ಕಲಬುರಗಿ: ಬ್ಯಾಂಕುಗಳ ಖಾಸಗಿಕರಣ ತಪ್ಪಿಸುವ ಮೂಲಕ ರಾಷ್ಟ್ರೀಕೃತ ಬ್ಯಾಂಕುಗಳ ಸಾವಿರಾರು ನೌಕರರ ಮನದಲ್ಲಿನ ದುಗುಡು- ದುಮ್ಮಾನ ನಿವಾರಣೆ ಮಾಡುವಂತೆ ಕೇಂದ್ರ ಸರ್ಕಾರವನ್ನು ಜೇವರ್ಗಿ ಶಾಸಕ ಡಾ. ಅಜಯ್ ಸಿಂಗ್ ಒತ್ತಾಯಿಸಿದ್ದಾರೆ.
ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರೂ ಆಗಿರುವ ಅವರು ಟ್ವೀಟ್ಟರ್ ಮೂಲಕ ಈ ಬಗ್ಗೆ ತಮ್ಮ ಅಭಿಪ್ರಾಯ ಹೊರಹಾಕಿದ್ದಾರೆ. ಇನ್ನೂ 2 ಪಬ್ಲಿಕ್ ಸೆಕ್ಟರ್ ಬ್ಯಾಂಕುಗಳ ಖಾಸಗೀಕರಣ ಮಾಡಲು ಕೇಂದ್ರ ಹೊರಟಿದೆ ಎಂಬ ಸುದ್ದಿಯೇ ಬ್ಯಾಂಕ್ ನೌಕರರ ಮನದಲ್ಲಿ ಭೀತಿ ಹುಟ್ಟು ಹಾಕಿದೆ. ಈ ವಿಚಾರದಲ್ಲಿ ಬ್ಯಾಂಕ್ ಸಿಬ್ಬಂದಿ ಹಾಗೂ ಗ್ರಾಹಕರು ಕೇಂದ್ರದಿಂದ ಸ್ಪಷ್ಟ ಭರವಸೆ ನಿರೀಕ್ಷೆಯಲ್ಲಿದ್ದಾರೆಂದೂ ಡಾ. ಅಜಯ್ ಸಿಂಗ್ ಹೇಳಿದ್ದಾರೆ.
ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಮೂರು ತಿಂಗಳ ಉಚಿತ ಹೊಲಿಗೆ ತರಬೇತಿ ಶಿಬಿರ
ಭಾರತ ಸರ್ಕಾರ ಲಾಭವನ್ನ ಖಾಸಗೀಕರಣಗೊಳಿಸುತ್ತ ಹಾನಿಯನ್ನ ರಾಷ್ಟ್ರೀಕರಣ ಮಾಡಲು ಹೊರಟಂತಿದೆ. ಪಬ್ಲಿಕ್ ಸೆಕ್ಟರ್ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವ ಕೇಂದ್ರದ ಕ್ರಮದಿಂದ ಭಾರತದ ಬಲವಾದಂತಹ ಆರ್ಥಿಕತೆಗೆ ಭಾರಿ ಪೆಟ್ಟು ಬೀಳಲಿದೆ, ಇದನ್ನು ತಪ್ಪಿಸಲೇಬೇಕಾಗಿದೆ, ಕೇಂದ್ರ ತಕ್ಷಣ ಮುಷ್ಕರ ನಿರತ ಬ್ಯಾಂಕ್ ಉದ್ಯೋಗಿಗಳೊಂದಿಗೆ ಮಾತುಕತೆ ನಡೆಸಿ ಅವರ ಮನಲ್ಲಿನ ಬೀತಿ ನಿವಾರಿಸುವ ಕೆಲಸಕ್ಕೆ ಮುಂದಾಗಲಿ ಎಂದೂ ಡಾ. ಅಜಯ್ ಸಿಂಗ್ ಟ್ವಿಟ್ಟರ್ ಸಂದೇಶದ ಮೂಲಕ ಆಗ್ರಹಿಸಿದ್ದಾರೆ.
ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…
ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…