ಕೆಕೆ ಪ್ರದೇಶದ ಅಭಿವೃದ್ಧಿಯಲ್ಲಿ ವಾಣಿಜ್ಯ ಕೈಗಾರಿಕೆಗಳ ಅಭಿವೃದ್ಧಿಯ ಪಾತ್ರ ಕುರಿತು ವಿಚಾರ ಸಂಕಿರಣ 14ಕ್ಕೆ

ಕಲಬುರಗಿ: ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿಯ ವತಿಯಿಂದ ಬರುವ 14 ರಂದು ರವಿವಾರ ಬೆಳಿಗ್ಗೆ 11:30 ಗಂಟೆಗೆ ನಗರದ ಸ್ಟೇಷನ್ ಬಜಾರ್ ಮುಖ್ಯ ರಸ್ತೆಯಲ್ಲಿ ಬರುವ ವಿಠ್ಠಲ ಮಂದಿರ ದೇವಸ್ಥಾನದ ನೂತನ ಸಭಾಂಗಣದಲ್ಲಿ “ಕಲ್ಯಾಣ ಕರ್ನಾಟಕ ಪ್ರದೆಶದ ಅಭಿವೃದ್ಧಿಗೆ ವಾಣಿಜ್ಯ ಮತ್ತು ಕೈಗಾರಿಕೆಗಳ ಅಭಿವೃದ್ಧಿಯ ಪಾತ್ರದ ಕುರಿತು ವಿಚಾರ ಸಂಕೀರಣ”  ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ಸಾನ್ನಿಧ್ಯವನ್ನು ಶ್ರೀಕ್ಷೇತ್ರ ಶ್ರೀನಿವಾಸ ಸರಡಗಿ ಮಠದ‌ ಪೀಠಾಧಿಪತಿಗಳಾದ ಶ್ರೀ ರೇವಣಸಿದ್ದ ಶಿವಾಚಾರ್ಯರು ವಹಿಸುವರು. ಅಧ್ಯಕ್ಷತೆಯನ್ನು ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಲಕ್ಷ್ಮಣ ದಸ್ತಿ ವಹಿಸುವರು.

ಬಂಜಾರ ಸಮುದಾಯದ ಅಭಿವೃದ್ದಿಗೆ ಒತ್ತು: ಶಾಸಕ ಖರ್ಗೆ

ಸಮಿತಿಯ ಮಹಾ ಪ್ರಧಾನ ಕಾರ್ಯದರ್ಶಿಗಳಾದ ಮನೀಷ ಜಾಜು ರವರು ವಿಚಾರ ಸಂಕಿರಣದ ವಿಷಯ ಮಂಡನೆ ಮಾಡುವರು. ಮುಖ್ಯ ಅತಿಥಿಗಳಾಗಿ ಪ್ರೋ.ಅಣ್ಣಾರಾವ ಧುತ್ತರಗಾಂವ, ಮಾರುತಿ ಪವಾರ, ದತ್ತಾತ್ರೆಯ ಪುಕಾಳೆ, ಸುಭಾಷ ಕಮಲಾಪೂರ, ವಿಜಯಕುಮಾರ ತೋಶ್ನಿವಾಲ್  ಮಜರ ಹುಸೈನ್, ಲಿಂಗರಾಜ ಸಿರಗಾಪೂರ, ಶಿವಲಿಂಗಪ್ಪ ಬಂಡಕ,ಡಾ.ಮಾಜೀದ ದಾಗಿ, ಮಾರುತಿ ಪವಾರ, ಅಶೋಕ್ ಧಂಗಾಪೂರ ಭಾಗವಹಿಸುವರು.

