153 ವಿದ್ಯಾರ್ಥಿಗಳಿಗೆ ಶರಣಬಸವ ವಿವಿಯ ಕ್ಯಾಂಪಸ್ ಸೆಲೆಕ್ಷನ್

ಕಲಬುರಗಿ: ಬೆಂಗಳೂರು ಮೂಲದ ಎಂಎನ್‌ಸಿ ಕ್ವೆಸ್ ಕಾರ್ಪ್ ಲಿಮಿಟೆಡ್ ಈ ನೇಮಕಾತಿ ಚಾಲನೆಯನ್ನು ನಡೆಸಿದ್ದು, ಕೋಲಾರದಲ್ಲಿ ಮೊಬೈಲ್ ಹ್ಯಾಂಡ್‌ಸೆಟ್ ಉತ್ಪಾದನಾ ಘಟಕದ ಪರವಾಗಿ ಅಭ್ಯರ್ಥಿಗಳ ನೇಮಕಾತಿಯ ಪ್ರಕ್ರಿಯೆಯನ್ನು ನಡೆಸಲಾಯಿತು.

ನೇಮಕಾತಿಯಾದ ೧೫೩ ವಿದ್ಯಾರ್ಥಿಗಳಲ್ಲಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಎಲೆಕ್ಟ್ರಾನಿಕ್ಸ್ ಆಂಡ ಕಮ್ಯುನಿಕೇಷನ್, ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್ ಆಂಡ ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ಮತ್ತು ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇ?ನ್ಸ್ (ಬಿಸಿಎ) ವಿದ್ಯಾರ್ಥಿಗಳಾಗಿದ್ದಾರೆ.
ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಶರಣಬಸವ ವಿಶ್ವವಿದ್ಯಾಲಯವು ಈ ಪ್ರದೇಶದ ಎಲ್ಲಾ ಕಾಲೇಜು ಮತ್ತು ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ ಶರಣಬಸವ ವಿಶ್ವವಿದ್ಯಾಲಯದ ಅತೀ ಹೆಚ್ಚಿನ ೧೯೭ ವಿದ್ಯಾರ್ಥಿಗಳ ನೇಮಕಾತಿಯಾಗಿತ್ತು.

ರಸ್ತೆ ದುರಸ್ಥಿ, ಪ್ಲಾಸ್ಟಿಕ್ ನಿಷೇದಿಕ್ಕೆ ಜೈ ಕರವೇ ಆಗ್ರಹ

ಕ್ಯಾಂಪಸ್ ನೇಮಕಾತಿಯಲ್ಲಿ ೧೫೩ ವಿದ್ಯಾರ್ಥಿಗಳನ್ನು ದಾಖಲೆಯ ನೇಮಕಾತಿಗಾಗಿ ಪ್ಲೇಸ್‌ಮೆಂಟ್ ಸೆಲ್ ಅಧಿಕಾರಿ ಶಿವಕುಮಾರ್ ಕಾಗಿ ಮತ್ತು ಅವರ ತಂಡವು ಕೈಗೊಂಡ ಈ ನೇಮಕಾತಿ ಪ್ರಕ್ರಿಯೆಗೆ ಅಭಿನಂದಿಸಿದ ವಿಶ್ವವಿದ್ಯಾಲಯದ ಕುಲಸಚಿವ ಡಾ.ಅನಿಲಕುಮಾರ ಬಿಡವೆ ಯಶಸ್ವಿಯಾಗಿ ಆಯ್ಕೆಯಾದ ವಿದ್ಯಾರ್ಥಿಗಳಲ್ಲಿ ಅತೀ ಹೆಚ್ಚಿನವರು ಅಂತಿಮ ವ? ವಿದ್ಯಾರ್ಥಿಗಳಾಗಿದ್ದಾರೆ. ಕೋರ್ಸ್‌ಗಳನ್ನು ಪೂರ್ಣಗೊಳಿಸಿದ ಹಾಗೂ ಉದ್ಯೋಗಾವಕಾಶಗಳಿಗಾಗಿ ಕಾಯುತ್ತಿದ್ದ ಕೆಲವು ವಿದ್ಯಾರ್ಥಿಗಳನ್ನು ಈ ನೇಮಕಾತಿ ಚಾಲನೆಯಲ್ಲಿ ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.

