ಕಲಬುರಗಿ: ನೇರವಾಗಿ ಓದುಗರಿಗೆ ತಲುಪಿಸುವ ಕನ್ನಡ ನಾಡು ಲೇಖಕರ ಮತ್ತು ಓದುಗರ ಸಹಕಾರ ಸಂಘದ ಈ ಸಾಮೂದಾಯಿಕ ಕಾರ್ಯ ಇತರರಿಗೆ ಮಾದರಿಯಾಗಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಬಿ.ವಿ.ವಸಂತಕುಮಾರ ಅಭಿಪ್ರಾಯಪಟ್ಟರು.
ಕನ್ನಡ ನಾಡು ಲೇಖಕರ ಮತ್ತು ಓದುಗರ ಸಹಕಾರ ಸಂಘದ ವತಿಯಿಂದ ನಗರದ ವಿಜಿ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡ 2020ರ ಆರು ಕೃತಿಗಳ ಲೋಕಾರ್ಪಣೆ ಹಾಗೂ 2019ರ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಒಳ್ಳೆಯದನ್ನು, ಒಳಿತನ್ನು ನಾವೇ ತಂದುಕೊಳ್ಖಬೇಕು. ಪುಸ್ತಗಳು ಬದುಕಿನ ದಾರಿದೀಪ ಎಂದು ತಿಳಿಸಿದರು.
ಗ್ರಾಮೀಣ ಬದುಕಿನ ಸ್ಥಿತ್ಯಂತರ ಕ್ಕೆ ಹಿಡಿದ ಕನ್ನಡಿ ‘ಅಮೀನಪುರದ ಸಂತೆ’
ನಾವು ಬರೆದ ಪುಸ್ತಕಗಳು ನಮಗೆ ಬೆಳಕು ಕೊಡುವುದಿದ್ದರೆ ಇನ್ನೊಬ್ಬರಿಗೆ ಹೇಗೆ ಬೆಳಕು ನೀಡಬಲ್ಲವು? ಅಳಿದ ಮೇಲೆ ಉಳಿಯುವುದೇ ಪುಸ್ತಕ ಎಂದು ಹೇಳಿದರು.
ಮುಖ್ಯ ಅತಿಥಿಯಾಗಿದ್ದ ಗುಲ್ಬರ್ಗ ವಿವಿ ಕುಲಪತಿ ಡಾ. ದಯಾನಂದ ಅಗಸರ ಮಾತನಾಡಿ, ಸರ್ವರನ್ನು ಸನ್ಮಾರ್ಗದತ್ತ ಕೊಂಡೊಯ್ಯಲು ಪುಸ್ತಕಗಳು ತುಂಬಾ ಉಪಯುಕ್ತವಾಗಿವೆ ಎಂದು ತಿಳಿಸಿದರು.
ಶಹಾಬಾದನಲ್ಲಿ ಮತ್ತೆ ಕಾಣಿಸಿಕೊಂಡ ಕೊರೋನಾ: ಶಾಲೆ ತೆರೆದರೆ ಕ್ರಿಮಿನಲ್ ಕೇಸ್
ಕಲ್ಯಾಣ ಕರ್ನಾಟಕ ಭಾಗದ ಕಲೆ, ಸಾಹಿತ್ಯ, ಸಂಸ್ಕೃತಿ ಬಿಸಿಲಿನಷ್ಟೇ ಪ್ರಖರ, ಗಟ್ಟಿಯಾಗಿವೆ. ದೃಷ್ಟಿ ಬದಲಾದರೆ ಸೃಷ್ಟಿ ಬದಲಾಗುತ್ತದೆ ಎಂದರು.
ಗುಲ್ಬರ್ಗ ವಿವಿ ಬೆಳವಣಿಗೆಗೆ ಎಲ್ಲರ ಸಲಹೆ, ಸಹಕಾರ ಅಗತ್ಯ. ಆಚಾರದಂತೆ ವಿಚಾರ ಇರಬೇಕು. ಅರಿವೇ ಗುರುವಾಗಬೇಕು. ಆಚಾರವೇ ಶಿಷ್ಯನಾಗಬೇಕು. ಇನ್ನೂ ಹೆಚ್ಚಿನ ಪ್ರಾತಿನಿದ್ಯ ನೀಡುವ ಮೂಲಕ ಈ ಭಾಗದ ಬೆಳವಣಿಗೆಗೆ ಕಾರಣರಾಗಬೇಕು ಎಂದರು.
