ಕಲಬುರಗಿಗೆ ಸರಕಾರದಿಂದ ಮಲತಾಯಿ ಧೋರಣೆ: ಸಮಿತಿ ಆಕ್ರೋಶ

ಕಲಬುರಗಿ: ೧೯೮೪ ರಲ್ಲಿ ಸರೀನ್ ಕಮಿಟಿ ವರದಿ ರೈಲ್ವೆ ಡಿವಿಜನ್ ಕಲಬುರಗಿಗೆ ನೀಡಲು ಶಿಫಾರಸ್ಸು ಮಾಡಿದರೂ ಸಹ ನಿರ್ಲಕ್ಷ ಮಾಡುತ್ತಾ ಬರಲಾಗುತ್ತಿದೆ.  ಮಲ್ಲಿಕಾರ್ಜುನ ಖರ್ಗೆಯವರು ರೈಲ್ವೆ ಮಂತ್ರಿಯಿದ್ದಾಗ  ರೈಲ್ವೆ ವಿಭಾಗೀಯ ಕಚೇರಿ ಸುಸೂತ್ರವಾಗಿ ಆಗುವ ವಾತವರಣ ಇದ್ದರೂ ಸಹ ಆಗಲಿಲ್ಲ. ಪ್ರಸ್ತುತ ಮೋದಿ ಸರಕಾರ ಕಲ್ಯಾಣ ಕರ್ನಾಟಕ ಭಾರತ ದೇಶದಲ್ಲಿಯೇ ಇದೆಯೋ ಇಲ್ಲವೋ ಎಂಬಂತೆ ನಮ್ಮ ಪ್ರದೇಶಕ್ಕೆ ಮಲತಾಯಿ ಧೋರಣೆ ಮಾಡುತ್ತಿರುವುದು ಕಲ್ಯಾಣ ಕರ್ನಾಟಕ ಜನಮಾನಸಕ್ಕೆ ಅತೀವ ನೋವುಂಟಾಗಿದೆ ಎಂದು ಹೈದ್ರಾಬಾದ್ ಕರ್ನಾಟಕ ಸಂಘರ್ಷ ಸಮಿತಿ ಸಂಸ್ಥಾಪಕ ಅಧ್ಯಕ್ಷರಾದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

೨೦೨೧ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ ಕಲಬುರಗಿಗೆ ರೈಲ್ವೆ ವಿಭಾಗೀಯ ಕಚೇರಿ ನೀಡುವ ಬಗ್ಗೆ ಪ್ರಸ್ತುತ ಕೇಂದ್ರ ಸರಕಾರದ ಮುಂದೆ  ಯಾವುದೇ ಪ್ರಸ್ತಾವನೆ ಇಲ್ಲ ಎಂದು ರೈಲ್ವೆ ಮಂತ್ರಿಗಳು ನಮ್ಮ ಬಹುದಿನಗಳ ಕನಸಿಗೆ ಪರೋಕ್ಷವಾಗಿ ತಿರಸ್ಕರಿಸಿದ್ದಾರೆ. ಅದರಂತೆ ಇಂದು ಕೇಂದ್ರ ಆರೋಗ್ಯ ಸಚಿವರು  ಪ್ರಶ್ನೋತ್ತರ ವೇಳೆಯಲ್ಲಿ ಕರ್ನಾಟಕಕ್ಕೆ ಮಂಜೂರು ಮಾಡಲಾದ ಏಮ್ಸ್ ರಾಜ್ಯ ಸರಕಾರ ಶಿಫಾರಸ್ಸು ಮಾಡಿರುವಂತೆ ಹುಬ್ಬಳ್ಳಿ-ಧಾರವಾಡಕ್ಕೆ ನೀಡುವ ಬಗ್ಗೆ ಉತ್ತರ ನೀಡಿರುವುದು ನಮ್ಮ ಭಾಗದ ಬಿ.ಜೆ.ಪಿ. ಮತ್ತು ಕಾಂಗ್ರೆಸ್ ನಾಯಕರಿಗೆ ಮುಖಭಂಗದ ವಿಷಯವಲ್ಲದೆ ಇವರಿಗೆ ಮುಖಂಡರನ್ನಾಗಿ ಮಾಡಿ ಸಂಸತ್ತಿಗೆ ಕಳಿಸಿರುವ ಮತದಾರರಿಗೆ ಭರಿಸಲಾರದ ನೋವುಂಟಾಗಿದೆ ಎಂದು ತಿಳಿಸಿದ್ದಾರೆ.

ವಕೀಲರ ಕಲ್ಯಾಣ ಅಭೀವೃಧ್ಧಿ ಸಂಘ ಸುರಪುರ ಅಸ್ತಿತ್ವಕ್ಕೆ

ಅಷ್ಟೇ ಅಲ್ಲದೆ ಈ ವಿಷಯಗಳನ್ನು ತೆಗೆದುಕೊಂಡು ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಹೋರಾಟ ಮಾಡುತ್ತಿರುವ ಸಾಮಾಜಿಕ ಹೋರಾಟಗಾರರಿಗೆ ಅತೀವ ದುಃಖವಾಗಿದೆ. ಸದರಿ ಗಂಭೀರ ವಿಷಯಗಳ ಬಗ್ಗೆ ಈಗಾಗಲೇ ಆಡಳಿತರೂಢ ಬಿ.ಜೆ.ಪಿ. ಪಕ್ಷ ಮುಖ್ಯಮಂತ್ರಿಗಳಲ್ಲಿ ಸರ್ವ ಪಕ್ಷಗಳ ನಿಯೋಗ ತೆಗೆದುಕೊಂಡು ಹೋಗುವ ಸಂದರ್ಭದಲ್ಲಿ ಇದಕ್ಕೆ ಗಂಭೀರವಾದ ವಿಷಯವಾಗಿ ಪರಿಗಣಿಸಲು ಸರ್ವ ಪಕ್ಷ ನಾಯಕರಲ್ಲಿ ಮತ್ತು ಏಳು ಜಿಲ್ಲೆಗಳ ಸಂಸದರು, ಶಾಸಕರಲ್ಲಿ ಸಮಿತಿ ಒತ್ತಾಯಿಸುತ್ತದೆ.

ರಾಜ್ಯ ಸರಕಾರ ನೋವಿಗೆ ಸಕರಾತ್ಮಕವಾಗಿ ಸ್ಪಂದಿಸದಿದ್ದರೆ, ಮುಂದಿನ ದಿನಗಳಲ್ಲಿ ಯಾವ ಗತ್ಯಂತರವಿಲ್ಲದೆ ಕಲ್ಯಾಣ ಕರ್ನಾಟಕದಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಸಮಿತಿ ಪರವಾಗಿ ಎಚ್ಚರಿಕೆ ನೀಡಿದ್ದಾರೆ.

emedialine

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

7 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

7 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

7 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

7 hours ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

8 hours ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420