ವಿಚಾರ ಸಂಕಿರಣ ಚರ್ಚೆಯಲ್ಲಿ ವಿಶೇಷ ಆಹ್ವಾನಿತರಾಗಿ ವಿರೇಶ ಪುರಾಣಿಕ, ಮಹ್ಮದ್ ಮಿರಾಜುದ್ದಿನ್, ಜ್ಞಾನಮಿತ್ರ,ಹೆಚ್.ಎಂ.ಹಾಜಿ, ನಂದಕುಮಾರ, ಅಬ್ದುಲ್ ರಹೀಂ,ಸಾಲೋಮನ ದೀವಾಕರ, ಗುರುಲಿಂಗಪ್ಪ ಟೆಂಗಳಿ, ಪ್ರಭು ಪಾಟೀಲ, ಶಾಂತಪ್ಪ ಕಾರಭಾಸಗಿ,ಗುರುರಾಜ ಭಂಡಾರಿ, ಹೇಮಂತ ರಾಠೋಡ, ಆನಂದ ಚವ್ಹಾಣ, ಆನಂದ ದೇಶಪಾಂಡೆ, ಸಂಧ್ಯಾರಾಜ ಸ್ಯಾಮ್ಯುವೆಲ್, ಶಿವರಾಜ ಪಾಟೀಲ್, ಸಾಜೀದ ಅಲಿ ರಂಜೋಳ್ಳ್ವಿ,ಬಾಬಾ ಫಕ್ರುದ್ದೀನ್ ಅಸ್ಲಂ ಚೋಂಗೆ, ಸುನೀಲ್ ಬಿ,  ಲಿಂಗಣ್ಣ ಉದನೂರ, ಮಲ್ಲಿಕಾರ್ಜುನ ಬಿ., ಶ್ರೀನಿವಾಸ ಕಠಾರೆ,ಚಾಂದ ಅಕ್ಬರ್ ಹಾಗೂ ಆನಂದ ಖಾನಾಪೂರ ಆಗಮಿಸುರು. ಈ ವಿಚಾರ ಸಂಕಿರಣದಲ್ಲಿ ಕೆಲವೊಂದು ಮಹತ್ವದ ನಿರ್ಣಯಗಳನ್ನು ಸಹ ಕೈಗೊಳ್ಳಲಾಗುವುದು.

ಕೆಕೆ ಪ್ರದೇಶದ ಅಭಿವೃದ್ಧಿಯಲ್ಲಿ ವಾಣಿಜ್ಯ ಕೈಗಾರಿಕೆಗಳ ಅಭಿವೃದ್ಧಿಯ ಪಾತ್ರ ಕುರಿತು ವಿಚಾರ ಸಂಕಿರಣ 14ಕ್ಕೆ

 ಈ ಸಂದರ್ಭದಲ್ಲಿ ಸುಮಾರು 3 ದಶಕಗಳಿಂದ ಹೈದರಾಬಾದ ಕರ್ನಾಟಕ ಜನಪರ ಸಂಘರ್ಷ ಸಮಿತಿ ಹೆಸರಿನಿಂದ ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗಾಗಿ ನಿರಂತರ ಹೋರಾಟ ಮಾಡಿಕೊಂಡು ಬಂದಿರುವುದಲ್ಲದೆ ಹೈ.ಕ. ಪ್ರದೇಶಕ್ಕೆ ಕಲ್ಯಾಣ ಕರ್ನಾಟಕ ನಾಮಕರಣ ಮಾಡಬೇಕೆಂದು ಸರಕಾರದ ಮೇಲೆ ಒತ್ತಾಯಿಸಲಾಗಿತ್ತು.

ಸಮಿತಿಯ ನಿರ್ಧಾರದಂತೆ ನಮ್ಮ ಪ್ರದೇಶದ ಹೆಸರು ಬದಲಾವಣೆಯ ನಂತರ ಸಮಿತಿಯ ಹೆಸರನ್ನು ಬದಲಾಯಿಸಬೇಕೆಂಬ ನಿರ್ಧಾರದಂತೆ ಈಗ ಸಮಿತಿಯ ಹೆಸರು ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿ ಎಂದು ಸಮಿತಿಯ ಸರ್ವಾನುಮತದ ನಿರ್ಣಯದಂತೆ ಅಧಿಕೃತವಾಗಿ ನಾಮಕರಣ ಮಾಡಿ ಚಾಲನೆ ನೀಡಲಾಗುವುದು.

ನಿಂಬರ್ಗಾ ಗ್ರಾಮದಲ್ಲಿ ವಿಶೇಷ ಪೂಜೆ ಹಾಗೂ ದೀಪೋತ್ಸವ

ಈ ಮಹತ್ವದ ವಿಚಾರ ಸಂಕಿರಣ ಕಾರ್ಯಕ್ರಮಕ್ಕೆ ಸಮಿತಿಯ ಕ್ರೀಯಾಸದಸ್ಯರು, ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ ಉದ್ಯೋಗ, ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರದ ಅಭಿವೃದ್ಧಿಪರ ಚಿಂತಕರು, ವ್ಯಾಪಾರಸ್ಥರು, ಸಾಮಾಜಿಕ ಕಳಕಳಿಯ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಪರ ಆಯಾ ಕ್ಷೇತ್ರದ ನಾಗರಿಕ ಪ್ರಮುಖರು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಸಮಿತಿ ಮುಖಂಡ ಲಿಂಗರಾಜ ಸಿರಗಾಪೂರ, ಶಿವಲಿಂಗಪ್ಪ ಬಂಡಕ, ಗುರುರಾಜ ಭಂಡಾರಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

4 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

6 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

6 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

6 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

6 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

6 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420