ಗ್ರಾಮ ಪಂಚಾಯತನಲ್ಲಿ ಸಮುದಾಯ ವಂತಿಕೆ ಸಂಗ್ರಹಣಾ ಅಭಿಯಾನ

ಕಲಬುರಗಿ:ಅಫಜಲಪೂರು ತಾಲೂಕಿನ ಗಾಣಾಗಪೂರು ಗ್ರಾಮಪಂಚಾಯತ್‌ನಲ್ಲ್ಲಿ ಜಲ ಜೀವನ ಮಿಷನ ಅಡಿಯಲ್ಲಿ ಕಾರ್ಯಾತ್ಮಕ ಮನೆ ನಳ ಸಂಪರ್ಕ ನೀಡುವುದಕ್ಕೆ ಸಮುದಾಯ ಮಾಲಿಕತ್ವ ವಹಿಸುವ ಹಾಗೂ ಕಾರ್ಯಕ್ರಮದಲ್ಲಿ ಭಾಗೀದಾರರಾಗಲು ಸಮುದಾಯ ವಂತಿಕೆ ಸಂಗ್ರಹಣಾ ಅಭಿಯಾನ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಗಾಣಗಾಪೂರು ಗ್ರಾಮವು ಜಲ ಜೀವನ ಮಿಷನ ಅಡಿಯಲ್ಲಿ ಆಯ್ಕೆಗೊಂಡು, ಯೋಜನೆಯ ವರದಿ ತಯಾರಿ ಆಗಿದ್ದು ಟೆಂಡರ್ ಕರೆಯುವ ಹಂತದಲ್ಲಿದ್ದು, ಇದಕ್ಕೆ ಟೆಂಡರ್ ಪ್ರಕ್ರಿಯೆ ಪೂರ್ವಭಾವಿಯಾಗಿ ಯೋಜನೆಗೆ ಸರಕಾರದಿಂದ ೯೦% ಅನುದಾನದ ನೀಡುತ್ತಿದ್ದು,ಬಾಕಿ ಉಳಿದ ೧೦% ಪ್ರತಿ ಶತ ಅನುದಾನವನ್ನು ಸಮುದಾಯ ವಂತಿಕೆ ನೀಡಿ ಗ್ರಾಮಸ್ಥರು ಯೋಜನೆಯಲ್ಲಿ ಭಾಗೀದಾರರಾಗಲು & ಮಾಲಿಕತ್ವ ವಹಿಸುವ ನಿಟ್ಟಿನಲ್ಲಿ ಆಯೋಜಿಸದ ಕಾರ್ಯಕ್ರಮದಲ್ಲಿ ಅಫಜಲಪೂರು ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಅಬ್ದುಲ್ ನಭಿ ಸಭೆಯ ಮೂಲಕ ಗ್ರಾಮಸ್ಥರಿಗೆ ಮನವರಿಕೆ ಮಾಡಿಕೊಟ್ಟರು.

ಕೃಷಿಗೆ ಕಾಯುಕಲ್ಪ ನಿಡುವ ಆಗ್ರೋ-ರೋಬೋಟ್ಸಗಳು

ಕಾರ್ಯಕ್ರಮದಲ್ಲಿ ಜಲ ಜೀವನ ಮಿಷನ ಯೋಜನೆಯ ಡಿಪಿಎಂ. ಡಾ.ರಾಜು ಕಂಬಾಳಿಮಠ ರವರು ಮಾತನಾಡಿ ಜಲ ಜೀವನ ಮಿಷನ್ ಯೋಜನೆ ಯಶಸ್ವಿಯಾಗಬೇಕಾದರೆ ಸಮುದಾಯದ ಪಾತ್ರ ಅವಶ್ಯಕವಾಗಿದೆ, ಜಲ ಜೀವನ ಮಿಷನ ಯೋಜನೆಯಡಿಯಲ್ಲಿ ವೈಯಕ್ತಿಕ ಶೌಚಾಲಯ, ಬಚ್ಚಲು ಗುಂಡಿ, ನಿರ್ಮಾಣ ಮಾಡಿಕೊಳ್ಳುವಂತೆ ತಿಳಿಸಿದರು.

ಯೋಜನೆಯ ತಾಂತ್ರಿಕ ವಿಚಾರಗಳನ್ನು ಸದರಿ ಗ್ರಾಮದ ಸಹಾಯಕ ಅಭಿಯಂತರಾದ ಸರ್ವಜ್ಞ ಪೂಜಾರಿ ತಿಳಿಸಿದರು ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಾದ ಮಹಾಂತೇಶ ಜಮಾದಾರ್ ಮಾತನಾಡಿ ಗ್ರಾಮಸ್ಥರು ಜಲ ಜೀವನ ಮಿಷನ್ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕೆಂದರು. ವೇದಿಕೆ ಮೇಲೆ ಅಫಜಲಪೂರು ಸಹಾಯಕ ಕಾರ್ಯಪಾಲಕ ಅಭಿಯಂತರಾದ ರಮೇಶ ಮಂಠಾಳೆ ಗ್ರಾಮ ಪಂಚಾಯತ ಅಧ್ಯಕ್ಷರಾದ ಸರ್ವಮಂಗಳಾ ದತ್ತಪ್ಪಗೌಡ ಪಾಟೀಲ್, ಉಪಾಧ್ಯಕ್ಷರಾದ ಕರುಣಾಕರ ನಾರಾಯಣಭಟ್ಟ ಪೂಜಾರಿ ಉಪಸ್ಥಿತರಿದ್ದು, ತಮ್ಮ ಪಾಲಿನ ಸಮುದಾಯ ವಂತಿಕೆ ನೀಡಿದರು.

ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ 40ನೇ ವಾರ್ಷಿಕೋತ್ಸವ

ಸಭೆಯಲ್ಲಿ ಗುರುಬಸಪ್ಪ ಡಿ ಪಾಟೀಲ್, ವಿಯಲಕ್ಷ್ಮಿ ನಾಗೇಶ ಹೊಸ್ಮನಿ, ಶೇಖ ಅಲಿ ನಬಿಸಾಬ ತಾಂಬೋಳಿ, ಶಾಂತಪ್ಪ ಸಿದ್ದಪ್ಪ ಹೊಸಮನಿ, ಶೈನಜಬಿ ಅನ್ವರ ತಾಂಬೋಳೀ, ಸರ್ವಜ್ಞ ಪೂಜಾರಿ ರವರು ಒಟ್ಟು ರೂ.೨೨೫೦೦/-ಸಮುದಾಯವ ವಂತಿಕೆ ರೂ.ಗಳನ್ನು ನೀಡಿದರು., ರೂಡಾ ಸಂಸ್ಥೆಯ ತಂಡದ ನಾಯಕರಾದ ಸಂತೋಷ ಮೂಲಗೆ, ತಾಲೂಕು ನೋಡ್‌ಲ್ ಅಧಿಕಾರಿ ಸುರೇಶ ಪಟ್ನಾಯಕ್ ,ಶ್ರವಣಕುಮಾರ ಅಕ್ಕಿಮನಿ ಭಾಗವಹಿಸಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

6 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

8 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

9 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

9 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

9 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

9 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420