸಾಮಾಜಿಕ, ರಾಜಕೀಯ ಹಾಗೂ ಇನ್ನೀತರ ಕ್ಷೇತ್ರಗಳಲ್ಲಿ ಸಾಧನೆಯ ಸಂಕೇತ ದಿನ.ಹಿಂದೆ ಮಹಿಳೆಯರು ಕೇವಲ ನಾಲ್ಕು ಗೋಡೆಗಳ ಮಧ್ಯೆ ಜೀವಿಸುವ ಕಾಲವಿತ್ತು.ಮಾತ್ರವಲ್ಲ ಮತದಾನ ಮಾಡುವ ಹಕ್ಕು ಇರಲಿಲ್ಲ. ಯಾವುದೇ ರೀತಿಯ ಸ್ವಾತಂತ್ರ್ಯ, ಸ್ವ-ನಿರ್ಧಾರ, ಇಚ್ಛೆಗಳಿಗೆ ಬೆಲೆ ಇರುತ್ತಿರಲಿಲ್ಲ.ಆಕೆಯನ್ನು ಅಬಲೆಯಾಗಿ ಪರಿಗಣಿಸಿ ಶೋಷಣೆ ಮಾಡುವ ಕಾಲವಿತ್ತು.ಮಹಿಳೆಗೆ ಎಲ್ಲಾ ಸಾಮರ್ಥ್ಯವಿದ್ದರೂ ಅವಕಾಶದಿಂದ ವಂಚಿತೆಯಾಗಿದ್ದಳು.ಆದರೆ ಇಂದು ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಬಹು ದೊಡ್ಡ ಸಾಧನೆಯನ್ನೇ ಮಾಡಿದ್ದಾರೆ. ಆದ್ದರಿಂದ ಸಮಾಜ ಮಹಿಳೆಯರನ್ನು ನೋಡುವ ದೃಷ್ಟಿಕೋನ ಬದಲಾಗಬೇಕು.ಮಹಿಳೆಯರ ಸಾಧನೆಗೆ ಪ್ರೋತ್ಸಾಹ ನೀಡಬೇಕು.ಇದಕ್ಕೆ ಪುರುಷರ ನೈತಿಕ ಬೆಂಬಲ ದೊರಕಬೇಕೆಂದು ಹೇಳಿದರು.
ಇದೇ ಸಂದರ್ಭದಲ್ಲಿ ಮಹಿಳಾ ಸಾಧಕರಾದ ಲೇಖಕಿ ನೀಲಮ್ಮ ಕತ್ನಳ್ಳಿ ಹಾಗೂ ಶಿಕ್ಷಕಿ ಕಾಶಿಬಾಯಿ ಹಿರೇಮಠ ಅವರನ್ನು ಸನ್ಮಾನಿಸಲಾಯಿತು.
ಸಭೆಯಲ್ಲಿ ಮಹಿಳಾ ಮೊರ್ಚಾದ ಅಧ್ಯಕ್ಷೆ ಜಯಶ್ರಿ ಸೂಡಿ, ಜಿಲ್ಲಾ ಗ್ರಾಮಿಣ ಕಾರ್ಯದರ್ಶಿ ಜ್ಯೋತಿ ಶರ್ಮಾ, ಮಂಡಲದ ಕಾರ್ಯದರ್ಶಿ ಶಶಿಕಲಾ ಸಜ್ಜನ, ನಗರಸಭೆ ಸದಸ್ಯರಾದ ತಿಮ್ಮಾಬಾಯಿ ಕುಸಾಳೆ, ಜಯಶ್ರಿ ಜಿಂಗಾಡೆ, ನಂದಾ, ರತ್ನ ಬಿರಾದಾರ, ಮಹಾದೇವಿ, ಜಗು, ವಂದನಾ, ಶ್ವೇತಾ, ಪಾರ್ವತಿ, ಮಾಹಾಂತಮ್ಮ, ರೇತಾ, ಗಂಗು, ಸರಸ್ವತಿ, ಶಿಲ್ಪಾ, ಶಾಂತಾ, ಲುಕೆಶ್ವರಿ,ಕಮಲಾಬಾಯಿ, ಇಂದ್ರಾ,ಸಂಗಿತಾ, ಶಾಲಿನಿ,ಪ್ರೇಮಾ, ಅನುಪಮಾ, ಲತಾ, ಕತಾಸರ, ಪ್ರೇಮಿಲಾ, ಶಿವಲಿಲಾ, ಶಿವಲಿಲಾ, ಆರತಿ, ಅನುಸುಯಾ, ಮಾಲಾಶ್ರೀ, ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ಲತಾ ಸಂಜೀವ ನಿರೂಪಿಸಿ, ಸ್ವಾಗತಿಸಿದರು, ನೀಲಗಂಗಮ್ಮ ಘಂಟ್ಲಿ ವಂದಿಸಿದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…