ಒಟ್ಟು ೧೫೩ ವಿದ್ಯಾರ್ಥಿಗಳಲ್ಲಿ ೧೨ ವಿದ್ಯಾರ್ಥಿಗಳು ಬಿಸಿಎ ವಿಭಾಗಕ್ಕೆ ಸೇರಿದವರು. ನೇಮಕಾತಿ ಚಾಲನೆಯ ಮತ್ತೊಂದು ವೈಶಿ?ವೆಂದರೆ ಆಯ್ದ ವಿದ್ಯಾರ್ಥಿಗಳಲ್ಲಿ ೭೦ ಪ್ರತಿಶತ ಯುವತಿಯರು ಮತ್ತು ಉಳಿದ ೩೦ ಪ್ರತಿಶತ ಯುವಕರಾಗಿದ್ದಾರೆ.

ರಾಷ್ಟ್ರೀಕೃತ ಬ್ಯಾಂಕ್ ನೌಕರರ ಮನದ ಭೀತಿ ನಿವಾರಿಸಿರಿ: ಶಾಸಕ ಅಜಯ್ ಸಿಂಗ್

ವಿಶ್ವವಿದ್ಯಾನಿಲಯದ ಕುಲಾಧಿಪತಿ ಡಾ. ಶರಣಬಸವಪ್ಪ ಅಪ್ಪಾಜಿ ಮತ್ತು ಶರಣಬಸವೇಶ್ವರ ವಿದ್ಯಾವರ್ದಕ ಸಂಘದ ಚೇರಪರ್ಸನ್‌ರಾದ ಡಾ. ದಾಕ್ಷಾಯಿಣಿ ಅವ್ವಾಜಿ, ಮತ್ತು ಸಂಘದ ಕಾರ್ಯದರ್ಶಿ ಮತ್ತು ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ಸದಸ್ಯರಾದ ಬಸವರಾಜ ದೇಶಮುಖ ವಿದ್ಯಾರ್ಥಿಗಳ ಯಶಸ್ವಿ ನೇಮಕಾತಿಗಾಗಿ ಶ್ಲಾಘಿಸಿ, ಉಪಕುಲಪತಿ ಡಾ. ನಿರಂಜನ ವಿ ನಿಷ್ಠಿ, ಸಮಕುಲಪತಿ ಡಾ. ವಿ.ಡಿ.ಮೈತ್ರಿ, ಕುಲಸಚಿವ ಡಾ. ಅನೀಲಕುಮಾರ ಬಿಡವೆ, ಮೌಲ್ಯಮಾಪನ ಕುಲಸಚಿವ ಡಾ.ಲಿಂಗರಾಜ ಶಾಸ್ತ್ರಿ, ಡೀನ ಡಾ.ಲಕ್ಷ್ಮಿ ಪಾಟೀಲ ಮಾಕಾ ಮತ್ತು ಡಾ.ಬಸವರಾಜ ಮಠಪತಿ ಹಾಗೂ ವಿಶ್ವವಿದ್ಯಾಲಯದ ಇತರ ಅಧಿಕಾರಿಗಳ ನೇತೃತ್ವದಲ್ಲಿ ನಿರಂತರವಾಗಿ ವಿದ್ಯಾರ್ಥಿಗಳಿಗಾಗಿ ಕ್ಯಾಂಪಸ್ ಸಂದರ್ಶನಗಳನ್ನು ಆಯೊಜಿಸಲಾಗುತ್ತದೆ ಎಂದರು.

emedialine

Recent Posts

ಕಬ್ಬು ಬೆಳೆಗಾರರ ರಾಜ್ಯ ಸಮ್ಮೇಳನದ ಕರಪತ್ರ ಬಿಡುಗಡೆ

ಶಹಾಬಾದ:ಕಲಬುರಗಿಯಲ್ಲಿ ಸೆಪ್ಟೆಂಬರ್ 29 ಹಾಗೂ 30ರಂದು ನಡೆಯುವ ಅಖಿಲ ಭಾರತ ಕಬ್ಬು ಬೆಳೆಗಾರರ ಸಂಘದ ರಾಷ್ಟ್ರೀಯ ಸಮಿತಿ ಸಭೆ ಹಾಗೂ…