ಗ್ರಾಪಂ ಸದಸ್ಯರ ಗಮನಕ್ಕೆ ತರದೇ ಅಂಗವಿಕಲರ ಸಭೆ: ಈರಣ್ಣ ಕಾರ್ಗಿಲ್ ಆಕ್ರೋಶ
ಮುಖ್ಯ ಅತಿಥಿಯಾಗಿದ್ದ ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕ ಡಾ. ಸತೀಶಕುಮಾರ ಹೊಸಮನಿ ಮಾತನಾಡಿದರು.ವಿಜಿ ಮಹಿಳಾ ಪದವಿ ಕಾಲೇಜಿನ ಪ್ರಾಚಾರ್ಯ ಡಾ. ಮಲ್ಲಿನಾಥ ತಳವಾರ ಡಾ. ರಾಜೇಂದ್ರ ಕೊಂಡಾ ವೇದಿಕೆಯಲ್ಲಿ ಇದ್ದರು.
ಡಾ. ಮಲ್ಲಿನಾಥ ತಳವಾರ ನಿರೂಪಿಸಿದರು. ಡಾ. ವಿಜಯಕುಮಾರ ಪರೂತೆ ಸ್ವಾಗತಿಸಿದರು. ಸಿ.ಎಸ್. ಮಾಲಿಪಾಟೀಲ ಪ್ರಾರ್ಥನೆಗೀತೆ ಹಾಡಿದರು. ಅಧ್ಯಕ್ಷತೆ ವಹಿಸಿದ್ದ ಡಾ. ಸ್ವಾಮಿರಾವ ಕುಲಕರ್ಣಿ ಪ್ರಾಸ್ತಾವಿಕ ಮಾತನಾಡಿದರು. ಡಾ. ಶರಣಬಸವ ವಡ್ಡನಕೇರಿ ವಂದಿಸಿದರು.
ಪ್ರೊ.ಎಚ್.ಟಿ. ಪೋತೆ, ಶ್ರೀನಿವಾಸ ಜಾಲವಾದಿ, ಡಾ. ಶಕುಂತಲಾ ಸಿದ್ಧರಾಮ ದುರ್ಗಿ, ಭೀಮರಾಯ ಹೇಮನೂರ, ಮುನಿಯಪ್ಪ ನಾಗೋಲಿ ಇವರಿಗೆ 2019ನೇ ಸಾಲಿನ ಪ್ರಶಸ್ತಿ ಪ್ರದಾನ ಮಾಡಿದರು.
ಕನ್ನಡ ನಾಡು ಲೇಖಕರ ಮತ್ತು ಓದುಗರ ಸಹಕಾರ ಸಂಘದಲ್ಲಿ 400 ಜನ ಸದಸ್ಯರಿದ್ದು, 14 ವರ್ಷಗಳಿಂದ ಸಂಘ ಅಸ್ತಿತ್ವದಲ್ಲಿ ಇದ್ದು, ಈವರೆಗೆ 126 ಪುಸ್ತಕಗಳನ್ನು ಪ್ರಕಟಿಸಲಾಗಿದೆ. ಸುಮಾರು ನಾಲ್ಕು ಲಕ್ಷ ಠೇವಣಿ ಇದೆ. ಪ್ರತಿ ವರ್ಷ 2 ಲಕ್ಷ ಲಾಭಾಂಶ ದೊರೆಯುತ್ತಿದೆ.– ಡಾ. ಸ್ವಾಮಿರಾವ ಕುಲಕರ್ಣಿ, ಸದಸ್ಯರು, ಕನ್ನಡ ನಾಡು ಲೇಖಕರ ಸಂಘ, ಕಲಬುರಗಿ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…