50 mins ago

ಕಾರ್ಮಿಕರು ರಾಜಕೀಯ ಸ್ಥಾನಮಾನ ಪಡೆದರೇ ಸಮಸ್ಯೆಗಳಿಗೆ ಪರಿಹಾರ ಸಾಧ್ಯ: ನೀಲಾ

ಕಟ್ಟಡ ಕಾರ್ಮಿಕರ 2ನೇ ಶಾಖಾ ಸಮ್ಮೇಳನ : ಕಾಪೆರ್Çರೇಟ್ ಕಂಪೆನಿಗಳಿಗೆ ಧಾರೆ ಎರೆದ ದೇಶದ ಸಂಪತ್ತು ಶಹಾಬಾದ: ರಾಜಕೀಯ ಪಕ್ಷಗಳು…

54 mins ago

ವಿಕಲಚೇತರಿಗೆ ಅನುಕಂಪ ಬೇಡ ಮನುಷ್ಯರಂತೆ ಕಾಣಿ: ಡಾ.ಗವಿಸಿದ್ಧಪ್ಪ ಪಾಟೀಲ

ಬಸವಕಲ್ಯಾಣ: ವಿಕಲಚೇತನರು ತಮ್ಮ ಅಂಗವಿಕಲತೆ ಬಗ್ಗೆ ಅಗೌರವ ತಾಳಲಾರದೇ,ಅನುಕಂಪ ತೋರಿಸದೇ ಸ್ವ ಪ್ರತಿಭೆ ಹೊಂದಿದ ಅವರಿಗೆ ಮೂಲಭೂತ ಸೌಲಭ್ಯ ಗಳನ್ನು…

11 hours ago

ಸತ್ಯ ಸಂಶೋಧಕ ಡಾ. ಎಂ.ಎಂ. ಕಲಬುರ್ಗಿ

ಕಲಬುರಗಿ: ಸ್ಥಾಪಿತ ಸಿದ್ಧಾಂತ ಹೊಡೆದು ಹಾಕಿ ಅವೈದಿಕ ವಚನ ಸಾಹಿತ್ಯವನ್ನು ಜನಮಾನಸಕ್ಕೆ ಮುಟ್ಟಿಸಿದ ಡಾ.‌ಎಂ.ಎಂ.‌ಕಲಬುರ್ಗಿ ಯವರು ಸತ್ಯದ ಸಂಶೋಧಕರಾಗಿದ್ದರು ಎಂದು…

12 hours ago

ಮಕ್ಕಳೊಂದಿಗೆ ಹುಟ್ಟ ಹುಬ್ಬ ಆಚರಿಸಿಕೊಂಡ ಡಿ.ಸಿ. ಬಿ.ಫೌಜಿಯಾ ತರನ್ನುಮ್

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಗುರುವಾರ ಸಂಜೆ ತಮ್ಮ ಹುಟ್ಟು ಹಬ್ಬವನ್ನು ಕಲಬುರಗಿ ನಗರದ ಆಳಂದ ನಾಕಾ ರಸ್ತೆಯಲ್ಲಿರುವ…

13 hours ago

ಚಿಂಚೋಳಿ ಗ್ರಾಮ ಅಡಳಿತಾಧಿಕಾರಿಗೆ ಡಿ.ಸಿ. ಪ್ರಶಂಸನಾ ಪತ್ರ; ಪಹಣಿಗೆ ಆಧಾರ್ ಜೋಡಣೆಯಲ್ಲಿ ಸಾಧನೆ

ಕಲಬುರಗಿ; ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಾದ ಪಹಣಿಗೆ ಆಧಾರ್ ಜೋಡಣೆ ಮತ್ತು ಸರ್ಕಾರಿ ಜಮೀನುಗಳ ಸಂರಕ್ಷಣೆಯ ಲ್ಯಾಂಡ್ ಬೀಟ್ ಅಪ್ಲಿಕೇಶನ್ ನಲ್ಲಿ…

13 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420